ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕರ್ನಾಟಕ ಸರ್ಕಾರದಿಂದ ಮಹಿಳಾ ಉದ್ಯೋಗಿಗಳಿಗೆ ‘ಋತುಚಕ್ರ ರಜೆ ನೀತಿ 2025’ ಜಾರಿಗೆ

On: November 12, 2025 9:40 PM
Follow Us:

ಬೆಂಗಳೂರು: ಮಹಿಳಾ ಉದ್ಯೋಗಿಗಳಿಗೆ ವರ್ಷದಲ್ಲಿ 12 ದಿನಗಳ ವೇತನ ಸಹಿತ ರಜೆ ನೀಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರವು ಹಸಿರು ನಿಶಾನೆ ತೋರಿಸಿದೆ. ಕಾರ್ಮಿಕ ಇಲಾಖೆ ಮಂಡಿಸಿದ ‘ಋತುಚಕ್ರ ರಜೆ ನೀತಿ 2025’ ಪ್ರಸ್ತಾವನೆಗೆ ನವೆಂಬರ್‌ 9ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಈ ನೀತಿಯಡಿ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಋತುಚಕ್ರದ ಸಮಯದಲ್ಲಿ ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆ ಸೌಲಭ್ಯ ದೊರೆಯಲಿದೆ. ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು (MNCs), ಐಟಿ ಸಂಸ್ಥೆಗಳು ಹಾಗೂ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಿಗೂ ಈ ನೀತಿ ಅನ್ವಯವಾಗಲಿದೆ.

ನೀತಿಯ ಕುರಿತಂತೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಕಾರ್ಮಿಕರು, ಕಾರ್ಮಿಕ ಸಂಘಗಳು, ಮಾಲೀಕರು, ಮಹಿಳಾ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ಒಟ್ಟು 75 ಅಭಿಪ್ರಾಯಗಳು ಸ್ವೀಕೃತವಾಗಿವೆ. ಇವುಗಳಲ್ಲಿ 56 ಅಭಿಪ್ರಾಯಗಳು ಪ್ರಸ್ತಾಪಿತ ನೀತಿಯ ಪರವಾಗಿದ್ದು, 19 ಅಭಿಪ್ರಾಯಗಳು ವಿರೋಧ ವ್ಯಕ್ತಪಡಿಸಿವೆ. ಬೆಂಬಲಿಸಿದ 56 ಅಭಿಪ್ರಾಯಗಳಲ್ಲಿ 26 ಮಾಲೀಕರು, 7 ಕಾರ್ಮಿಕ ಸಂಘಗಳು, 19 ನೌಕರರು, 1 ಸಾರ್ವಜನಿಕ, 1 ಸರ್ಕಾರಿ ನೌಕರರ ಒಕ್ಕೂಟ ಹಾಗೂ 2 ಮಹಿಳಾ ಸಂಘಗಳು ಭಾಗಿಯಾಗಿವೆ.

ಇದಲ್ಲದೆ, 10 ಅಭಿಪ್ರಾಯಗಳಲ್ಲಿ ಪ್ರಸ್ತಾಪಿತ ವಾರ್ಷಿಕ 6 ರಜೆಗಳ ಬದಲಿಗೆ 12 ರಜೆಗಳನ್ನು ನೀಡುವಂತೆ ಸಲಹೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯು ಮಹಿಳಾ ನೌಕರರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸುವ, ಕಾರ್ಯಕ್ಷಮತೆ ಹೆಚ್ಚಿಸುವ ಉದ್ದೇಶದಿಂದ ‘ಋತುಚಕ್ರ ರಜೆ ನೀತಿ 2025’ ಅನ್ನು ಜಾರಿಗೆ ತರಲು ಆದೇಶ ಹೊರಡಿಸಿದೆ.

ಕಾರ್ಮಿಕ ಇಲಾಖೆ ಆಯುಕ್ತರ ಪ್ರಕಾರ, ಈ ಕ್ರಮದಿಂದ ಮಹಿಳೆಯರ ಉದ್ಯೋಗ ಕ್ಷೇತ್ರದ ಭಾಗವಹಿಸುವಿಕೆ ಹೆಚ್ಚಾಗುತ್ತದೆ, ಅವರ ಸಬಲೀಕರಣಕ್ಕೆ ಮಾರ್ಗ ಸಿಗುತ್ತದೆ ಮತ್ತು ಕರ್ನಾಟಕವು ಮಹಿಳಾ ಶ್ರಮದ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಉತ್ತಮ ಅಭ್ಯಾಸವನ್ನು ರೂಪಿಸಿರುವ ರಾಜ್ಯಗಳಲ್ಲಿ ಒಂದಾಗಿ ಹೊರಹೊಮ್ಮಲಿದೆ.

K.M.Sathish Gowda

Join WhatsApp

Join Now

Facebook

Join Now

Read more

ಜಲಕ್ರಾಂತಿಗೆ ದೆಹಲಿಯಲ್ಲಿ ಹೊಸ ಚೈತನ್ಯ: ಶ್ರೀ ತರಳಬಾಳು ಜಗದ್ಗುರು ಮತ್ತು ಜಲತಜ್ಞ ಡಾ. ರಾಜೇಂದ್ರ ಸಿಂಗ್ ನಡುವೆ ಮಹತ್ವದ ಮಾತುಕತೆ

ಹಾಸನದಲ್ಲಿ ಗೂಂಡಾಗಿರಿ: ಬೆಟ್ಟದ ಭೈರವೇಶ್ವರ ದೇವಸ್ಥಾನ ಬಳಿ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ, ಪ್ರಕರಣ ದಾಖಲು

ಶಿವಮೊಗ್ಗ ಪೊಲೀಸರಿಗೆ ಗೌರವ: ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ರಮೇಶ್ ಕುಮಾರ್ ಸೇರಿದಂತೆ ಮೂವರಿಗೆ ಮುಖ್ಯಮಂತ್ರಿ ಪದಕ ಘೋಷಣೆ

ಕೇಂದ್ರವನ್ನು ಟೀಕಿಸುವುದರಲ್ಲೇ 3 ವರ್ಷ ವ್ಯರ್ಥ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಶ್ರೀ ರಾಮನವಮಿ ಸಂಭ್ರಮ: ಶಿವಮೊಗ್ಗದಲ್ಲಿ ಅದ್ಧೂರಿ ರಥೋತ್ಸವ ಹಾಗೂ ದುರ್ಗಿಗುಡಿ ಮಿತ್ರಕೂಟದಿಂದ ಪಾನಕ–ಕೋಸಂಬರಿ ವಿತರಣೆ

ಇಂಧನ ಬೆಲೆ ಏರಿಕೆ ಭೀತಿ ನಡುವೆ ಕೇಂದ್ರದ ದೊಡ್ಡ ನಿರ್ಧಾರ: ಪೆಟ್ರೋಲ್ ಸುಂಕ 3 ರೂ., ಡೀಸೆಲ್ ಸುಂಕ ಸಂಪೂರ್ಣ ರದ್ದು

Leave a Comment