ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

“ರಾಜ್ಯದಲ್ಲಿ ಸಿಎಂ ಯಾರು? ಸಿದ್ದರಾಮಯ್ಯನಾ, ಡಿಕೆ ಶಿವಕುಮಾರನಾ?”:ಹೆಚ್.ಡಿ.ಕೆ. ಪ್ರಶ್ನೆ

On: November 2, 2025 3:07 PM
Follow Us:

ಬೆಂಗಳೂರು: “ನಗರದ ರಸ್ತೆ ಗುಂಡಿಗಳ ಕುರಿತು ಕೇಳಿದ್ದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರು ಶನಿವಾರ ತೀವ್ರವಾಗಿ ಟೀಕಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರ ಹೇಳಿಕೆ ಸಂಪೂರ್ಣ ಬೇಜವಾಬ್ದಾರಿಯಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾ ಅಥವಾ ಡಿ.ಕೆ. ಶಿವಕುಮಾರ್ ಅವರಾ ಎಂಬ ಪ್ರಶ್ನೆ ಜನರ ಮನಸ್ಸಿನಲ್ಲಿ ಮೂಡುತ್ತಿದೆ” ಎಂದರು.

“ರಸ್ತೆ ಗುಂಡಿ ಸಮಸ್ಯೆ ಪರಿಹರಿಸಲು ಸಿಎಂ ಸಭೆ ನಡೆಸಿ ಡೆಡ್‌ಲೈನ್ ನೀಡಿದ್ದರು. ಆದರೆ ಇಂದಿಗೂ ರಸ್ತೆಗಳ ಪರಿಸ್ಥಿತಿ ಯಥಾಸ್ಥಿತಿ. ಅಧಿಕಾರಿಗಳು ಸಿಎಂ ಮಾತಿಗೆ ಎಷ್ಟು ಬೆಲೆ ಕೊಡುತ್ತಾರೆಂಬುದು ಇದರಿಂದ ಸ್ಪಷ್ಟವಾಗಿದೆ,” ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಜಾತಿ ಗಣತಿಯ ಕುರಿತು ಮಾತನಾಡಿದ ಅವರು, “ಸಿದ್ದರಾಮಯ್ಯ ಅವರು ರಾಜ್ಯದ ಜನರ ಹಿತಕ್ಕಾಗಿ ಅಲ್ಲ, ತಮ್ಮ ರಾಜಕೀಯ ಉದ್ದೇಶಕ್ಕಾಗಿ ಸಮೀಕ್ಷೆ ನಡೆಸಿದ್ದಾರೆ. ಈ ಸಮೀಕ್ಷೆಯಿಂದ ಸರ್ಕಾರ ಏನನ್ನು ಸಾಧಿಸಲಿದೆ? ಎಲ್ಲಾ ಜಾತಿಗಳಲ್ಲಿಯೂ ಬಡವರು, ಅನಕ್ಷರಸ್ಥರು ಇದ್ದಾರೆ. ಮೊದಲು ಶಿಕ್ಷಣದ ಗುಣಮಟ್ಟ ಸುಧಾರಿಸುವತ್ತ ಸರ್ಕಾರ ಗಮನ ಹರಿಸಬೇಕು,” ಎಂದು ಹೇಳಿದರು.

ತ್ಯಾಜ್ಯ ವಿಲೇವಾರಿ ಕುರಿತು ಟೀಕಿಸಿದ ಅವರು, “ಸರ್ಕಾರ ವೈಜ್ಞಾನಿಕ ಕಸ ವಿಲೇವಾರಿ ಕ್ರಮ ಕೈಗೊಳ್ಳದೆ, ಮನೆಗಳ ಮುಂದೆ ಕಸ ಸುರಿಯುವ ವಿನೂತನ ಪ್ರಯೋಗ ಮಾಡುತ್ತಿದೆ. ಇದು ಜನರ ಮೇಲಿನ ಅವಮಾನ,” ಎಂದು ತರಾಟೆಗೆ ತೆಗೆದುಕೊಂಡರು.

K.M.Sathish Gowda

Join WhatsApp

Join Now

Facebook

Join Now

Read more

ಜಲಕ್ರಾಂತಿಗೆ ದೆಹಲಿಯಲ್ಲಿ ಹೊಸ ಚೈತನ್ಯ: ಶ್ರೀ ತರಳಬಾಳು ಜಗದ್ಗುರು ಮತ್ತು ಜಲತಜ್ಞ ಡಾ. ರಾಜೇಂದ್ರ ಸಿಂಗ್ ನಡುವೆ ಮಹತ್ವದ ಮಾತುಕತೆ

ಹಾಸನದಲ್ಲಿ ಗೂಂಡಾಗಿರಿ: ಬೆಟ್ಟದ ಭೈರವೇಶ್ವರ ದೇವಸ್ಥಾನ ಬಳಿ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ, ಪ್ರಕರಣ ದಾಖಲು

ಶಿವಮೊಗ್ಗ ಪೊಲೀಸರಿಗೆ ಗೌರವ: ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ರಮೇಶ್ ಕುಮಾರ್ ಸೇರಿದಂತೆ ಮೂವರಿಗೆ ಮುಖ್ಯಮಂತ್ರಿ ಪದಕ ಘೋಷಣೆ

ಕೇಂದ್ರವನ್ನು ಟೀಕಿಸುವುದರಲ್ಲೇ 3 ವರ್ಷ ವ್ಯರ್ಥ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಶ್ರೀ ರಾಮನವಮಿ ಸಂಭ್ರಮ: ಶಿವಮೊಗ್ಗದಲ್ಲಿ ಅದ್ಧೂರಿ ರಥೋತ್ಸವ ಹಾಗೂ ದುರ್ಗಿಗುಡಿ ಮಿತ್ರಕೂಟದಿಂದ ಪಾನಕ–ಕೋಸಂಬರಿ ವಿತರಣೆ

ಇಂಧನ ಬೆಲೆ ಏರಿಕೆ ಭೀತಿ ನಡುವೆ ಕೇಂದ್ರದ ದೊಡ್ಡ ನಿರ್ಧಾರ: ಪೆಟ್ರೋಲ್ ಸುಂಕ 3 ರೂ., ಡೀಸೆಲ್ ಸುಂಕ ಸಂಪೂರ್ಣ ರದ್ದು

Leave a Comment