ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗ ಪೊಲೀಸರ ಮಾನವೀಯತೆ: ಕಳೆದುಹೋದ ಆಭರಣಗಳ ಬ್ಯಾಗ್ ಮಾಲೀಕರಿಗೆ ವಾಪಸ್

On: September 6, 2025 9:44 AM
Follow Us:

ಶಿವಮೊಗ್ಗ: ಅನಂತಪುರದ ಮಂಜಪ್ಪ ಕೆ. ಅವರು ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ಒಂದು ಬ್ಯಾಗ್‌ ಬಿಳಿಸಿಕೊಂಡು ಹೋಗಿದ್ದರು. ಬ್ಯಾಗ್‌ನಲ್ಲಿ ಒಂದು ಬಂಗಾರದ ಉಂಗುರ, ಒಂದು ಬೆಳ್ಳಿ ಉಂಗುರ ಹಾಗೂ ಒಂದು ಜೋಡಿ ಬೆಳ್ಳಿಯ ಕಿವಿಯೋಲೆಗಳಿದ್ದವು.

ಶಿವಮೊಗ್ಗದ ಗೋಪಿ ಸರ್ಕಲ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಎ.ಎಸ್‌.ಐ. ಮೋಹನ್ ಹಾಗೂ ಪೊಲೀಸರಾದ ರಾಜೇಸಾಬ್ ಮತ್ತು ಮುನೇಶಪ್ಪ ಅವರಿಗೆ ಬ್ಯಾಗ್‌ ಸಿಕ್ಕಿತು. ತಕ್ಷಣವೇ ಅವರು ಬ್ಯಾಗ್‌ನೊಳಗಿದ್ದ ಬಿಲ್‌ನಲ್ಲಿ ನೀಡಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿ, ಮಾಲೀಕರಾದ ಮಂಜಪ್ಪ ಅವರನ್ನು ಸಂಪರ್ಕಿಸಿದರು. ನಂತರ ಮಂಜಪ್ಪ ಅವರೇ ಬಂದು ತಮ್ಮ ವಸ್ತುಗಳನ್ನು ಸುರಕ್ಷಿತವಾಗಿ ವಾಪಸ್ ಪಡೆದುಕೊಂಡರು.

ಬ್ಯಾಗ್‌ ಮರಳಿ ಸಿಕ್ಕ ಹಿನ್ನೆಲೆಯಲ್ಲಿ ಸಂತೋಷಗೊಂಡ ಮಂಜಪ್ಪ ಅವರು, “ಇಂದು ಪೊಲೀಸರ ಪ್ರಾಮಾಣಿಕತೆ ಹಾಗೂ ಮಾನವೀಯತೆ ನನಗೆ ದೊಡ್ಡ ನೆರವಾಯಿತು. ನಾನು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ,” ಎಂದು ಪ್ರತಿಕ್ರಿಯಿಸಿದರು.

ಸ್ಥಳೀಯ ನಾಗರಿಕರು ಸಹ ಈ ಘಟನೆಗೆ ಸಂತೋಷ ವ್ಯಕ್ತಪಡಿಸಿ, “ಪೊಲೀಸರು ಸಮಾಜದಲ್ಲಿ ನಿಜವಾದ ಭದ್ರತಾ ಭಾವನೆ ಮೂಡಿಸುವಂತಹ ಕಾರ್ಯ ಮಾಡಿರುವುದು ಶ್ಲಾಘನೀಯ,” ಎಂದು ಅಭಿಪ್ರಾಯಪಟ್ಟರು.

ಶಿವಮೊಗ್ಗ ಪೊಲೀಸ್ ಇಲಾಖೆಯ ಈ ಕಾರ್ಯಾಚರಣೆ ಸಾರ್ವಜನಿಕರಿಂದ ಮೆಚ್ಚುಗೆ ಪಡೆಯುತ್ತಿದೆ.

K.M.Sathish Gowda

Join WhatsApp

Join Now

Facebook

Join Now

Read more

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

‘ಎಲ್ಲರೂ ಬಾಯಿ ಮುಚ್ಚಿಕೊಂಡಿರಬೇಕು’: ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ಸಂದೇಶ

ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ–ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮೇಲೆ ಒತ್ತಡ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Comment