ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸೊರಬ ತಾಲೂಕಿನ ಅತಿ ಎತ್ತರದ “ಕುಬಟೂರು ಮಹಾರಾಜ” ಗಣೇಶನಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ವಿಶೇಷ ಪೂಜೆ

On: September 1, 2025 3:01 PM
Follow Us:

ಗಣೇಶ ಚತುರ್ಥಿಯ ಸಂಭ್ರಮ ದೇಶಾದ್ಯಂತ ಕಳೆಗಟ್ಟಿದ್ದು, ಸೊರಬ ತಾಲೂಕಿನ ಕುಬಟೂರಿನಲ್ಲಿ ಭಕ್ತರ ಆಕರ್ಷಣೆಯ ಕೇಂದ್ರವಾಗಿರುವ 16 ಅಡಿ ಎತ್ತರದ ಗಣೇಶ ಮೂರ್ತಿ ಈ ಬಾರಿ ವಿಶೇಷ ಗಮನ ಸೆಳೆದಿದೆ.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ತಮ್ಮ ಸ್ವಗ್ರಾಮ ಕುಬಟೂರಿನಲ್ಲಿ ಯುವಕ ಮಂಡಳಿಯವರು ಪ್ರತಿಷ್ಠಾಪಿಸಿರುವ ಈ ಅತೀ ಎತ್ತರದ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ರಾಜಧಾನಿ ಬೆಂಗಳೂರಿನಿಂದ ತರಿಸಲಾದ ಈ ಗಣೇಶ ಮೂರ್ತಿ ಸೊರಬ ತಾಲೂಕಿನಲ್ಲೇ ಅತಿ ಎತ್ತರದ ಮೂರ್ತಿಯಾಗಿದ್ದು, “ಕುಬಟೂರು ಮಹಾರಾಜ” ಎಂಬ ಹೆಸರಿನಿಂದ ಪ್ರಸಿದ್ಧಿ ಪಡೆದಿದೆ.

ಕಲಾತ್ಮಕವಾಗಿ ನಿರ್ಮಿಸಲಾದ ಮಂಟಪದಲ್ಲಿ, ಸಿಂಹಾಸನದ ಮೇಲೆ ರಾಜಗಾಂಭೀರ್ಯದಿಂದ ಅಲಂಕರಿಸಿರುವ ಗಣಪತಿಯನ್ನು ನೋಡಲು ಸುತ್ತಮುತ್ತಲಿನ ತಾಲೂಕು ಹಾಗೂ ಗ್ರಾಮಗಳಿಂದ ಭಕ್ತಾದಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಎಲ್ಲ ಜಾತಿ, ಜನಾಂಗದ ಜನರು ಒಟ್ಟಾಗಿ ಸೇರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಸೆಪ್ಟೆಂಬರ್ 12 ರಂದು ಅನ್ನಸಂತರ್ಪಣಾ ಕಾರ್ಯಕ್ರಮ ಹಾಗೂ ಸೆಪ್ಟೆಂಬರ್ 13 ರಂದು ಸಾಂಸ್ಕೃತಿಕ ಮೆರವಣಿಗೆಗಳೊಂದಿಗೆ “ಕುಬಟೂರು ಮಹಾರಾಜ” ಗಣೇಶನ ವಿಸರ್ಜನೆ ನಡೆಯಲಿದೆ ಎಂದು ಗಣೇಶ ಮಂಡಳಿಯವರು ತಿಳಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಬಿಎಸ್‌ವೈ ಅಭಿಮಾನೋತ್ಸವಕ್ಕೆ ‘ವೈದ್ಯಕೀಯ ಕವಚ’: ಲಕ್ಷಾಂತರ ಅಭಿಮಾನಿಗಳ ಪಾಲಿಗೆ ಸಂಜೀವಿನಿಯಾದ ಡಾ.ಲಕ್ಷ್ಮಣ್, ಡಾ. ಚನ್ನಮಲ್ಲಯ್ಯ, ಡಾ.ನಾರಾಯಣ್ ತಂಡ

ಇಂಧನ ಉಳಿತಾಯಕ್ಕೆ ಪ್ರಧಾನಿ ಮೋದಿ ಮಾದರಿ: ಎಸ್‌ಪಿಜಿ ಬೆಂಗಾವಲು ಪಡೆಯಲ್ಲಿ 50% ಕಡಿತಕ್ಕೆ ಸೂಚನೆ

ದೇಶಕ್ಕೆ ಬುದ್ಧಿ ಹೇಳುವ ಕೇಂದ್ರಕ್ಕೆ ಒಂದು ಪರೀಕ್ಷೆ ನಡೆಸಲಾಗುತ್ತಿಲ್ಲವೇ? : ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಬಸವೇಶ್ವರ ಸೊಸೈಟಿಯ ಶತಮಾನೋತ್ಸವ ಸಂಭ್ರಮ: ಮೇ 16 ಮತ್ತು 17ರಂದು ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭ

ವೈದ್ಯಕೀಯ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ನೀಟ್ 2026 ರದ್ದು; ಶೀಘ್ರದಲ್ಲೇ ಮರುಪರೀಕ್ಷೆಯ ಹೊಸ ದಿನಾಂಕ ಘೋಷಣೆ

ಬಿಎಸ್‌ವೈ ಅಭಿಮಾನೋತ್ಸವದ ಅಭೂತಪೂರ್ವ ಯಶಸ್ಸು: ನಾಡಿನ ಜನತೆ ಹಾಗೂ ಆಗಮಿಸಿದ ಗಣ್ಯರಿಗೆ ಸಂಸದ ಬಿ.ವೈ. ರಾಘವೇಂದ್ರ ಕೃತಜ್ಞತೆ

Leave a Comment