ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಧರ್ಮಸ್ಥಳ ದೇವಸ್ಥಾನದಲ್ಲಿ ಶಿವ ತಾಂಡವ ಪ್ರತ್ಯಕ್ಷ..!

On: August 23, 2025 10:58 PM
Follow Us:

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆದ ಷಡ್ಯಂತ್ರ ಒಂದೊಂದಾಗಿ ಬಯಲಾಗುತ್ತಿದೆ. ಇತ್ತೀಚೆಗೆ ಕ್ಷೇತ್ರದ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಶಿವ ತಾಂಡವದ ಫೋಟೋ ಹಂಚಿಕೊಳ್ಳಲಾಗಿದ್ದು, “ನಮೋ ಮಂಜುನಾಥ” ಎಂಬ ಕ್ಯಾಪ್ಷನ್ ಜೊತೆಗೆ ವಿರೋಧಿಗಳಿಗೆ ತಿರುಗೇಟು ನೀಡಲಾಗಿದೆ.

ಹಿಂದಿನ ದಿನಗಳಲ್ಲಿ ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ವದಂತಿ ಹಬ್ಬಿಸಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯನ ಆರೋಪ ಕೋರ್ಟ್ ಮುಂದೆ ತಲೆತಗ್ಗಿಸಿದ್ದು, ಬೆಳ್ತಂಗಡಿ ನ್ಯಾಯಾಲಯವು ಅವನನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇದೇ ವೇಳೆ ಧರ್ಮಸ್ಥಳ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿ ಸಹ ವಶಕ್ಕೆ ಒಳಗಾಗಿದ್ದಾರೆ. ಎಐ ವಿಡಿಯೋ ಮೂಲಕ ಜನರ ದಾರಿ ತಪ್ಪಿಸಿದ್ದ ಸಮೀರ್ ಎಂ.ಡಿ.ಗೆ ನೋಟಿಸ್, ಹಾಗೂ ಸುಜಾತಾ ಭಟ್ ಹೇಳಿದ ಅನನ್ಯಾ ಭಟ್ ಕಥೆ ಸುಳ್ಳು ಎಂಬುದೂ ಬೆಳಕಿಗೆ ಬಂದಿದೆ.

ಇದೇ ಹಿನ್ನೆಲೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಶಿವ ತಾಂಡವದ ಫೋಟೋ ಹಂಚಿ, “ಸತ್ಯಕ್ಕೆ ಜಯ“ ಎಂದು ಸಾರಲಾಗಿದೆ.

 ವಿರೋಧಿಗಳ ಸಂಚು ಬಯಲಾಗುತ್ತಿದೆ

ಈಗ ಧರ್ಮಸ್ಥಳ ಕ್ಷೇತ್ರದ ಅಧಿಕೃತ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು “ಧರ್ಮೋ ರಕ್ಷತಿ ರಕ್ಷಿತಃ“, “ಕೊನೆಗೆ ಸತ್ಯಕ್ಕೆ ಜಯ“ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ

ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಚಿನ್ನಯ್ಯ ಬಂಧನದ ಕುರಿತು ಪ್ರತಿಕ್ರಿಯೆ ನೀಡಿದ್ದು, ಒಂದೊಂದೇ ಸತ್ಯ ಹೊರಗೆ ಬರುತ್ತಿದೆ. ಎಲ್ಲ ಆರೋಪಗಳಿಂದ ತೊಳೆದಂತಾಗಿದೆ. ಸತ್ಯಕ್ಕೆ ಜಯ ಸಿಕ್ಕಿದೆ. ಜನರ ಪ್ರೀತಿ ಕ್ಷೇತ್ರದ ಮೇಲೆ ಹೀಗೆಯೇ ಇರಲಿ. ಎಸ್ಐಟಿ ತನಿಖೆ ಮುಂದುವರಿಯುತ್ತಿರುವುದರಿಂದ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ“ ಎಂದು ತಿಳಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಕೆಂಪೇಗೌಡರ ಆದರ್ಶ, ವಾಲ್ಮೀಕಿ ಮಹರ್ಷಿಗಳ ಮೌಲ್ಯಗಳು ಸಮಾಜಕ್ಕೆ ದಾರಿದೀಪ: ಬಿ.ವೈ. ರಾಘವೇಂದ್ರ

​ನಾಡಪ್ರಭುವಿನ ಕೊಡುಗೆ ಅಪ್ರತಿಮ ಎಂದ ವಿಜಯೇಂದ್ರ; ಕೆಂಪೇಗೌಡರ ಕೀರ್ತಿ ಜಗತ್ತಿಗೆ ಸಾರಿದ್ದು ಬಿ.ಎಸ್.ವೈ ಎಂದ ಅಶ್ವತ್ಥನಾರಾಯಣ್

ನಾಡಪ್ರಭು ಕೆಂಪೇಗೌಡರಿಗೆ ನಮ್ಮೂರ ಬಳಗದಿಂದ ಗೌರವ ನಮನ; ಅವರ ದೂರದೃಷ್ಟಿಯೇ ಬೆಂಗಳೂರಿನ ವೈಭವ, ಆದರ್ಶಗಳೇ ಇಂದಿನ ಸಮಾಜಕ್ಕೆ ದಾರಿದೀಪ: ಎಂ. ಶ್ರೀಕಾಂತ್

​ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಶನಿವಾರದ ಅವಧಿಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಏಕರೂಪದ ಶಾಲಾ ಸಮಯ ಜಾರಿ

ಗ್ರಾಮೀಣ ಮಹಿಳೆಯರ ಬದುಕಿಗೆ ಆಸರೆಯಾದ ಪುಷ್ಪಗಿರಿ ಸಂಸ್ಥೆ: ಜೂನ್ 29ರಂದು ಶಿವಮೊಗ್ಗದಲ್ಲಿ ಬೃಹತ್ ಮಹಿಳಾ ಸಮಾವೇಶ ಹಾಗೂ ‘ವಿದ್ಯಾಚೇತನ’ ಪ್ರಶಸ್ತಿ ಪ್ರದಾನ

​ದುಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಒಗ್ಗಟ್ಟಿನ ಹೋರಾಟ; ಪಕ್ಷಕ್ಕೆ ದ್ರೋಹ ಬಗೆದವರನ್ನು ಬಿಡುವುದಿಲ್ಲ: ಬಿ.ವೈ. ವಿಜಯೇಂದ್ರ

Leave a Comment