ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗ ಪೊಲೀಸರಿಗೆ ಗೌರವ: ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ರಮೇಶ್ ಕುಮಾರ್ ಸೇರಿದಂತೆ ಮೂವರಿಗೆ ಮುಖ್ಯಮಂತ್ರಿ ಪದಕ ಘೋಷಣೆ

On: March 28, 2026 1:34 PM
Follow Us:

ಶಿವಮೊಗ್ಗ: 2025ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಮೂವರು ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಜನರಾಗಿರುವುದು ಜಿಲ್ಲೆಯ ಪೊಲೀಸ್ ವಲಯಕ್ಕೆ ಹೆಮ್ಮೆಯ ವಿಷಯವಾಗಿದೆ. ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡು, ಜನಸ್ನೇಹಿ ನಡೆ-ನುಡಿಗಳ ಮೂಲಕ ಹಾಗೂ ತಮ್ಮ ಕರ್ತವ್ಯದಲ್ಲಿ ನಿಷ್ಠೆ ಪ್ರದರ್ಶಿಸಿದ ಇವರಿಗೆ ಈ ಗೌರವ ಲಭಿಸಿದೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್. ರಮೇಶ್ ಕುಮಾರ್, ಹೊಳೆಹೊನ್ನೂರು ಪೊಲೀಸ್ ಠಾಣೆಯ ಹೆಡ್ ಕಾಂಸ್ಟೇಬಲ್ ಅಣ್ಣಪ್ಪ ಎನ್. (HC-71) ಹಾಗೂ ಹಳೇನಗರ ಪೊಲೀಸ್ ಠಾಣೆಯ ಹೆಡ್ ಕಾಂಸ್ಟೇಬಲ್ ರಾಘವೇಂದ್ರ ಜಿ. (HC-336) ಅವರು ತಮ್ಮ ಕಾರ್ಯಕ್ಷಮತೆ, ಕರ್ತವ್ಯನಿಷ್ಠೆ ಮತ್ತು ಪ್ರಾಮಾಣಿಕ ಸೇವೆಯ ಮೂಲಕ ವಿಶೇಷ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ನಿಯಂತ್ರಣ, ಸಾರ್ವಜನಿಕರೊಂದಿಗೆ ಸ್ನೇಹಪರ ಸಂಪರ್ಕ ಬೆಳೆಸುವಲ್ಲಿ ಮತ್ತು ಸವಾಲಿನ ಸಂದರ್ಭಗಳಲ್ಲಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುವಲ್ಲಿ ಇವರ ಪಾತ್ರ ಗಮನಾರ್ಹವಾಗಿದೆ. ತಮ್ಮ ಸೇವೆಯ ಮೂಲಕ ಪೊಲೀಸ್ ಇಲಾಖೆಯ ಪ್ರತಿಷ್ಠೆಯನ್ನು ಹೆಚ್ಚಿಸುವಲ್ಲಿ ಇವರ ಕೊಡುಗೆ ಮಹತ್ವದ್ದಾಗಿದೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. ಐಪಿಎಸ್ ಅವರು ಈ ಸಾಧನೆಗೆ ಅಭಿನಂದನೆ ಸಲ್ಲಿಸಿ, ಇವರ ನಿಷ್ಠಾವಂತ ಸೇವೆ ಇತರರಿಗೆ ಪ್ರೇರಣೆಯಾಗಲಿ ಎಂದು ಹಾರೈಸಿದ್ದಾರೆ. ಜಿಲ್ಲೆಯ ಪೊಲೀಸ್ ಸಿಬ್ಬಂದಿಗಳಲ್ಲಿ ಸೇವಾಭಾವನೆ ಮತ್ತು ಕರ್ತವ್ಯನಿಷ್ಠೆ ಹೆಚ್ಚಿಸಲು ಇಂತಹ ಗೌರವಗಳು ಪ್ರೇರಣೆಯಾಗಿ ಕಾರ್ಯನಿರ್ವಹಿಸುತ್ತವೆ ಎಂದರು.

ಇವರ ಈ ಸಾಧನೆ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರಲ್ಲಿ ವಿಶ್ವಾಸ ಹೆಚ್ಚಿಸುವುದರ ಜೊತೆಗೆ, ಪೊಲೀಸ್ ಇಲಾಖೆಯ ಮೇಲೆ ಜನರ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ.

K.M.Sathish Gowda

Join WhatsApp

Join Now

Facebook

Join Now

Leave a Comment