ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸತತ 4399 ದಿನಗಳ ಸೇವೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಾಧನೆಗೆ ಶಿವಮೊಗ್ಗದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

On: June 11, 2026 10:24 PM
Follow Us:

ಶಿವಮೊಗ್ಗ : ದೇಶದ ಅತ್ಯಂತ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿಗಳ ಪೈಕಿ ವಿಶಿಷ್ಟ ಮೈಲಿಗಲ್ಲು ಸಾಧಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗೌರವಾರ್ಥ ಶಿವಮೊಗ್ಗ ನಗರದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ಆಯೋಜಿಸಲಾಯಿತು.

2026ರ ಜೂನ್ 10ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸತತ 4399 ದಿನಗಳ ಕಾಲ ದೇಶದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿರುವ ಹಿನ್ನೆಲೆಯಲ್ಲಿ, ಅವರ ಆರೋಗ್ಯ, ದೀರ್ಘಾಯುಷ್ಯ ಹಾಗೂ ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಶಿವಮೊಗ್ಗ ನಗರದ ಕೋಟೆ ಶ್ರೀ ಸೀತಾರಾಮ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಜಿಲ್ಲಾಧ್ಯಕ್ಷ ಜಗದೀಶ್ ಎನ್.ಕೆ. ಅವರ ನೇತೃತ್ವದಲ್ಲಿ ಬುಧವಾರ ಬೆಳಿಗ್ಗೆ 8.30ಕ್ಕೆ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವೇದಮಂತ್ರಗಳ ಘೋಷದ ನಡುವೆ ವಿಶೇಷ ಪೂಜೆ, ಅರ್ಚನೆ ಮತ್ತು ಮಂಗಳಾರತಿ ನೆರವೇರಿಸಲಾಯಿತು. ದೇಶದ ಸಮಗ್ರ ಪ್ರಗತಿ, ಜನಕಲ್ಯಾಣ ಹಾಗೂ ಭಾರತದ ಉಜ್ವಲ ಭವಿಷ್ಯಕ್ಕಾಗಿ ಭಕ್ತರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿಯವರ ಆರೋಗ್ಯ, ಆಯುಷ್ಯಕ್ಕಾಗಿ ಸಾಮೂಹಿಕ ಪ್ರಾರ್ಥನೆ: ಎನ್.ಕೆ.ಜಗದೀಶ್

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ ಅವರು, “ಕಳೆದ ಹನ್ನೆರಡು ವರ್ಷಗಳ ಅವಧಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ತನ್ನ ಪ್ರಭಾವವನ್ನು ಗಣನೀಯವಾಗಿ ವಿಸ್ತರಿಸಿಕೊಂಡಿದೆ. ಆರ್ಥಿಕತೆ, ಮೂಲಸೌಕರ್ಯ ಅಭಿವೃದ್ಧಿ, ತಂತ್ರಜ್ಞಾನ, ರಕ್ಷಣಾ ಕ್ಷೇತ್ರ, ವಿದೇಶಾಂಗ ನೀತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದೇಶವು ಹೊಸ ಎತ್ತರಗಳನ್ನು ತಲುಪಿದ್ದು, ಕೋಟ್ಯಂತರ ಭಾರತೀಯರ ಬದುಕಿನಲ್ಲಿ ಹೊಸ ಆಶಾವಾದ ಮತ್ತು ಆತ್ಮವಿಶ್ವಾಸವನ್ನು ಮೂಡಿಸಿದೆ,” ಎಂದು ಹೇಳಿದರು.

ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ‘ವಿಕಸಿತ ಭಾರತ’ ಸಂಕಲ್ಪವು ಪ್ರಧಾನಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಇನ್ನಷ್ಟು ವೇಗ ಪಡೆದು ಯಶಸ್ವಿಯಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸಲಾಯಿತು. ದೇಶದ ಅಭಿವೃದ್ಧಿಯ ಪಯಣವು ನಿರಂತರವಾಗಿ ಮುಂದುವರಿಯಲಿ ಹಾಗೂ ರಾಷ್ಟ್ರದ ಜನತೆಗೆ ಶಾಂತಿ, ಸಮೃದ್ಧಿ ಮತ್ತು ಸುಖ-ಸಂತೋಷ ದೊರೆಯಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಎಸ್. ಜ್ಞಾನೇಶ್ವರ್, ಎನ್.ಜಿ. ನಾಗರಾಜ್, ಸ್ಥಳೀಯ ಸಂಸ್ಥೆಯ ಮಾಜಿ ಸದಸ್ಯ ಪ್ರಭು, ನಗರ ಪ್ರಧಾನ ಕಾರ್ಯದರ್ಶಿಗಳಾದ ದೀನದಯಾಳು ಮತ್ತು ಮಂಜುನಾಥ್ ನವಲೆ, ಕಾರ್ಯಕ್ರಮದ ಉಸ್ತುವಾರಿಗಳಾದ ಪುರುಷೋತ್ತಮ್ ಹಾಗೂ ರಶ್ಮಿ ಶ್ರೀನಿವಾಸ್ ಸೇರಿದಂತೆ ಪ್ರಮುಖರಾದ ಬಾಲು, ಮಹೇಶ್ ಮತ್ತು ಪಕ್ಷದ ವಿವಿಧ ಹಂತಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಪೂಜೆ ಮತ್ತು ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

K.M.Sathish Gowda

Join WhatsApp

Join Now

Facebook

Join Now

Read more

ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರದಿಂದ ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ: ಬಿ.ವೈ. ವಿಜಯೇಂದ್ರ ಆಕ್ರೋಶ

​’ಭ್ರಷ್ಟಾಚಾರ ರಹಿತ ಆಡಳಿತ, ಜಾಗತಿಕ ಆರ್ಥಿಕ ಶಕ್ತಿಯಾಗಿ ಭಾರತ’: ಪ್ರಧಾನಿ ನರೇಂದ್ರ ಮೋದಿ ಅವರ ನಿರಂತರ ಸೇವೆಗೆ ವಿಜಯೇಂದ್ರ ಮೆಚ್ಚುಗೆ

​ಬಿ.ಝಡ್. ಜಮೀರ್ ಅಹಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಗ್ರಹ: ಶಿವಮೊಗ್ಗದಲ್ಲಿ ಮುಸ್ಲಿಂ ಸಮುದಾಯದಿಂದ ಬೃಹತ್ ಪ್ರತಿಭಟನೆ

​ಶೋಷಿತರ ಧ್ವನಿ ಪ್ರೊ. ಬಿ. ಕೃಷ್ಣಪ್ಪನವರ ಸಾಮಾಜಿಕ ನ್ಯಾಯದ ಹೋರಾಟ ಹಾಗೂ ಆಶಯಗಳು ಇಂದಿಗೂ ಆದರ್ಶ: ಸಿ.ಎಸ್. ಷಡಾಕ್ಷರಿ

ರೈತರ ಪ್ರಣಾಳಿಕೆ ಈಡೇರಿಸಿ, ಬಾಕಿ ಹಣ ತಕ್ಷಣ ಬಿಡುಗಡೆ ಮಾಡಿ; ವಿದ್ಯುತ್ ಖಾಸಗೀಕರಣ ಕೈಬಿಡಿ, ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಸರ್ಕಾರಕ್ಕೆ ಹೆಚ್.ಆರ್. ಬಸವರಾಜಪ್ಪ ಎಚ್ಚರಿಕೆ

​ಯುವಜನರ ಭವಿಷ್ಯದೊಂದಿಗೆ ಚೆಲ್ಲಾಟವಾಡಿದರೆ ಕಠಿಣ ಕ್ರಮ: ಪಬ್, ಬಾರ್‌ಗಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

Leave a Comment