ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಬರಪೀಡಿತ ಪ್ರದೇಶಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ; ರೈತರೊಂದಿಗೆ ಸಮಾಲೋಚನೆ

On: September 1, 2026 6:56 PM
Follow Us:

ಗದಗ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಗದಗ ಜಿಲ್ಲೆಯ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಬೆಳೆಹಾನಿ ಹಾಗೂ ಬರ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕದಂಪೂರ ಗ್ರಾಮದಲ್ಲಿನ ರೈತರ ಜಮೀನುಗಳಿಗೆ ಭೇಟಿ ನೀಡಿದ ಅವರು, ಸ್ಥಳೀಯ ರೈತರೊಂದಿಗೆ ನೇರವಾಗಿ ಚರ್ಚಿಸಿ ಅವರ ಸಮಸ್ಯೆಗಳನ್ನು ಆಲಿಸಿದರು.

ಗದಗ ಜಿಲ್ಲೆಯ ಕುರ್ತಕೋಟಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ, ಬರ ಪರಿಸ್ಥಿತಿಯಿಂದಾಗಿ ಕೃಷಿ ಬೆಳೆಗಳಿಗೆ ಉಂಟಾಗಿರುವ ಹಾನಿಯನ್ನು ವೀಕ್ಷಿಸಿದರು. ಮಳೆಯ ಕೊರತೆಯಿಂದಾಗಿ ಬೆಳೆಗಳು ಒಣಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿರುವುದನ್ನು ಸ್ಥಳದಲ್ಲಿಯೇ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ರೈತರು ಮುಖ್ಯಮಂತ್ರಿಗಳೊಂದಿಗೆ ತಮ್ಮ ಸಮಸ್ಯೆಗಳನ್ನು ಹಂಚಿಕೊಂಡರು. ಪ್ರಸಕ್ತ ಸಾಲಿನಲ್ಲಿ ಮಳೆಯ ಕೊರತೆಯಿಂದಾಗಿ ಬೆಳೆಗಳು ಹಾನಿಗೊಳಗಾಗಿದ್ದು, ಗದಗ ಜಿಲ್ಲೆಯ ಬಹುತೇಕ ಎಲ್ಲಾ ತಾಲ್ಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸಿವೆ. ಈಗಾಗಲೇ ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಹೊರಗಿರುವ ಉಳಿದ ಆರು ತಾಲ್ಲೂಕುಗಳನ್ನೂ ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ರೈತರಿಗೆ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸಬೇಕು ಎಂದು ಮನವಿ ಮಾಡಿದರು.

ರೈತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಬರ ಪರಿಸ್ಥಿತಿಯ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿಸಿದರು.

“ಬರ ಪರಿಸ್ಥಿತಿಯ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಇನ್ನಷ್ಟು ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಾಗುವುದು. ಪರಿಸ್ಥಿತಿಯ ಸಂಪೂರ್ಣ ಅಧ್ಯಯನ ನಡೆಸಿದ ಬಳಿಕ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನುಸಾರ ಅರ್ಹ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು,” ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿ ಹಾಗೂ ಬರದಿಂದಾಗಿರುವ ಹಾನಿಯನ್ನು ಖುದ್ದಾಗಿ ಪರಿಶೀಲಿಸಿದ ಮುಖ್ಯಮಂತ್ರಿಗಳು, ರೈತರ ಸಮಸ್ಯೆಗಳನ್ನು ಆಲಿಸಿ, ಸರ್ಕಾರದ ವತಿಯಿಂದ ಅಗತ್ಯ ನೆರವು ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವ ಬಸವರಾಜ ರಾಯರೆಡ್ಡಿ, ಮಾಜಿ ಸಚಿವ ಹಾಗೂ ಶಾಸಕ ಹೆಚ್.ಕೆ. ಪಾಟೀಲ್ ಸೇರಿದಂತೆ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Leave a Comment