ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ಐಶಾರಾಮಿ ಸವಲತ್ತು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ

On: November 10, 2025 2:33 PM
Follow Us:

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಉಗ್ರರು, ಅತ್ಯಾಚಾರಿಗಳು, ಕೊಲೆ ಆರೋಪಿಗಳು ಸೇರಿದಂತೆ ಅಪರಾಧಿಗಳಿಗೆ ರಾಜಾತಿಥ್ಯ ಸಿಗುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಭಾರಿ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, “ಕಾಂಗ್ರೆಸ್ ಸರ್ಕಾರವು ಅಪರಾಧಿಗಳಿಗೆ ವಿಶೇಷ ಸವಲತ್ತು ನೀಡುವ ಮೂಲಕ ನೈತಿಕತೆ ಕಳೆದುಕೊಂಡ ದುರಾಡಳಿತ ನಡೆಸುತ್ತಿದೆ. ಉಗ್ರ ಸಂಘಟನೆ ISIS ಗೆ ಸಂಪರ್ಕ ಹೊಂದಿದ್ದ ಹಮೀದ್ ಶಕೀಲ್ ಮನ್ನಾನಿ ಮತ್ತು ಅತ್ಯಾಚಾರಿ ಉಮೇಶ್ ರೆಡ್ಡಿಯಂತಹ ಅಪರಾಧಿಗಳಿಗೆ ಐಷಾರಾಮಿ ಸೌಕರ್ಯ ಒದಗಿಸುವುದು ರಾಷ್ಟ್ರದ್ರೋಹದ ಕೃತ್ಯ. ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ,” ಎಂದು ಖಂಡಿಸಿದರು.

ಪ್ರತಿಭಟನಾಕಾರರು, ಜೈಲು ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ತಕ್ಷಣವೇ ದೇಶದ್ರೋಹದ ಪ್ರಕರಣ ದಾಖಲಿಸಿ ಬಂಧಿಸಬೇಕು,
ಗೃಹಸಚಿವರು ರಾಜೀನಾಮೆ ನೀಡಬೇಕು,
ಮುಖ್ಯಮಂತ್ರಿಗಳು ನೈತಿಕ ಜವಾಬ್ದಾರಿ ಹೊತ್ತು ಕ್ರಮ ಕೈಗೊಳ್ಳಬೇಕು, ಎಂದು ಆಗ್ರಹಿಸಿದರು.

ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಅಶ್ವತ್ಥನಾರಾಯಣ, ಮಾಜಿ ಸಚಿವರು ಸಿಟಿ ರವಿ, ಜಿ.ಗೋಪಾಲಯ್ಯ, ಶಾಸಕರಾದ ಎಂ.ಕೃಷ್ಣಪ್ಪ, ಉದಯ್ ಗರುಡಾಚಾರ್, ಎಂ.ಮುನಿರಾಜು, ಯುವಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕರಾದ ಧೀರಜ್ ಮುನಿರಾಜು, ಜಿಲ್ಲಾಧ್ಯಕ್ಷರಾದ ಸಿ.ಕೆ.ರಾಮಮೂರ್ತಿ, ಎಸ್.ಹರೀಶ್, ಸಪ್ತಗಿರಿ ಗೌಡ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಪೊಲೀಸ್ ಇಲಾಖೆಯಲ್ಲಿ ‘ಮೇಜರ್ ಸರ್ಜರಿ’: 129 ಇನ್ಸ್‌ಪೆಕ್ಟರ್‌, 23 ಡಿವೈಎಸ್ಪಿಗಳಿಗೆ ವರ್ಗಾವಣೆ; ಬೆಂಗಳೂರು ಸಿಟಿ ಪಟ್ಟಿ ಇನ್ನೂ ಬಾಕಿ

ಸೂಡಾ ಕಾಮಗಾರಿಗಳ ಮೇಲೆ ಭ್ರಷ್ಟಾಚಾರ ನೆರಳು; ಡಿಸಿ ಕಚೇರಿ ಮುಂದೆ ಜೆಡಿಎಸ್ ಪ್ರತಿಭಟನೆ

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

Leave a Comment