ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

​ಮೊಬೈಲ್ ಗೇಮ್ ಹುಚ್ಚು: ಬುದ್ಧಿವಾದ ಹೇಳಿದ ಹೆತ್ತ ತಂದೆ, ಅಕ್ಕನನ್ನೇ ಚಾಕುವಿನಿಂದ ಇರಿದು ಕೊಂದ 17ರ ಅಪ್ರಾಪ್ತ!

On: June 8, 2026 6:09 PM
Follow Us:

ಗಂಗಾವತಿ: ಮೊಬೈಲ್ ಗೇಮಿಂಗ್ ವ್ಯಸನ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯನ್ನು ಎಷ್ಟು ಕ್ರೂರಿಗಳನ್ನಾಗಿ ಮಾಡುತ್ತಿದೆ ಎಂಬುದಕ್ಕೆ ರಾಜ್ಯದಲ್ಲೇ ನಡುಕ ಹುಟ್ಟಿಸುವಂತಹ ಭೀಕರ ಘಟನೆಯೊಂದು ತಾಲೂಕಿನ ಹೊಸ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಮೊಬೈಲ್‌ನಲ್ಲಿ ಸದಾ ಆನ್‌ಲೈನ್ ಗೇಮ್ ಆಡದಂತೆ ಬುದ್ಧಿವಾದ ಹೇಳಿದ ಹೆತ್ತ ತಂದೆ ಮತ್ತು ಅಕ್ಕನನ್ನು 17 ವರ್ಷದ ಅಪ್ರಾಪ್ತ ಬಾಲಕನೊಬ್ಬ ಚಾಕುವಿನಿಂದ ಇರಿದು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದಾನೆ. ತಡೆಯಲು ಬಂದ ತಾಯಿಗೂ ಗಂಭೀರ ಗಾಯಗಳಾಗಿದ್ದು, ಸಾವು-ಬದುಕಿನ ನಡುವೆ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದಾರೆ.

​ಮೃತ ತಂದೆ ಖಾಸಗಿ ಶಾಲೆಯೊಂದರಲ್ಲಿ ಅಡುಗೆ ಭಟ್ಟರಾಗಿ ಕೆಲಸ ಮಾಡುತ್ತಿದ್ದ ವೆಂಕಟ ನಾಯ್ಡು ಹಾಗೂ ಅವರ ಪದವಿ ವ್ಯಾಸಂಗ ಮಾಡುತ್ತಿದ್ದ ಪುತ್ರಿ ಪ್ರಗತಿ ಎಂದು ಗುರುತಿಸಲಾಗಿದೆ. ವೆಂಕಟ ನಾಯ್ಡು ಅವರು ತಮ್ಮ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಹೊಸ ಅಯೋಧ್ಯೆ ಗ್ರಾಮದಲ್ಲಿ ಜಂಟಿ ಕುಟುಂಬವಾಗಿ ವಾಸವಾಗಿದ್ದರು. ಆರೋಪಿ ಬಾಲಕ ತಂದೆ ಕೆಲಸ ಮಾಡುತ್ತಿದ್ದ ಅದೇ ಖಾಸಗಿ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು.

ಆರೋಪಿ ಬಾಲಕ ತೀವ್ರವಾಗಿ ಆನ್‌ಲೈನ್ ಗೇಮ್‌ಗಳ ದಾಸನಾಗಿದ್ದನು. ಓದು ಬರಹ ಬಿಟ್ಟು ಸದಾ ಮೊಬೈಲ್‌ನಲ್ಲಿ ಮುಳುಗಿರುತ್ತಿದ್ದ ಮಗನ ನಡವಳಿಕೆಯಿಂದ ಬೇಸತ್ತಿದ್ದ ಪೋಷಕರು, ಶನಿವಾರ ಸಂಜೆ ಆತನಿಗೆ ಬುದ್ಧಿವಾದ ಹೇಳಿದ್ದಾರೆ. ಈ ವೇಳೆ ಮನೆಯಲ್ಲಿ ತೀವ್ರ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

​ಯಥಾಪ್ರಕಾರ ಶನಿವಾರ ರಾತ್ರಿ ಇಡೀ ಕುಟುಂಬ ಒಟ್ಟಿಗೆ ಕುಳಿತು ಹಣ್ಣು ತಿಂದು, ರಾತ್ರಿ ಊಟ ಮುಗಿಸಿದೆ. ತದನಂತರ ವೆಂಕಟ ನಾಯ್ಡು, ಅವರ ಪತ್ನಿ, ಮಗಳು ಪ್ರಗತಿ ಹಾಗೂ ಆರೋಪಿ ಮಗ ಒಂದು ಕೊಠಡಿಯಲ್ಲಿ ಮಲಗಿದ್ದಾರೆ. ವೆಂಕಟ ನಾಯ್ಡು ಅವರ ವೃದ್ಧ ಪೋಷಕರು (ತಾತಾರಾವ್ ಮತ್ತು ಅವರ ಪತ್ನಿ) ಮತ್ತೊಂದು ಕೊಠಡಿಯಲ್ಲಿ ಮಲಗಿದ್ದರು.

​ರಾತ್ರಿ ಸುಮಾರು 10:30ರ ಸುಮಾರಿಗೆ ವೆಂಕಟ ನಾಯ್ಡು ಮಲಗಿದ್ದ ಕೊಠಡಿಯಿಂದ “ಬಾಗಿಲು ತೆರೆಯಿರಿ, ಕಾಪಾಡಿ” ಎಂದು ಜೋರಾಗಿ ಕಿರುಚುವ ಧ್ವನಿ ಕೇಳಿಸಿದೆ. ಗಾಬರಿಗೊಂಡ ತಂದೆ ತಾತಾರಾವ್ ತಕ್ಷಣ ಓಡಿಬಂದು ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ. ಆದರೆ ಒಳಗಿನಿಂದ ಬಾಗಿಲು ಲಾಕ್ ಆಗಿದ್ದರಿಂದ ಅದು ಸಾಧ್ಯವಾಗಿಲ್ಲ. ಕೂಡಲೇ ಅವರು ನೆರೆಹೊರೆಯವರನ್ನು ಸಹಾಯಕ್ಕೆ ಕರೆದಿದ್ದಾರೆ.

​ನೆರೆಹೊರೆಯವರ ಸಹಾಯದಿಂದ ಕೊಠಡಿಯ ಬಾಗಿಲನ್ನು ಬಲವಂತವಾಗಿ ಮುರಿದು ಒಳಹೋದಾಗ ಅಲ್ಲಿ ಕಂಡ ದೃಶ್ಯ ನೆರೆದವರ ಎದೆ ಝಲ್ಲೆನಿಸುವಂತಿತ್ತು. ವೆಂಕಟ ನಾಯ್ಡು, ಅವರ ಪತ್ನಿ ಹಾಗೂ ಮಗಳು ಪ್ರಗತಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತೀವ್ರವಾಗಿ ಇರಿತಕ್ಕೊಳಗಾಗಿದ್ದ ಮಗಳು ಪ್ರಗತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರೆ, ತಂದೆ ವೆಂಕಟ ನಾಯ್ಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ತಾಯಿ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

​ಘಟನೆ ನಡೆದ ತಕ್ಷಣವೇ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್. ಅರಸಿದ್ಧಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿ ಮಾಹಿತಿ ಕಲೆಹಾಕಿದ್ದಾರೆ. ಮೃತರ ತಂದೆ ತಾತಾರಾವ್ ನೀಡಿದ ದೂರಿನ ಮೇರೆಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

​”ಈ ಘಟನೆಯು ಕೇವಲ ಒಂದು ಕುಟುಂಬದ ದುರಂತವಲ್ಲ, ಬದಲಿಗೆ ಇಡೀ ಸಮಾಜಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ಮಕ್ಕಳು ಆನ್‌ಲೈನ್ ಗೇಮ್‌ಗಳಿಗೆ ದಾಸರಾದಾಗ ಅವರಲ್ಲಿ ಹಿಂಸಾತ್ಮಕ ಪ್ರವೃತ್ತಿ ಮತ್ತು ಕೋಪ ನಿಯಂತ್ರಣ ತಪ್ಪುತ್ತದೆ” ಎಂದು ಮನೋವಿಜ್ಞಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಪೋಷಕರು ಮಕ್ಕಳ ಮೊಬೈಲ್ ಬಳಕೆಯ ಮೇಲೆ ನಿಗಾ ಇಡುವುದು ಸದ್ಯದ ತುರ್ತು ಅಗತ್ಯವಾಗಿದೆ.

K.M.Sathish Gowda

Join WhatsApp

Join Now

Facebook

Join Now

Read more

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ: ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ – ಭದ್ರಾವತಿ ಪೊಲೀಸರ ಚಾಣಾಕ್ಷ ತನಿಖೆಗೆ ದೊರೆತ ಐತಿಹಾಸಿಕ ಜಯ,.!

ಶಿವಮೊಗ್ಗ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ: 24 ಗಂಟೆಯೊಳಗೆ ಸರಗಳ್ಳರ ಬಂಧನ

“ನೈಟಿ ಧರಿಸಿದ್ದಕ್ಕೆ ಕೋಪ: ಹೆಂಡತಿಯನ್ನು ಜೀವಂತ ಸುಟ್ಟ ಪತಿ”

ನಟ ದುನಿಯಾ ವಿಜಯ್ ಸೇರಿದಂತೆ ಹಲವು ಮಂದಿ ಶೇರ್ ಮಾಡಿದ ಝಾಂಬಿ ಡ್ರಗ್ ಸುಳ್ಳು ವಿಡಿಯೋ ಪ್ರಕರಣ: ವೈರಲ್ ಮಾಡಿದವರ ವಿರುದ್ಧ ಕ್ರಮಕ್ಕೆ ಪೊಲೀಸ್ ಆಯುಕ್ತರ ಎಚ್ಚರಿಕೆ

“ಭದ್ರಾವತಿಯಲ್ಲಿ ಸಾಲದ ಕಿರುಕುಳಕ್ಕೆ ಜೀವ ಬಲಿ,.! 5 ವರ್ಷಗಳ ಬಳಿಕ ಆರೋಪಿತರಿಗೆ 10 ವರ್ಷ ಜೈಲು”

ಹನುಮಂತಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: ಅಡಕೆ ತೋಟದಲ್ಲಿ ಉರಿದುಹೋದ ಜೀವ – ಶಿವಮೊಗ್ಗ ಉಪನ್ಯಾಸಕರ ರಹಸ್ಯ ಸಾವು, ಕೊಲೆ ಶಂಕೆ‌,.!

Leave a Comment