ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ

On: August 10, 2025 2:15 PM
Follow Us:

ಪ್ರಧಾನಿ ಮೋದಿ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ ಮಾಡಿದ್ದಾರೆ. ಇದಕ್ಕೂ ಮೊದಲು KSR ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಟ್ರೈನ್​ಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ಕೊಟ್ಟರು.

ಇಂದು ಪ್ರಧಾನಿ ಮೋದಿ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ ಮಾಡಿದ್ದಾರೆ. ಇದಕ್ಕೂ ಮೊದಲು KSR ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಟ್ರೈನ್​ಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ಕೊಟ್ಟರು. ಇದಾದ ಬಳಿಕ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಹಳದಿ ಮಾರ್ಗ ಮೆಟ್ರೋ ಉದ್ಘಾಟನೆ ಮಾಡಿದ್ದಾರೆ.

ಎರಡು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಒಂದು ಬೆಂಗಳೂರು – ಬೆಳಗಾವಿ ನಡುವೆ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ಮತ್ತೊಂದು ನಮ್ಮ ಮೆಟ್ರೋದ ಹಳದಿ ಮಾರ್ಗದ ಲೋಕಾರ್ಪಣೆ ಜೊತೆಗೆ ನಮ್ಮ ಮೆಟ್ರೋದ ಮೂರನೇ ಫೇಸ್‌ಗೆ ಶಂಕುಸ್ಥಾಪನೆ ಮಾಡಲಿದ್ದಾರೆ. 

ಜೂನ್ 14, 2016ರಂದು ಪ್ರಧಾನಿ ನರೇಂದ್ರ ಮೋದಿ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಇಂದು ಪ್ರಧಾನಿ ಮೋದಿ ಅವರೇ ಉದ್ಘಾಟನೆ ಮಾಡಿದ್ದಾರೆ. ಡಿಸೆಂಬರ್ 9, 2016ರಂದು BMRCL ಮೊದಲ ಬಾರಿಗೆ ಮೂರು ಪ್ಯಾಕೇಜ್​ಗಳಲ್ಲಿ ನಮ್ಮ ಮೆಟ್ರೋ ಟೆಂಡರ್ ಕರೆದಿತ್ತು. ನವೆಂಬರ್ 2017ರಲ್ಲಿ ಈ ಮಾರ್ಗದಲ್ಲಿ ಸಿವಿಲ್ ಕೆಲಸಗಳು ಪ್ರಾರಂಭವಾಗಿತ್ತು. ಜುಲೈ 22 ರಿಂದ 25ರವರೆಗೆ ಪರೀಕ್ಷಾರ್ಥ ಪ್ರಯೋಗ ನಡೆಸಲಾಗಿತ್ತು. ಹಳದಿ ಮಾರ್ಗಕ್ಕೆ 15 ರೈಲುಗಳ ಪೈಕಿ ಸದ್ಯ ಮೂರು ರೈಲುಗಳು ಲಭ್ಯವಾಗಿವೆ. ಸದ್ಯ 20-25 ನಿಮಿಷಗಳ ಅಂತರದಲ್ಲಿ ರೈಲು ಸಂಚಾರ ಸಾಧ್ಯತೆ ಇದೆ. ನಿತ್ಯ ಸುಮಾರು 25 ರಿಂದ 30 ಸಾವಿರ ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚರಿಸೋ ನಿರೀಕ್ಷೆಯಿದೆ. ರೈಲುಗಳ ಸಂಖ್ಯೆ ಹೆಚ್ಚಾದ್ರೆ ಪ್ರತಿ ದಿನ 8 ಲಕ್ಷ ಮಂದಿ ಪ್ರಯಾಣಿಸೋ ಸಾಧ್ಯತೆ ಇದೆ. 

ಇನ್ನೂ, ಹಳದಿ ಮಾರ್ಗಕ್ಕೆ ಒಟ್ಟು 7,616 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಮೆಟ್ರೋದ ಹಳದಿ ಮಾರ್ಗದಲ್ಲಿ 16 ನಿಲ್ದಾಣಗಳು ಇದ್ದು 19.15 ಕಿಲೋ ಮೀಟರ್‌‌ ಉದ್ದವಿದೆ. ಆರ್‌.ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವೆ ಮೂರು ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ. ಅದರಂತೆ ತಿಂಗಳ ಕೊನೆಯಲ್ಲಿ 4ನೇ ಮೆಟ್ರೋ ಈ ಮಾರ್ಗಕ್ಕೆ ಸೇರಲಿದೆ. 

K.M.Sathish Gowda

Join WhatsApp

Join Now

Facebook

Join Now

Read more

ಕೆಂಪೇಗೌಡರ ಆದರ್ಶ, ವಾಲ್ಮೀಕಿ ಮಹರ್ಷಿಗಳ ಮೌಲ್ಯಗಳು ಸಮಾಜಕ್ಕೆ ದಾರಿದೀಪ: ಬಿ.ವೈ. ರಾಘವೇಂದ್ರ

​ನಾಡಪ್ರಭುವಿನ ಕೊಡುಗೆ ಅಪ್ರತಿಮ ಎಂದ ವಿಜಯೇಂದ್ರ; ಕೆಂಪೇಗೌಡರ ಕೀರ್ತಿ ಜಗತ್ತಿಗೆ ಸಾರಿದ್ದು ಬಿ.ಎಸ್.ವೈ ಎಂದ ಅಶ್ವತ್ಥನಾರಾಯಣ್

ನಾಡಪ್ರಭು ಕೆಂಪೇಗೌಡರಿಗೆ ನಮ್ಮೂರ ಬಳಗದಿಂದ ಗೌರವ ನಮನ; ಅವರ ದೂರದೃಷ್ಟಿಯೇ ಬೆಂಗಳೂರಿನ ವೈಭವ, ಆದರ್ಶಗಳೇ ಇಂದಿನ ಸಮಾಜಕ್ಕೆ ದಾರಿದೀಪ: ಎಂ. ಶ್ರೀಕಾಂತ್

​ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಶನಿವಾರದ ಅವಧಿಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಏಕರೂಪದ ಶಾಲಾ ಸಮಯ ಜಾರಿ

ಗ್ರಾಮೀಣ ಮಹಿಳೆಯರ ಬದುಕಿಗೆ ಆಸರೆಯಾದ ಪುಷ್ಪಗಿರಿ ಸಂಸ್ಥೆ: ಜೂನ್ 29ರಂದು ಶಿವಮೊಗ್ಗದಲ್ಲಿ ಬೃಹತ್ ಮಹಿಳಾ ಸಮಾವೇಶ ಹಾಗೂ ‘ವಿದ್ಯಾಚೇತನ’ ಪ್ರಶಸ್ತಿ ಪ್ರದಾನ

​ದುಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಒಗ್ಗಟ್ಟಿನ ಹೋರಾಟ; ಪಕ್ಷಕ್ಕೆ ದ್ರೋಹ ಬಗೆದವರನ್ನು ಬಿಡುವುದಿಲ್ಲ: ಬಿ.ವೈ. ವಿಜಯೇಂದ್ರ

Leave a Comment