ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಜನಪರ ಹೋರಾಟಕ್ಕೆ ಹೊಸ ರೂಪುರೇಷೆ: ಎಚ್.ಆರ್. ಬಸವರಾಜಪ್ಪ ಅಧ್ಯಕ್ಷತೆಯಲ್ಲಿ ಸಂಯುಕ್ತ ಹೋರಾಟ– ಕರ್ನಾಟಕ ಕೋರ್ ಕಮಿಟಿ ಸಭೆ

On: July 10, 2026 10:42 PM
Follow Us:

ಶಿವಮೊಗ್ಗ: ಸಂಯುಕ್ತ ಹೋರಾಟ–ಕರ್ನಾಟಕದ ಕೋರ್ ಕಮಿಟಿ ಸಭೆಯು ಇತ್ತೀಚೆಗೆ ಶಿವಮೊಗ್ಗದಲ್ಲಿ ಸಂಘಟನೆಯ ಅಧ್ಯಕ್ಷರಾದ ಎಚ್.ಆರ್. ಬಸವರಾಜಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಜ್ಯದ ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಗ್ರಾಮೀಣ ಜನರ ಬದುಕಿಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ರೂಪುರೇಷೆಗಳ ಬಗ್ಗೆ ಸದಸ್ಯರು ಅಭಿಪ್ರಾಯ ವಿನಿಮಯ ನಡೆಸಿದರು.

ಸಭೆಯಲ್ಲಿ ಪ್ರಮುಖವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಪೊರೇಟ್ ಪರವಾದ ಕೃಷಿ ನೀತಿಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಮುಕ್ತ ವಾಣಿಜ್ಯ ವ್ಯಾಪಾರ ಒಪ್ಪಂದಗಳಿಂದ ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರ ಮೇಲಾಗುವ ದುಷ್ಪರಿಣಾಮಗಳು ಹಾಗೂ ಪ್ರಸ್ತುತ ಕೃಷಿ ಮಾರುಕಟ್ಟೆ ಚೌಕಟ್ಟಿನಲ್ಲಿರುವ ಲೋಪದೋಷಗಳ ಬಗ್ಗೆ ನಾಯಕರು ಸುದೀರ್ಘವಾಗಿ ಚರ್ಚಿಸಿದರು. ರೈತರ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಆಗುತ್ತಿರುವ ಅನ್ಯಾಯ ಹಾಗೂ ಕೃಷಿ ಭೂಮಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ವಹಿಸಿಕೊಡುವ ನೀತಿಗಳ ವಿರುದ್ಧ ವ್ಯವಸ್ಥಿತ ಹೋರಾಟ ರೂಪಿಸಲು ನಿರ್ಧರಿಸಲಾಯಿತು.

ವಿದ್ಯುತ್ ವಲಯದ ಖಾಸಗೀಕರಣದಿಂದ ಸಾಮಾನ್ಯ ಜನರಿಗೆ ಹಾಗೂ ರೈತರ ಉಚಿತ ವಿದ್ಯುತ್ ಸೌಲಭ್ಯಕ್ಕೆ ಎದುರಾಗಲಿರುವ ಕಂಟಕಗಳ ಬಗ್ಗೆ ಸಭೆಯಲ್ಲಿ ಗಂಭೀರ ಆಲೋಚನೆ ನಡೆಸಲಾಯಿತು. ಇದರೊಂದಿಗೆ, ಇತ್ತೀಚಿನ ಕಾರ್ಮಿಕ ನೀತಿಗಳು ಕಾರ್ಮಿಕರ ಹಕ್ಕುಗಳನ್ನು ಕಸಿಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಮಿತಿಯು, ರೈತರು ಮತ್ತು ಕಾರ್ಮಿಕರು ಒಂದಾಗಿ ಈ ನೀತಿಗಳ ವಿರುದ್ಧ ಧ್ವನಿ ಎತ್ತಬೇಕಾದ ಅನಿವಾರ್ಯತೆಯನ್ನು ಚರ್ಚೆ ಮಾಡಲಾಯಿತು.

ಸತತ ಬರಗಾಲ ಮತ್ತು ಆರ್ಥಿಕ ಸಂಕಷ್ಟದಿಂದ ಕಂಗಾಲಾಗಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂಬ ಬೇಡಿಕೆಯನ್ನು ಸಭೆಯಲ್ಲಿ ಬಲವಾಗಿ ಮಂಡಿಸಲಾಯಿತು. ಗ್ರಾಮೀಣ ಭಾಗದ ಜೀವನಾಡಿಯಾಗಿರುವ ‘ಮನ್ ರೇಗಾ’ (ಉದ್ಯೋಗ ಖಾತರಿ) ಯೋಜನೆಯಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಹಾಗೂ ದಿನಗೂಲಿಯನ್ನು ಹೆಚ್ಚಿಸಬೇಕೆಂದು ಒತ್ತಾಯಿಸಲಾಯಿತು. ಇದೇ ಸಂದರ್ಭದಲ್ಲಿ ಮಹಿಳಾ ಸಬಲೀಕರಣಕ್ಕೆ ಪೂರಕವಾಗಿ ಮಹಿಳಾ ಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ವಿಚಾರದ ಕುರಿತೂ ಪ್ರಮುಖ ಚರ್ಚೆಗಳು ನಡೆದವು.

ಒಟ್ಟಾರೆಯಾಗಿ ಶೋಷಿತ ವರ್ಗಗಳ, ರೈತರ ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ‘ಸಂಯುಕ್ತ ಹೋರಾಟ-ಕರ್ನಾಟಕ’ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವುದು ಅತ್ಯಗತ್ಯ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಮುಂಬರುವ ದಿನಗಳಲ್ಲಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹಂತ ಹಂತವಾಗಿ ಬೃಹತ್ ಚಳವಳಿಗಳನ್ನು ಹಮ್ಮಿಕೊಳ್ಳಲು ಕೋರ್ ಕಮಿಟಿ ಒಮ್ಮತದ ನಿರ್ಧಾರ ಕೈಗೊಂಡಿತು.

ಈ ಪ್ರಮುಖ ಸಭೆಯಲ್ಲಿ ಸಂಯುಕ್ತ ಹೋರಾಟ-ಕರ್ನಾಟಕದ ರಾಜ್ಯ ಕೋರ್ ಕಮಿಟಿ ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖ ಸದಸ್ಯರು ಉಪಸ್ಥಿತರಿದ್ದು, ತಮ್ಮ ಭಾಗದ ಪ್ರಾದೇಶಿಕ ಸಮಸ್ಯೆಗಳನ್ನು ಹಂಚಿಕೊಳ್ಳುವ ಮೂಲಕ ಚರ್ಚೆಯನ್ನು ಯಶಸ್ವಿಗೊಳಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ರಾಜಕೀಯ, ಶಿಕ್ಷಣ, ಸಹಕಾರ ಹಾಗೂ ಸಮಾಜಸೇವೆಯ ನಾಲ್ಕು ದಶಕಗಳ ಅಚಲ ಪಯಣ: ಸೇವೆ, ಸಂಸ್ಕಾರ, ಸಂಘಟನೆಗೆ ಮತ್ತೊಂದು ಹೆಸರು – ಎಸ್.ಪಿ. ದಿನೇಶ್

ರೋಟರಿ ಬಯೋ ಡೈವರ್ಸಿಟಿ ಪಾರ್ಕಿನಲ್ಲಿ ಹಸಿರು ಸಂಕಲ್ಪ; ಪರಿಸರ ಉಳಿದರೆ ಮಾತ್ರ ಮಾನವ ಬದುಕು ಸುರಕ್ಷಿತ: ಡಿ.ಕೆ. ಶೇಷಗಿರಿ

ಆಂತರಿಕ ಭಿನ್ನಮತಕ್ಕೆ ಬ್ರೇಕ್: ಬಿಜೆಪಿ ಬಲವರ್ಧನೆಗೆ ಸುಧಾಕರ್-ವಿಶ್ವನಾಥ್ ಭಿನ್ನಾಭಿಪ್ರಾಯ ಮರೆತು ಒಟ್ಟಾಗಿ ಸಾಗಲು ನಿರ್ಧಾರ

ಮತದಾರರ ಗಮನಕ್ಕೆ: ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಿರ್ಲಕ್ಷಿಸಿದರೆ ಕಳಚಲಿದೆ ಮತದಾನದ ಹಕ್ಕು!

​ಹಿಂದಿನ ಸಮೀಕ್ಷಾ ವರದಿಗಳಂತೆ ಕಸದ ಬುಟ್ಟಿಗೆ ಹಾಕಬೇಡಿ: ಮಧುಸೂದನ್ ನಾಯಕ್ ವರದಿ ಅಧಿವೇಶನದಲ್ಲಿ ಮಂಡಿಸಲು ಸುನಿಲ್ ಕುಮಾರ್ ಆಗ್ರಹ

ಫ್ರೆಂಡ್ಸ್ ಸೆಂಟರ್ ಸಂಸ್ಥೆಯ 60ನೇ ವಾರ್ಷಿಕೋತ್ಸವ ಸಂಭ್ರಮ; ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಮಾದರಿ ಸಂಸ್ಥೆ: ಶಾಸಕ ಎಸ್.ಎನ್. ಚನ್ನಬಸಪ್ಪ

Leave a Comment