ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕಬ್ಬಳ ಗ್ರಾಮದಲ್ಲಿ ನೂತನ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕಲಶಾರೋಹಣ; ಧಾರ್ಮಿಕ ಕೇಂದ್ರಗಳ ಜತೆಗೆ ಮಕ್ಕಳ ಶಿಕ್ಷಣಕ್ಕೂ ಆದ್ಯತೆ ನೀಡಲು ಜಗದ್ಗುರು ಡಾ. ಶಾಂತವೀರ ಮಹಾಸ್ವಾಮೀಜಿ ಕರೆ

On: August 22, 2026 10:30 PM
Follow Us:

ಹೊಸದುರ್ಗ: ತಾಲೂಕಿನ ಕಸಬಾ ಹೋಬಳಿಯ ಕಬ್ಬಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ಉದ್ಘಾಟನೆ ಹಾಗೂ ಕಲಶಾರೋಹಣ ಮಹೋತ್ಸವವು ಶನಿವಾರ ಅಪಾರ ಭಕ್ತಿ-ಶ್ರದ್ಧೆ, ಸಂಭ್ರಮ ಮತ್ತು ಧಾರ್ಮಿಕ ವಿಜೃಂಭಣೆಯಿಂದ ನೆರವೇರಿತು.

ಗ್ರಾಮದ ಭಕ್ತರು ಹಾಗೂ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಸೇವಾ ಟ್ರಸ್ಟ್‌ನ ಸಹಕಾರದೊಂದಿಗೆ ನಿರ್ಮಿಸಲಾದ ನೂತನ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಪೂಜೆ, ಹೋಮ-ಹವನ ಸೇರಿದಂತೆ ವೈದಿಕ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ಹೊಸದುರ್ಗ ಕುಂಚಟಿಗ ಮಠದ ಜಗದ್ಗುರು ಡಾ. ಶಾಂತವೀರ ಮಹಾಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಗ್ರಾಮೀಣ ಬದುಕಿನಲ್ಲಿ ದೈವಭಕ್ತಿ, ಧಾರ್ಮಿಕ ಆಚರಣೆಗಳು ಮತ್ತು ಸಾಂಸ್ಕೃತಿಕ ಪರಂಪರೆಗಳು ಅವಿಭಾಜ್ಯ ಅಂಗಗಳಾಗಿವೆ ಎಂದು ಅವರು ಹೇಳಿದರು.

ದೇವಾಲಯಗಳು ಕೇವಲ ಪೂಜಾ ಸ್ಥಳಗಳಾಗಿರದೆ, ಸಮಾಜದಲ್ಲಿ ಭಕ್ತಿ, ನಂಬಿಕೆ, ನೈತಿಕ ಮೌಲ್ಯಗಳು ಹಾಗೂ ಸಾಮಾಜಿಕ ಸಾಮರಸ್ಯವನ್ನು ಬೆಳೆಸುವ ಮಹತ್ವದ ಕೇಂದ್ರಗಳಾಗಿವೆ. ಗ್ರಾಮಸ್ಥರು ಒಗ್ಗಟ್ಟಿನಿಂದ ಇಂತಹ ಧಾರ್ಮಿಕ ಕಾರ್ಯಗಳನ್ನು ಕೈಗೊಳ್ಳುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ತಿಳಿಸಿದರು.

ದೇವಾಲಯಗಳ ನಿರ್ಮಾಣ ಮತ್ತು ಧಾರ್ಮಿಕ ಚಟುವಟಿಕೆಗಳಿಗೆ ಆದ್ಯತೆ ನೀಡುವುದರ ಜತೆಗೆ ಮಕ್ಕಳ ಉತ್ತಮ ಶಿಕ್ಷಣದ ಬಗ್ಗೆಯೂ ಪೋಷಕರು ಹಾಗೂ ಸಮಾಜ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಶ್ರೀಗಳು ಕರೆ ನೀಡಿದರು. ಉತ್ತಮ ಶಿಕ್ಷಣ ಪಡೆದ ಮಕ್ಕಳು ಸಮಾಜದ ಭವಿಷ್ಯವನ್ನು ರೂಪಿಸಲಿದ್ದು, ಧಾರ್ಮಿಕ ಸಂಸ್ಕಾರ ಮತ್ತು ಶಿಕ್ಷಣ ಎರಡೂ ಜೀವನದ ಬೆಳವಣಿಗೆಗೆ ಅಗತ್ಯ ಎಂದರು.

ಈ ವರ್ಷ ಉತ್ತಮ ಮಳೆಯಾಗಿ ರೈತರ ಕೃಷಿ ಚಟುವಟಿಕೆಗಳು ಯಶಸ್ವಿಯಾಗಲಿ, ಗ್ರಾಮೀಣ ಜನರ ಬದುಕು ಸಮೃದ್ಧವಾಗಲಿ ಹಾಗೂ ಎಲ್ಲರಲ್ಲೂ ಸುಖ, ಶಾಂತಿ ಮತ್ತು ನೆಮ್ಮದಿ ನೆಲೆಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದರು.

ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷರಾದ ಎಸ್. ಲಿಂಗಮೂರ್ತಿ ಮಾತನಾಡಿ, ಕಬ್ಬಳ ಗ್ರಾಮವು ತಮ್ಮ ತಾಯಿಯ ಮನೆ ಹಾಗೂ ತಾವು ಜನಿಸಿದ ಊರು ಎಂಬುದು ಹೆಮ್ಮೆಯ ವಿಷಯವಾಗಿದೆ ಎಂದರು. ಈ ಭಾಗದ ಜನರು ಶ್ರಮಜೀವಿಗಳಾಗಿದ್ದು, ತಮ್ಮ ಪರಿಶ್ರಮ ಮತ್ತು ಒಗ್ಗಟ್ಟಿನ ಮೂಲಕ ಗ್ರಾಮಾಭಿವೃದ್ಧಿಗೆ ನಿರಂತರವಾಗಿ ಕೊಡುಗೆ ನೀಡುತ್ತಿದ್ದಾರೆ ಎಂದು ಹೇಳಿದರು.

ಸನಾತನ ಧಾರ್ಮಿಕ ಪರಂಪರೆಯಲ್ಲಿ ದೇವಾನುದೇವತೆಗಳಿಗೆ ವಿಶೇಷ ಸ್ಥಾನಮಾನವಿದ್ದು, ಪ್ರತಿಯೊಂದು ಗ್ರಾಮದ ಧಾರ್ಮಿಕ ಮತ್ತು ಸಾಂಸ್ಕೃತಿಕ ಬದುಕಿನೊಂದಿಗೆ ಅಲ್ಲಿನ ದೈವಿಕ ಪರಂಪರೆ ಅವಿನಾಭಾವ ಸಂಬಂಧ ಹೊಂದಿದೆ. ಇಂತಹ ದೇವಾಲಯಗಳು ಮುಂದಿನ ಪೀಳಿಗೆಗೂ ನಮ್ಮ ಸಂಸ್ಕೃತಿ, ಸಂಪ್ರದಾಯ ಮತ್ತು ಧಾರ್ಮಿಕ ಮೌಲ್ಯಗಳನ್ನು ಪರಿಚಯಿಸುವ ಕಾರ್ಯ ಮಾಡಲಿವೆ ಎಂದು ಅಭಿಪ್ರಾಯಪಟ್ಟರು.

ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್ ಮಾತನಾಡಿ, ಕಬ್ಬಳದ ಕಂಬದ ನರಸಿಂಹ ಸ್ವಾಮಿ ಹಾಗೂ ಎನ್.ಜಿ.ಹಳ್ಳಿಯ ಮುತ್ತಿನ ಕುಮಾರಿ ದೇವಿ ಸೇರಿದಂತೆ ಈ ಭಾಗದ ಹಲವು ದೈವಗಳು ಭಕ್ತರ ಅಪಾರ ನಂಬಿಕೆ ಮತ್ತು ಶ್ರದ್ಧೆಯ ಕೇಂದ್ರಗಳಾಗಿವೆ ಎಂದರು.

ಕಬ್ಬಳ ಗ್ರಾಮಸ್ಥರು ಪರಸ್ಪರ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ನೂತನ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ನಿರ್ಮಾಣ ಕಾರ್ಯವನ್ನು ಕೇವಲ ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸಿರುವುದು ನಿಜಕ್ಕೂ ಶ್ಲಾಘನೀಯ ಸಾಧನೆಯಾಗಿದೆ. ಗ್ರಾಮದ ಅಭಿವೃದ್ಧಿ ಕಾರ್ಯಗಳಲ್ಲಿಯೂ ಇದೇ ರೀತಿಯ ಒಗ್ಗಟ್ಟು ಮತ್ತು ಸಹಕಾರ ಮುಂದುವರಿಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಗುರುಸ್ವಾಮಿ, ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಟಿ. ಮಲ್ಲಿಕಾರ್ಜುನ ಹಾಗೂ ಟ್ರಸ್ಟ್‌ನ ಪದಾಧಿಕಾರಿಗಳು ಮತ್ತು ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು. ವಿವಿಧ ಪೂಜೆ, ಹೋಮ-ಹವನ, ಕಲಶಾರೋಹಣ ಮತ್ತು ಇತರ ವೈದಿಕ ಧಾರ್ಮಿಕ ವಿಧಿವಿಧಾನಗಳು ಭಕ್ತಿ-ಶ್ರದ್ಧೆಯಿಂದ ನೆರವೇರಿದವು.

ನೂತನ ದೇವಾಲಯದ ಉದ್ಘಾಟನೆಯು ಕಬ್ಬಳ ಗ್ರಾಮದ ಧಾರ್ಮಿಕ ಮತ್ತು ಸಾಂಸ್ಕೃತಿಕ ಬದುಕಿನಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದು, ಗ್ರಾಮಸ್ಥರ ಒಗ್ಗಟ್ಟು ಮತ್ತು ಭಕ್ತಿಭಾವಕ್ಕೆ ಸಾಕ್ಷಿಯಾಯಿತು.

K.M.Sathish Gowda

Join WhatsApp

Join Now

Facebook

Join Now

Read more

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫೈಗೆ ಶೀಘ್ರ ಪ್ರಸ್ತಾವನೆ ಸಲ್ಲಿಸಿ: ಸಚಿವ ಮಧು ಬಂಗಾರಪ್ಪ ಸೂಚನೆ

ವಿಶ್ವ ಹಿರಿಯ ನಾಗರಿಕರ ದಿನಾಚರಣೆ; ಹಿರಿಯರ ಅನುಭವ ಮತ್ತು ಕೊಡುಗೆ ಸಮಾಜಕ್ಕೆ ದಾರಿದೀಪ: ಜಿ. ವಿಜಯ್ ಕುಮಾರ್

ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ಶಾಶ್ವತ ಪರಿಹಾರ ಕಲ್ಪಿಸಿ: ಸಚಿವ ಚಲುವರಾಯಸ್ವಾಮಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

500 ಕೆಪಿಎಸ್ ಶಾಲೆಗಳ ಹೊಸ ರೂಪಕ್ಕೆ ಸಚಿವ ಮಧು ಬಂಗಾರಪ್ಪ ಹೆಜ್ಜೆ: ಎಡಿಬಿಯಿಂದ ₹1,750 ಕೋಟಿ ನೆರವು

ಲಕ್ಷಾಂತರ ಮನೆ-ನಿವೇಶನಗಳಿಗೆ ಎ-ಖಾತಾ ಭಾಗ್ಯ: ವಿಧಾನಸಭೆಯಲ್ಲಿ ಮಹತ್ವದ ವಿಧೇಯಕ ಪಾಸ್

ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸಿ; ರೈತರ ಭೂಮಿ ಕಬಳಿಸಲು ಬಿಡಲ್ಲ, ಹೋರಾಟ ಮತ್ತಷ್ಟು ತೀವ್ರಗೊಳಿಸುತ್ತೇವೆ: ಹೆಚ್.ಆರ್. ಬಸವರಾಜಪ್ಪ

Leave a Comment