ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕಾಂಗ್ರೆಸ್ ದುರಾಡಳಿತದಿಂದ ಜನತೆ ಬೇಸತ್ತು ಹೋಗಿದ್ದಾರೆ: ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಮುನ್ನಡೆ – ಎಚ್.ಡಿ. ಕುಮಾರಸ್ವಾಮಿ

On: January 16, 2026 11:15 PM
Follow Us:

ಬೆಂಗಳೂರು, ಜ.16: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನತೆ ಸಂಪೂರ್ಣವಾಗಿ ರೋಸಿ ಹೋಗಿದ್ದು, ಬೆಂಗಳೂರಿನ ಅಭಿವೃದ್ಧಿಯನ್ನು ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಹಾಳುಮಾಡಿದೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು.

ಮುಂಬರುವ ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮಾತನಾಡಿದ ಅವರು, “ಬೆಂಗಳೂರು ನಗರದಲ್ಲಿ ಮೂಲಸೌಕರ್ಯ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕಾಲಿಟ್ಟ ಕಡೆಯಲ್ಲೆಲ್ಲಾ ಗುಂಡಿಗಳು ಕಾಣಿಸುತ್ತಿವೆ. ತೆರಿಗೆ ಮತ್ತು ಬೆಲೆ ಏರಿಕೆ ಮೂಲಕ ಜನರ ಜೇಬು ಖಾಲಿ ಮಾಡಲಾಗುತ್ತಿದೆ. ಭ್ರಷ್ಟಾಚಾರ ಮಿತಿ ಮೀರಿದ್ದು, ಜನರು ಈಗ ಸೂಕ್ತ ಪಾಠ ಕಲಿಸಲು ಸಿದ್ಧರಾಗಿದ್ದಾರೆ” ಎಂದು ಹೇಳಿದರು.

ಮೈತ್ರಿಗೆ ಗೊಂದಲವಿಲ್ಲ – ಒಗ್ಗಟ್ಟಾಗಿ ದುಡಿಯಲು ಕರೆ

ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಕುರಿತು ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದ ಎಚ್.ಡಿ. ಕುಮಾರಸ್ವಾಮಿ, “ಮೈತ್ರಿಗೆ ಧಕ್ಕೆಯಾಗದಂತೆ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಶಿಸ್ತುಬದ್ಧವಾಗಿ ಕೆಲಸ ಮಾಡಬೇಕು. ಹೆಚ್ಚು ವಾರ್ಡುಗಳಲ್ಲಿ ಗೆಲುವು ಸಾಧಿಸುವ ಗುರಿಯೊಂದಿಗೆ ಎಲ್ಲರೂ ಒಗ್ಗಟ್ಟಾಗಿ ದುಡಿಯಬೇಕು” ಎಂದು ಕರೆ ನೀಡಿದರು.

ಸ್ಥಳೀಯ ಮಟ್ಟದಲ್ಲಿ ಯಾವುದೇ ಸಮಸ್ಯೆಗಳು ಅಥವಾ ಗೊಂದಲಗಳಿದ್ದರೆ ಅವನ್ನು ಬಹಿರಂಗ ಹೇಳಿಕೆಗಳ ಮೂಲಕ ಹೊರಹಾಕದೇ ಪಕ್ಷದ ಒಳಗೇ ಚರ್ಚಿಸಿ ಪರಿಹರಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ಮಹಾರಾಷ್ಟ್ರದ ಫಲಿತಾಂಶ ಬೆಂಗಳೂರಿಗೂ ಮಾದರಿ

ಮಹಾರಾಷ್ಟ್ರದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಉತ್ತಮ ಸಾಧನೆ ಮಾಡಿರುವುದನ್ನು ಉಲ್ಲೇಖಿಸಿದ ಅವರು, “ಅದೇ ರೀತಿಯ ಫಲಿತಾಂಶ ಬೆಂಗಳೂರು ನಗರದಲ್ಲಿಯೂ ಪುನರಾವರ್ತನೆ ಆಗಲಿದೆ. ಈ ನಿಟ್ಟಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ನೆಲಮಟ್ಟದಲ್ಲಿ ಕೆಲಸ ಮಾಡಬೇಕು” ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನತೆಗೆ ಮನವರಿಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಜನರ ಮನಸ್ಸಿನಲ್ಲಿ ಈಗಾಗಲೇ ಅಸಮಾಧಾನ ಕುದಿಯುತ್ತಿದೆ. ಅದನ್ನು ಸರಿಯಾದ ದಿಕ್ಕಿನಲ್ಲಿ ಬಳಸಿಕೊಂಡು ಜನಪರ ಆಡಳಿತದ ಅಗತ್ಯತೆಯನ್ನು ತಿಳಿಸಬೇಕು ಎಂದು ಅವರು ಹೇಳಿದರು.

ಮಾಜಿ ಪ್ರಧಾನಿ ದೇವೇಗೌಡರ ಮಾರ್ಗದರ್ಶನ

ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು, “ವಾರ್ಡು ಹಾಗೂ ಮತಗಟ್ಟೆ ಮಟ್ಟದಲ್ಲಿಯೇ ಪಕ್ಷವನ್ನು ಗಟ್ಟಿ ಮಾಡಬೇಕು. ಸಂಘಟನೆ ಬಲವಿದ್ದರೆ ಮಾತ್ರ ಗೆಲುವು ಸಾಧ್ಯ” ಎಂದು ಮುಖಂಡರು ಹಾಗೂ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.

“ನಾನು ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಿಯಾಗಿ ಇದ್ದ ಸಂದರ್ಭದಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದೇನೆ. ಕಾವೇರಿ ನೀರನ್ನು ಬೆಂಗಳೂರಿಗೆ ತಂದುಕೊಟ್ಟಿದ್ದು, ಸಿರ್ಸಿ ಸರ್ಕಲ್ ಮೇಲ್ಸೇತುವೆ ನಿರ್ಮಾಣ, ಐಟಿ ಕ್ಷೇತ್ರಕ್ಕೆ ಉತ್ತೇಜನ ಹಾಗೂ ತೆರಿಗೆ ವಿನಾಯಿತಿಗಳು ಸೇರಿದಂತೆ ನಮ್ಮ ಸರ್ಕಾರದ ಸಾಧನೆಗಳನ್ನು ನಗರದ ಜನತೆಗೆ ಮನದಟ್ಟು ಮಾಡಬೇಕು” ಎಂದು ದೇವೇಗೌಡರು ಹೇಳಿದರು.

ಯುವ ನಾಯಕತ್ವದಿಂದ ಸಂಘಟನೆಗೆ ಬಲ

ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಯುವಕರು ಹಾಗೂ ಹೊಸ ಮತದಾರರನ್ನು ತಲುಪುವ ಕಾರ್ಯತಂತ್ರ ರೂಪಿಸುವ ಅಗತ್ಯವಿದೆ ಎಂದರು. ಸಂಘಟನೆ ಬಲಪಡಿಸುವ ಮೂಲಕ ನಗರ ಚುನಾವಣೆಯಲ್ಲಿ ಐತಿಹಾಸಿಕ ಸಾಧನೆ ಮಾಡುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಸಂಸದ ಮಲ್ಲೇಶ್ ಬಾಬು ಸೇರಿದಂತೆ ಬೆಂಗಳೂರು ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಮುಖಂಡರು, ಮಾಜಿ ಶಾಸಕರು ಹಾಗೂ ಪಕ್ಷದ ಪ್ರಮುಖ ನಾಯಕರು ಭಾಗವಹಿಸಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

‘ಎಲ್ಲರೂ ಬಾಯಿ ಮುಚ್ಚಿಕೊಂಡಿರಬೇಕು’: ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ಸಂದೇಶ

ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ–ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮೇಲೆ ಒತ್ತಡ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Comment