ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಾಮಾಜಿಕ ಬಹಿಷ್ಕಾರಕ್ಕೆ ಕಡಿವಾಣ: 3 ವರ್ಷ ಜೈಲು, ₹1 ಲಕ್ಷ ದಂಡ – ಸರ್ಕಾರದ ಹೊಸ ಆದೇಶ

On: January 13, 2026 12:12 PM
Follow Us:

ಬೆಂಗಳೂರು: ವ್ಯಕ್ತಿ ಅಥವಾ ಕುಟುಂಬವನ್ನು ಸಮಾಜದಿಂದ ದೂರವಿಡುವ ಅಮಾನವೀಯ ಪದ್ಧತಿಗೆ ಕಡಿವಾಣ ಹಾಕುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಸಾಮಾಜಿಕ ಬಹಿಷ್ಕಾರವನ್ನು ಅಪರಾಧವೆಂದು ಘೋಷಿಸುವ ‘ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ಅಧಿನಿಯಮ–2025’ರ ರಾಜ್ಯಪತ್ರವನ್ನು ಅಧಿಕೃತವಾಗಿ ಹೊರಡಿಸಿದೆ.

ಈ ಹೊಸ ಕಾಯ್ದೆಯಡಿ ಯಾರಾದರೂ ವ್ಯಕ್ತಿ ಅಥವಾ ಆತನ ಕುಟುಂಬವನ್ನು ಸಾಮಾಜಿಕವಾಗಿ ಬಹಿಷ್ಕರಿಸಿದಲ್ಲಿ, ಒಂದು ಲಕ್ಷ ರೂಪಾಯಿ ದಂಡ ಹಾಗೂ ಗರಿಷ್ಠ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸುವ ಅವಕಾಶ ಕಲ್ಪಿಸಲಾಗಿದೆ.

ಮಾನವ ಘನತೆ ಮತ್ತು ಭಾತೃತ್ವದ ರಕ್ಷಣೆಗೆ ಕಾಯ್ದೆ

ರಾಜ್ಯಪತ್ರದಲ್ಲಿ ಉಲ್ಲೇಖಿಸಿರುವಂತೆ, ಭಾರತ ಸಂವಿಧಾನದ ಪ್ರಸ್ತಾವನೆಯಲ್ಲಿ ಪ್ರತಿಷ್ಠಾಪಿಸಲಾದ ವ್ಯಕ್ತಿಯ ಘನತೆ, ಸಮಾನತೆ ಮತ್ತು ಭಾತೃತ್ವದ ಮೌಲ್ಯಗಳನ್ನು ಕಾಪಾಡುವ ದೃಷ್ಟಿಯಿಂದ ಈ ಅಧಿನಿಯಮವನ್ನು ಜಾರಿಗೆ ತರಲಾಗಿದೆ. ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದು ಸಂವಿಧಾನದ ಭಾಗ–III ರಲ್ಲಿನ ಮೂಲಭೂತ ಹಕ್ಕುಗಳ ನೇರ ಉಲ್ಲಂಘನೆಯಾಗಿದ್ದು, ಇದನ್ನು ತಡೆಹಿಡಿಯುವುದು ಅನಿವಾರ್ಯವಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಇನ್ನೂ ಜೀವಂತವಾಗಿರುವ ಅಮಾನವೀಯ ಪದ್ಧತಿ

ರಾಜ್ಯದ ಕೆಲವು ಭಾಗಗಳಲ್ಲಿ, ವಿಶೇಷವಾಗಿ ಸಮುದಾಯ ಅಥವಾ ಜಾತಿ ಪಂಚಾಯತಿಗಳ ಹೆಸರಿನಲ್ಲಿ, ವ್ಯಕ್ತಿಗಳು ಮತ್ತು ಅವರ ಕುಟುಂಬಗಳನ್ನು ಸಾಮಾಜಿಕವಾಗಿ ದೂರವಿಡುವ ಪದ್ಧತಿ ಇನ್ನೂ ಜೀವಂತವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವಲ್ಲಿ ಈಗಿರುವ ಕಾನೂನುಗಳು ಪರಿಣಾಮಕಾರಿಯಾಗಿಲ್ಲವೆಂಬ ಕಾರಣದಿಂದ, ಹೊಸದಾಗಿ ಸಮಗ್ರ ಮತ್ತು ಕಠಿಣ ಕಾಯ್ದೆಯನ್ನು ತರಲಾಗಿದೆ.

ಕಾಯ್ದೆಯ ಮುಖ್ಯ ಅಂಶಗಳು

ಈ ಅಧಿನಿಯಮಕ್ಕೆ “ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ಅಧಿನಿಯಮ, 2025” ಎಂದು ಹೆಸರು ನೀಡಲಾಗಿದ್ದು, ರಾಜ್ಯ ಸರ್ಕಾರ ಅಧಿಸೂಚನೆಯ ಮೂಲಕ ಸೂಚಿಸುವ ದಿನಾಂಕದಿಂದ ಇದು ಜಾರಿಗೆ ಬರಲಿದೆ.

ಕಾಯ್ದೆಯಲ್ಲಿ ಪ್ರಮುಖವಾಗಿ ಈ ಅಂಶಗಳನ್ನು ವಿವರಿಸಲಾಗಿದೆ:

🟦 ಜಾತಿ ಪಂಚಾಯತಿ

ಸಮುದಾಯದೊಳಗಿನ ಆಚರಣೆ, ನಡವಳಿಕೆ ಹಾಗೂ ವಿವಾದಗಳನ್ನು ನಿಯಂತ್ರಿಸುವ ಯಾವುದೇ ಅಧಿಕೃತ ಅಥವಾ ಅನೌಪಚಾರಿಕ ಗುಂಪು.

🟦 ಸಮುದಾಯ

ಧರ್ಮ, ಜಾತಿ, ಉಪಜಾತಿ ಅಥವಾ ಧಾರ್ಮಿಕ ಆಚರಣೆ ಆಧಾರದಲ್ಲಿ ಒಟ್ಟಾಗಿ ಸೇರಿದ ಸದಸ್ಯರ ಗುಂಪು.

🟦 ಸಾಮಾಜಿಕ ಬಹಿಷ್ಕಾರ

ಸಮುದಾಯದೊಳಗೆ ವ್ಯಕ್ತಿಯ ವಿರುದ್ಧ ನಡೆಯುವ ಯಾವುದೇ ರೀತಿಯ ಸಾಮಾಜಿಕ ತಾರತಮ್ಯ, ಪರೋಕ್ಷ ಸೂಚನೆಗಳು, ಮೌಖಿಕ ಅಥವಾ ಲಿಖಿತ ಆದೇಶಗಳು ಹಾಗೂ ಕೃತ್ಯಗಳು.

🟦 ಸಂತ್ರಸ್ತ

ಸಾಮಾಜಿಕ ಬಹಿಷ್ಕಾರದ ಪರಿಣಾಮವಾಗಿ ದೈಹಿಕ, ಮಾನಸಿಕ ಅಥವಾ ಹಣಕಾಸಿನ ತೊಂದರೆ ಅನುಭವಿಸಿದ ವ್ಯಕ್ತಿ ಹಾಗೂ ಆತನ ಕುಟುಂಬ ಸದಸ್ಯರು.

ನಿಷೇಧ ಅಧಿಕಾರಿ ಮತ್ತು ಪರಿಹಾರ ವ್ಯವಸ್ಥೆ

ಸಾಮಾಜಿಕ ಬಹಿಷ್ಕಾರ ತಡೆಯುವ ಉದ್ದೇಶದಿಂದ ಸಾಮಾಜಿಕ ಬಹಿಷ್ಕಾರ ನಿಷೇಧ ಅಧಿಕಾರಿಯನ್ನು ನೇಮಿಸುವ ವ್ಯವಸ್ಥೆಯನ್ನು ಕಾಯ್ದೆ ಒಳಗೊಂಡಿದೆ. ಸಂತ್ರಸ್ತರಿಗೆ ರಕ್ಷಣೆ ನೀಡುವುದು, ದೂರುಗಳನ್ನು ಸ್ವೀಕರಿಸುವುದು ಹಾಗೂ ಅಗತ್ಯ ಕ್ರಮ ಕೈಗೊಳ್ಳುವ ಹೊಣೆಗಾರಿಕೆ ಈ ಅಧಿಕಾರಿಗೆ ಇರುತ್ತದೆ. ಜೊತೆಗೆ, ಬಹಿಷ್ಕಾರದ ಬಲಿಯಾದವರಿಗೆ ಪರಿಹಾರ ಒದಗಿಸುವ ವ್ಯವಸ್ಥೆಯನ್ನೂ ಕಾಯ್ದೆ ಒಳಗೊಂಡಿದೆ.

ಸಾಮಾಜಿಕ ಸುಧಾರಣೆಯ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ

ಸಾರ್ವಜನಿಕ ಕ್ಷೇಮಾಭಿವೃದ್ಧಿ ಮತ್ತು ಸಾಮಾಜಿಕ ಸುಧಾರಣೆಯ ದೃಷ್ಟಿಯಿಂದ ಈ ಕಾಯ್ದೆ ಮಹತ್ವದ್ದಾಗಿದ್ದು, ಜನರು ತಮ್ಮ ಮಾನವ ಹಕ್ಕುಗಳೊಂದಿಗೆ, ಗೌರವಯುತವಾಗಿ ಹಾಗೂ ಸೌಹಾರ್ದದಿಂದ ಬದುಕುವ ವಾತಾವರಣ ನಿರ್ಮಿಸುವುದೇ ಸರ್ಕಾರದ ಆಶಯವಾಗಿದೆ.

ಸಾಮಾಜಿಕ ಬಹಿಷ್ಕಾರದಂತಹ ಅಮಾನವೀಯ ಪದ್ಧತಿಗೆ ಅಂತ್ಯ ಹಾಡುವ ಮೂಲಕ, ರಾಜ್ಯದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಬಲಪಡಿಸುವಲ್ಲಿ ಈ ಅಧಿನಿಯಮ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ವ್ಯಕ್ತವಾಗಿದೆ.

K.M.Sathish Gowda

Join WhatsApp

Join Now

Facebook

Join Now

Read more

ನೀಟ್ ವಿಚಾರದಲ್ಲಿ ಕೇಂದ್ರದ ವಿರುದ್ಧ ಅಪಪ್ರಚಾರ, ಹಿಜಾಬ್ ಮೂಲಕ ಮತಬ್ಯಾಂಕ್ ರಾಜಕಾರಣ: ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಎನ್.ಕೆ ಆರೋಪ

​ಶಿವಮೊಗ್ಗದಲ್ಲಿ ಹರಿದುಬರಲಿದೆ ಭಕ್ತಿಯ ಮಹಾಪೂರ: 34 ವರ್ಷಗಳ ಬಳಿಕ ಜಗದ್ಗುರುಗಳ ಭವ್ಯ ಅಡ್ಡಪಲ್ಲಕ್ಕಿ ಉತ್ಸವ, ಬಿಎಸ್‌ವೈಗೆ ಅಭಿನಂದನೆ ಹಾಗೂ ಬಸವೇಶ್ವರ ಸೊಸೈಟಿಯ ಶತಮಾನೋತ್ಸವದ ತ್ರಿವೇಣಿ ಸಂಗಮ!

​ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್‌ಗೆ ಸುಪ್ರೀಂ ‘ಶಾಕ್’; ಇನ್ನೂ ಒಂದು ವರ್ಷ ಜೈಲೇ ಫಿಕ್ಸ್!

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ (SIR) ಚುನಾವಣಾ ಆಯೋಗದ ‘ಮಹಾ ಮಾಸ್ಟರ್ ಪ್ಲಾನ್’: ಜೂನ್ 30ರಿಂದ ಮನೆ-ಮನೆಗೆ ಅಧಿಕಾರಿಗಳ ಭೇಟಿ ಆರಂಭ

ನೀಟ್ ಅಕ್ರಮದಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ

ಶಾಲೆಗಳಲ್ಲಿ ಹಿಜಾಬ್ ಕಿಡಿ: ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಕೆಂಡಾಮಂಡಲ

Leave a Comment