ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

​ಆಳಂದ ಗಲಭೆ ಕೇಸ್ ವಾಪಸ್: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಆಕ್ರೋಶ, ರಾಜ್ಯಪಾಲರಿಗೆ ದೂರು

On: June 2, 2026 6:09 PM
Follow Us:

ಬೆಂಗಳೂರು: ವೋಟ್ ಬ್ಯಾಂಕ್ ರಾಜಕಾರಣ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಕಲಬುರ್ಗಿಯ ಆಳಂದದಲ್ಲಿ ನಡೆದಿದ್ದ ಗಂಭೀರ ಗಲಭೆ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರವಾಗಿ ಆಕ್ಷೇಪಿಸಿದ್ದಾರೆ. ಸರ್ಕಾರದ ಈ ಜನವಿರೋಧಿ ಹಾಗೂ ಸಂವಿಧಾನವಿರೋಧಿ ನಿರ್ಧಾರವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಆಗ್ರಹಿಸಿ ಅವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

​ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಸರ್ಕಾರದ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

​ಆಳಂದದ ಪವಿತ್ರ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಸುಮಾರು ಆರು ನೂರು ವರ್ಷಗಳ ಇತಿಹಾಸವಿದೆ. ಈ ಪವಿತ್ರ ಕ್ಷೇತ್ರಕ್ಕೆ ಅಪಮಾನ ಎಸಗಿದ್ದಲ್ಲದೆ, ಅಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದ ಗಂಭೀರ ಪ್ರಕರಣಗಳಿದ್ದವು. ಪೂಜೆ ಮಾಡಲು ಜಮಾಯಿಸಿದ್ದ ಹಿಂದೂಗಳ ಮೇಲೆ ಹಾಗೂ ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಮೇಲೆಯೇ ತಲವಾರು, ಮಚ್ಚುಗಳಿಂದ ಭೀಕರ ಹಲ್ಲೆ ನಡೆಸಲಾಗಿತ್ತು. ಪೊಲೀಸ್ ವಾಹನಗಳನ್ನು ಜಖಂಗೊಳಿಸಲಾಗಿತ್ತು.

“ಇಷ್ಟೊಂದು ದೊಡ್ಡ ಮಟ್ಟದ ಹಿಂಸಾಚಾರ ನಡೆದು, ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಸರ್ಕಾರ ಅತ್ಯಂತ ಬೇಜವಾಬ್ದಾರಿಯಿಂದ ದಾಳಿಕೋರರ ಮೇಲಿನ ಕೇಸ್‌ಗಳನ್ನು ವಾಪಸ್ ಪಡೆದಿದೆ. ಇದು ಅತ್ಯಂತ ಆಘಾತಕಾರಿ ಮತ್ತು ಖಂಡನೀಯ” ಎಂದು ನಾರಾಯಣಸ್ವಾಮಿ ಹೇಳಿದರು.

​ಹಿಂದೂ-ಮುಸ್ಲಿಂ ಎಂಬ ಭೇದವಿಲ್ಲದೆ ಸಮಾಜದಲ್ಲಿ ಎಲ್ಲರೂ ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಿಸುವುದು ಸರ್ಕಾರದ ಕರ್ತವ್ಯ. ಆದರೆ, ಎಲ್ಲರಿಗೂ ನ್ಯಾಯ ಒದಗಿಸುವ ಬದಲು, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರ ಮೂಲಕ ಪತ್ರ ಕೊಡಿಸಿ ಸರ್ಕಾರ ಈ ಪ್ರಕರಣವನ್ನು ವಾಪಸ್ ಪಡೆದಿದೆ. ದಾಳಿಕೋರರಿಗೆ ಕಾನೂನಿನ ಅಡಿ ಶಿಕ್ಷೆ ಕೊಡಿಸುವ ಬದಲು ಸರ್ಕಾರವೇ ಅವರಿಗೆ ಪ್ರೋತ್ಸಾಹ ನೀಡುತ್ತಿರುವುದು ಇಡೀ ಸಮಾಜಕ್ಕೆ ಮತ್ತು ಹಿಂದುತ್ವಕ್ಕೆ ಮಾಡಿದ ಅಪಮಾನವಾಗಿದೆ ಎಂದು ಅವರು ದೂರಿದರು.

ತಾರತಮ್ಯದ ರಾಜಕಾರಣ: ಸಂಘಟನೆಗಳ ಹೋರಾಟಕ್ಕೆ ಜೈಲು, ಗಲಭೆಕೋರರಿಗೆ ಮುಕ್ತಿ?

ರಾಜ್ಯ ಸರ್ಕಾರದ ದ್ವಂದ್ವ ನೀತಿಯನ್ನು ತರಾಟೆಗೆ ತೆಗೆದುಕೊಂಡ ಅವರು ಕೆಲವು ಪ್ರಮುಖ ಉದಾಹರಣೆಗಳನ್ನು ನೀಡಿದರು:

  • ದಲಿತರ ಹೋರಾಟ: ದಲಿತರು ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಹೋರಾಟ ಮಾಡಿದರೆ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ.
  • ಕನ್ನಡಪರ ಸಂಘಟನೆಗಳು: ಕನ್ನಡದ ಉಳಿವಿಗಾಗಿ ಹೋರಾಡುವ ಕನ್ನಡ ಪರ ಸಂಘಟನೆಗಳ ಮುಖಂಡರ ಮೇಲೆ ಕಠಿಣ ಪ್ರಕರಣಗಳನ್ನು ಹಾಕಿ, ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರಂತಹವರನ್ನು ಜೈಲಿಗೆ ಕಳುಹಿಸಲಾಗುತ್ತದೆ.
  • ಗಲಭೆಕೋರರಿಗೆ ರಕ್ಷಣೆ: ಆದರೆ ಬಾಂಬ್ ಹಾಕಿದವರ, ತಲವಾರುಗಳಿಂದ ಪೊಲೀಸರ ಮೇಲೆಯೇ ಹಲ್ಲೆ ಮಾಡಿದವರ ಮೇಲಿನ ದೂರುಗಳನ್ನು ವಾಪಸ್ ಪಡೆದು ಶಿಕ್ಷೆಯಿಂದ ಮುಕ್ತಿ ನೀಡಲಾಗುತ್ತಿದೆ.

​ಇಂತಹ ನೀಚ ಓಲೈಕೆ ರಾಜಕಾರಣವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಹೀಗಾಗಿ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ಈ ದೇಶದ್ರೋಹಿ ತೀರ್ಮಾನವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಮಾನ್ಯ ರಾಜ್ಯಪಾಲರಲ್ಲಿ ವಿನಂತಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

​ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕ ಸುನಿಲ್ ವಲ್ಯಾಪುರೆ, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ಜಿ. ನಮೋಶಿ, ಬಿ.ಜಿ. ಪಾಟೀಲ್, ಶಾಸಕ ಅವಿನಾಶ್ ಜಾಧವ್, ಮಾಜಿ ಸಂಸದ ಡಾ. ಉಮೇಶ್ ಜಾಧವ್ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ್ ಪಾಟೀಲ್ ಉಪಸ್ಥಿತರಿದ್ದರು.

ಕಲ್ಬುರ್ಗಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಮುಖಂಡರಾದ ಶರಣಪ್ಪ ತಳವಾರ, ಶಿವರಾಜ ಪಾಟೀಲ್ ರದ್ದೇವಾಡಗಿ, ಸಂಜಯ್ ಮಿಸ್ಕಿನ್, ನಿತಿನ್ ಗುತ್ತೇದಾರ್, ಹರ್ಷಾನಂದ ಗುತ್ತೇದಾರ್, ಲಿಂಗರಾಜ ಬಿರಾದಾರ, ಆನಂದ ಪಾಟೀಲ್, ಬಸವರಾಜ ಬೆಣ್ಣೂರ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖ ಮುಖಂಡರು ನಿಯೋಗದಲ್ಲಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

​ದಾವಣಗೆರೆ ಜಿಲ್ಲೆಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಿ: ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಡಿಸಿಎಂ ಹಾಗೂ ಡಿ.ಜಿ. ಶಾಂತನಗೌಡ ಅವರಿಗೆ ಸಚಿವ ಸ್ಥಾನ ನೀಡಲು ಸಾಧು ಸದ್ಧರ್ಮ ವೀರಶೈವ ಸಮಾಜದ ಆಗ್ರಹ

ಚಿತ್ರದುರ್ಗದ ರೈತ ಹೋರಾಟಕ್ಕೆ ಹೊಸ ಆಶಾಕಿರಣ: ಎಸಿ ರೂಮ್‌ನಿಂದ ಅಂಗಳಕ್ಕೆ ಬಂದ ಲಕ್ಷ್ಮಣ್ ಹೂಗಾರ್

ಆಳಂದ ದರ್ಗಾ ಗಲಭೆ ಕೇಸ್ ವಾಪಸ್: ಸರ್ಕಾರದ ವಿರುದ್ಧ ಕಲಬುರ್ಗಿಯಲ್ಲಿ ಬಿಜೆಪಿ ಬೃಹತ್ ರಣಕಹಳೆ! ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ

​ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್, ಹೈಕಮಾಂಡ್‌ಗೆ ಸಚಿವ ಸಂಪುಟ ಕಸರತ್ತಿನ ‘ಹೈಟೆನ್ಷನ್’!: ‘ನಾಲ್ಕು ಡಿಸಿಎಂ’ ಸೃಷ್ಟಿ ಮತ್ತು ಕೆಪಿಸಿಸಿ ಸಾರಥ್ಯದ ಕಗ್ಗಂಟು!

​ಜೂನ್ 3ಕ್ಕೆ ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕ: ಆಚರಣೆಗಿಂತ ಜವಾಬ್ದಾರಿ ಮುಖ್ಯ ಎಂದ ಹೈಕಮಾಂಡ್; ಏನಿದು ವರಿಷ್ಠರ ಕಟ್ಟುನಿಟ್ಟಿನ ಆದೇಶ?

ಭದ್ರಾವತಿಯ ಜನಪ್ರಿಯ ನಾಯಕ ಬಿ.ಕೆ. ಸಂಗಮೇಶ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಒತ್ತಾಯ

Leave a Comment