ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

“ಸಂವಿಧಾನ ಉಲ್ಲಂಘನೆ, ಅಭಿವೃದ್ಧಿ ಶೂನ್ಯ: ಸಿದ್ದರಾಮಯ್ಯ ಸರಕಾರದ ಆಡಳಿತಕ್ಕೆ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಟೀಕೆ”

On: October 29, 2025 10:41 PM
Follow Us:

ಹಾವೇರಿ, ಅ.29: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹಾವೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ವಾದಿಸುತ್ತಿದ್ದರೂ, ಅವರ ಕ್ರಮಗಳು ಸಂವಿಧಾನದ ವಿರುದ್ಧ ನಡೆಯುತ್ತಿವೆ ಎಂದು ಖಂಡಿಸಿದರು. ಅವರು, “ಮಾತೆತ್ತಿದರೆ ಸಂವಿಧಾನ, ಆಚಾರ ಹೇಳುವುದು ಬದನೆಕಾಯಿ ತಿನ್ನುವುದು. ಹಲವು ಸಂದರ್ಭಗಳಲ್ಲಿ ಸಂವಿಧಾನದ ಉಲ್ಲಂಘನೆ ನಡೆದಿದೆ. ಜನರ ವಾಕ್ ಸ್ವಾತಂತ್ರ್ಯ ಮತ್ತು ನಾಗರಿಕ ಹಕ್ಕುಗಳನ್ನು ಮೊಟಕುಗೊಳಿಸಲು ಈ ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ಸರ್ಕಾರ ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದರು.

ಹಾಗೆಯೇ, ಆರ್‌ಎಸ್‌ಎಸ್ ವಿರುದ್ಧ ರಾಜ್ಯ ಸರ್ಕಾರ ನೀಡಿದ ಆದೇಶವನ್ನು ಹೈಕೋರ್ಟ್ ತಡೆಹಿಡಿದ ಹಿನ್ನೆಲೆಯಲ್ಲಿ, ಬೊಮ್ಮಾಯಿ ಅವರು, “ಆದೇಶ ಸಂವಿಧಾನ ಬಾಹಿರವಾಗಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ, ಸಂವಿಧಾನದ ಮೌಲ್ಯಗಳನ್ನು ಉಲ್ಲಂಘಿಸುವುದಿಲ್ಲ. ಚುನಾವಣೆ ಆಯೋಗಕ್ಕೂ ಟೀಕೆ ಮಾಡುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡುತ್ತಿದೆ. ಕಾಂಗ್ರೆಸ್‌ ದೇಶಕ್ಕೆ ದೊಡ್ಡ ಅಪಚಾರ ಮಾಡುತ್ತಿದೆ” ಎಂದು ಹೇಳಿದರು.

ಅವರು, ರಾಜ್ಯದಲ್ಲಿ ಅಭಿವೃದ್ಧಿಯಿಲ್ಲದ ಸ್ಥಿತಿ ಮತ್ತು ರಸ್ತೆ, ಮೂಲಸೌಕರ್ಯ ಕುಸಿತದ ಕುರಿತು, “ಸಿದ್ದರಾಮಯ್ಯ ಸರ್ಕಾರದಿಂದ ಜನರು ಬೇಸತ್ತಿದ್ದಾರೆ. ರಸ್ತೆ ಗುಂಡಿಗಳ ನಿರ್ವಹಣೆಗೂ ಹಣ ಇಲ್ಲ; ಮಳೆ ಬಂದಾಗ ರಸ್ತೆ ಸ್ಥಿತಿ ಹಾಳಾಗುತ್ತಿದೆ. ರಾಜ್ಯದ ಮಂತ್ರಿಗಳಲ್ಲಿ ಚಿಂತನೆ ಇಲ್ಲ. ಎಲ್ಲವೂ ಅಧೋಗತಿಗೆ ಹೋಗಿದೆ” ಎಂದು ಕಟುವಾಗಿ ಟೀಕಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಪೊಲೀಸ್ ಇಲಾಖೆಯಲ್ಲಿ ‘ಮೇಜರ್ ಸರ್ಜರಿ’: 129 ಇನ್ಸ್‌ಪೆಕ್ಟರ್‌, 23 ಡಿವೈಎಸ್ಪಿಗಳಿಗೆ ವರ್ಗಾವಣೆ; ಬೆಂಗಳೂರು ಸಿಟಿ ಪಟ್ಟಿ ಇನ್ನೂ ಬಾಕಿ

ಸೂಡಾ ಕಾಮಗಾರಿಗಳ ಮೇಲೆ ಭ್ರಷ್ಟಾಚಾರ ನೆರಳು; ಡಿಸಿ ಕಚೇರಿ ಮುಂದೆ ಜೆಡಿಎಸ್ ಪ್ರತಿಭಟನೆ

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

Leave a Comment