ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಭೂಮಿ ನೀಡದ ರಾಜ್ಯ ಸರ್ಕಾರ: ಶಿವಮೊಗ್ಗ-ಹರಿಹರ ರೈಲ್ವೆ ಯೋಜನೆ ಸ್ಥಗಿತ..!

On: August 7, 2025 9:29 PM
Follow Us:

ನವದೆಹಲಿ: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಉಚಿತವಾಗಿ ಭೂಮಿ ನೀಡಲು ಹಾಗೂ ಯೋಜನಾ ವೆಚ್ಚದ ಶೇ 50:50 ವೆಚ್ಚ ಭರಿಸಲು ನಿರಾಕರಿಸಿದ ಕಾರಣಕ್ಕೆ ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಬುಧವಾರ ಹೇಳಿದ್ದಾರೆ.

ರಾಜ್ಯ ಸರಕಾರ 832 ಕೋಟಿ ವೆಚ್ಚದಲ್ಲಿ ಭೂಮಿ ವಶಪಡಿಸಿಕೊಳ್ಳಬೇಕಿತ್ತು. ಆದರೆ, ಸರಕಾರ ಅಸಮರ್ಥತೆ ತೋರಿದ್ದರಿಂದ ಯೋಜನೆ ಸ್ಥಗಿತಗೊಂಡಿದೆ.

ಹರಿಹರ -ಶಿವಮೊಗ್ಗ (79 ಕಿಮೀ) ರೈಲು ಯೋಜನೆಯನ್ನು ಶೇ.50ರ ಅನುಪಾತದ ಯೋಜನೆಯಡಿ ಮಂಜೂರು ಮಾಡಲಾಗಿತ್ತು. ರಾಜ್ಯ ಸರಕಾರ 832 ಕೋಟಿ ವೆಚ್ಚದಲ್ಲಿ ಯೋಜನೆಗೆ ಬೇಕಾದ ಭೂಮಿಯನ್ನು ವಶಪಡಿಸಿಕೊಂಡು ಒದಗಿಸಬೇಕಿದೆ. ಒಟ್ಟು 488 ಹೆ. ಭೂಮಿಯನ್ನು ಒದಗಿಸಲು ರೈಲ್ವೆ ಇಲಾಖೆ ಕರ್ನಾಟಕ ಸರಕಾರವನ್ನು ಕೋರಿತ್ತು. ಆದರೆ, ಈ ವೆಚ್ಚವನ್ನು ಹಂಚಿಕೊಳ್ಳಲು ಮತ್ತು ಉಚಿತವಾಗಿ ಭೂಮಿಯನ್ನು ಒದಗಿಸಲು ಕರ್ನಾಟಕ ಸರಕಾರ ಅಸಮರ್ಥತೆ ತೋರಿಸಿದೆ, ಈ ಕಾರಣಕ್ಕೆ ಯೋಜನೆ ಸ್ಥಗಿತಗೊಂಡಿದೆ ಎಂದರು.

ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಬೇಕೆಂದರೆ ಅದು, ರಾಜ್ಯ ಸರ್ಕಾರದ ತ್ವರಿತ ಭೂಸ್ವಾಧೀನ, ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಅರಣ್ಯ ತೆರವು, ಸ್ಥಳಾಂತರ, ವಿವಿಧ ಅಧಿಕಾರಿಗಳಿಂದ ಶಾಸನಬದ್ಧ ಅನುಮತಿಗಳು, ಪ್ರದೇಶದ ಭೌಗೋಳಿಕ ಮತ್ತು ಭೌಗೋಳಿಕ ಪರಿಸ್ಥಿತಿಗಳು, ಯೋಜನಾ ಸ್ಥಳಗಳ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ, ನಿರ್ದಿಷ್ಟ ಯೋಜನೆಗಳ ಕುರಿತ ಮಾಹಿತಿ ಸೇರಿದಂತೆ ಹಳವು ಅಂಶಗಳನ್ನು ಅವಲಂಬಿಸಿರುತ್ತದೆ. ಈ ಎಲ್ಲಾ ಅಂಶಗಳು ಯೋಜನೆಗಳ ಪೂರ್ಣಗೊಳಿಸುವ ಸಮಯ ಮತ್ತು ವೆಚ್ಚದ ಮೇಲೆ ಪರಿಣಾಮ ಬೀರುತ್ತವೆ ಎಂದು ಹೇಳಿದರು.

K.M.Sathish Gowda

Join WhatsApp

Join Now

Facebook

Join Now

Read more

ಕೆಂಪೇಗೌಡರ ಆದರ್ಶ, ವಾಲ್ಮೀಕಿ ಮಹರ್ಷಿಗಳ ಮೌಲ್ಯಗಳು ಸಮಾಜಕ್ಕೆ ದಾರಿದೀಪ: ಬಿ.ವೈ. ರಾಘವೇಂದ್ರ

​ನಾಡಪ್ರಭುವಿನ ಕೊಡುಗೆ ಅಪ್ರತಿಮ ಎಂದ ವಿಜಯೇಂದ್ರ; ಕೆಂಪೇಗೌಡರ ಕೀರ್ತಿ ಜಗತ್ತಿಗೆ ಸಾರಿದ್ದು ಬಿ.ಎಸ್.ವೈ ಎಂದ ಅಶ್ವತ್ಥನಾರಾಯಣ್

ನಾಡಪ್ರಭು ಕೆಂಪೇಗೌಡರಿಗೆ ನಮ್ಮೂರ ಬಳಗದಿಂದ ಗೌರವ ನಮನ; ಅವರ ದೂರದೃಷ್ಟಿಯೇ ಬೆಂಗಳೂರಿನ ವೈಭವ, ಆದರ್ಶಗಳೇ ಇಂದಿನ ಸಮಾಜಕ್ಕೆ ದಾರಿದೀಪ: ಎಂ. ಶ್ರೀಕಾಂತ್

​ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಶನಿವಾರದ ಅವಧಿಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಏಕರೂಪದ ಶಾಲಾ ಸಮಯ ಜಾರಿ

ಗ್ರಾಮೀಣ ಮಹಿಳೆಯರ ಬದುಕಿಗೆ ಆಸರೆಯಾದ ಪುಷ್ಪಗಿರಿ ಸಂಸ್ಥೆ: ಜೂನ್ 29ರಂದು ಶಿವಮೊಗ್ಗದಲ್ಲಿ ಬೃಹತ್ ಮಹಿಳಾ ಸಮಾವೇಶ ಹಾಗೂ ‘ವಿದ್ಯಾಚೇತನ’ ಪ್ರಶಸ್ತಿ ಪ್ರದಾನ

​ದುಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಒಗ್ಗಟ್ಟಿನ ಹೋರಾಟ; ಪಕ್ಷಕ್ಕೆ ದ್ರೋಹ ಬಗೆದವರನ್ನು ಬಿಡುವುದಿಲ್ಲ: ಬಿ.ವೈ. ವಿಜಯೇಂದ್ರ

Leave a Comment