ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಜಾತಿ ಗಣತಿಗೆ ಮುಹೂರ್ತ ನಿಗದಿ; ಸೆಪ್ಟೆಂಬರ್ 22 ರಿಂದ ಮನೆ ಮನೆಗೆ ಬಂದು ಅಂಕಿ-ಅಂಶ ಸಂಗ್ರಹ

On: July 23, 2025 9:17 PM
Follow Us:

ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ಅರ್ಥಾತ್ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲು ರಾಜ್ಯದ ಸಿಎಂ ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಜಾತಿ ಗಣತಿ ಅರ್ಥಾತ್ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ. ಗಣತಿದಾರರು ಎಲ್ಲರ ಮನೆಗಳಿಗೂ ಭೇಟಿ ನೀಡಿ ಜನರ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಯನ್ನು ದಾಖಲು ಮಾಡಿಕೊಳ್ಳಲಾಗುತ್ತಿದೆ.

2014-15ರಲ್ಲಿ ನಡೆಸಿದ್ದ ಸಮೀಕ್ಷೆಯು ಹತ್ತು ವರ್ಷ ಹಳೆಯದಾಗಿದೆ ಹಾಗೂ ವೈಜ್ಞಾನಿಕವಾಗಿ ಸಮೀಕ್ಷೆ ನಡೆದಿಲ್ಲ. ಎಲ್ಲರ ಮನೆ ಬಾಗಿಲಿಗೂ ಹೋಗಿ ಸಮೀಕ್ಷೆ ನಡೆಸದೇ ಎಲ್ಲೋ ಕುಳಿತುಕೊಂಡು ಸಮೀಕ್ಷೆಯ ಅಂಕಿಅಂಶಗಳನ್ನು ದಾಖಲಿಸಿದ್ದಾರೆ.

ಉದ್ದೇಶಪೂರ್ವಕವಾಗಿಯೇ ರಾಜ್ಯದ ಪ್ರಭಾವಿ ಜಾತಿಗಳಾದ ಲಿಂಗಾಯತ, ಒಕ್ಕಲಿಗ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ಮಾಡಿದ್ದಾರೆ ಎಂಬೆಲ್ಲಾ ಆರೋಪಗಳಿದ್ದವು. ಹೀಗಾಗಿ ಕಾಂಗ್ರೆಸ್ ಹೈಕಮ್ಯಾಂಡ್ ಮತ್ತೊಮ್ಮೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯಗೆ ಸೂಚಿಸಿತ್ತು. ಹೀಗಾಗಿ ಇಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರು, ಅಧಿಕಾರಿಗಳ ಜೊತೆ ಸಭೆ ನಡೆಸಿ ಮತ್ತೊಮ್ಮೆ ಸಮೀಕ್ಷೆಗೆ ಮುಹೂರ್ತ ನಿಗದಿಪಡಿಸಿದ್ದಾರೆ. ಈ ತೀರ್ಮಾನದ ಪ್ರಕಾರ, ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಆಕ್ಟೋಬರ್ 7 ರವರೆಗೆ ಸಮೀಕ್ಷೆ ನಡೆಯಲಿದೆ. ಇದರ ಆಧಾರದ ಮೇಲೆ ಮುಂದೆ ಆಯಾ ಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಶೈಕ್ಷಣಿಕ , ಔದ್ಯೋಗಿಕ ಮೀಸಲಾತಿ ನೀಡುವ ತೀರ್ಮಾನ ಕೈಗೊಳ್ಳಬಹುದು. ಸಮೀಕ್ಷೆಯ ಅಂತಿಮ ಅಂಕಿಅಂಶಗಳ ಆಧಾರದ ಮೇಲೆ ಮೀಸಲಾತಿಯನ್ನು ಪರಿಷ್ಕರಿಸಲೂಬಹುದು.

K.M.Sathish Gowda

Join WhatsApp

Join Now

Facebook

Join Now

Read more

ಬಿಎಸ್‌ವೈ ಅಭಿಮಾನೋತ್ಸವಕ್ಕೆ ‘ವೈದ್ಯಕೀಯ ಕವಚ’: ಲಕ್ಷಾಂತರ ಅಭಿಮಾನಿಗಳ ಪಾಲಿಗೆ ಸಂಜೀವಿನಿಯಾದ ಡಾ.ಲಕ್ಷ್ಮಣ್, ಡಾ. ಚನ್ನಮಲ್ಲಯ್ಯ, ಡಾ.ನಾರಾಯಣ್ ತಂಡ

ಇಂಧನ ಉಳಿತಾಯಕ್ಕೆ ಪ್ರಧಾನಿ ಮೋದಿ ಮಾದರಿ: ಎಸ್‌ಪಿಜಿ ಬೆಂಗಾವಲು ಪಡೆಯಲ್ಲಿ 50% ಕಡಿತಕ್ಕೆ ಸೂಚನೆ

ದೇಶಕ್ಕೆ ಬುದ್ಧಿ ಹೇಳುವ ಕೇಂದ್ರಕ್ಕೆ ಒಂದು ಪರೀಕ್ಷೆ ನಡೆಸಲಾಗುತ್ತಿಲ್ಲವೇ? : ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಬಸವೇಶ್ವರ ಸೊಸೈಟಿಯ ಶತಮಾನೋತ್ಸವ ಸಂಭ್ರಮ: ಮೇ 16 ಮತ್ತು 17ರಂದು ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭ

ವೈದ್ಯಕೀಯ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ನೀಟ್ 2026 ರದ್ದು; ಶೀಘ್ರದಲ್ಲೇ ಮರುಪರೀಕ್ಷೆಯ ಹೊಸ ದಿನಾಂಕ ಘೋಷಣೆ

ಬಿಎಸ್‌ವೈ ಅಭಿಮಾನೋತ್ಸವದ ಅಭೂತಪೂರ್ವ ಯಶಸ್ಸು: ನಾಡಿನ ಜನತೆ ಹಾಗೂ ಆಗಮಿಸಿದ ಗಣ್ಯರಿಗೆ ಸಂಸದ ಬಿ.ವೈ. ರಾಘವೇಂದ್ರ ಕೃತಜ್ಞತೆ

Leave a Comment