ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕುಟುಂಬ ರಾಜಕಾರಣ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು: ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಪರ ಭರ್ಜರಿ ಪ್ರಚಾರ

On: April 1, 2026 8:26 PM
Follow Us:

ದಾವಣಗೆರೆ: ಕಾಂಗ್ರೆಸ್ ಪಕ್ಷದ ಮೇಲೆ ಕುಟುಂಬ ರಾಜಕಾರಣದ ಆರೋಪ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. “ಕುಟುಂಬ ರಾಜಕಾರಣ ಎಂದು ಹೇಳುವವರು ತಮ್ಮ ಮನೆಯವರನ್ನೇ ಚುನಾವಣೆಗೆ ಇಳಿಸುತ್ತಿರುವುದು ಕಾಣುತ್ತಿಲ್ಲವೇ?” ಎಂದು ಪ್ರಶ್ನಿಸಿದ ಅವರು, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಹಾಗೂ ದೇವೇಗೌಡ ಅವರ ಕುಟುಂಬ ಸದಸ್ಯರೂ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ ಎಂದು ಹೇಳಿದರು.

ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಪರ ರೋಡ್‌ಶೋ ನಡೆಸಿ ಮಾತನಾಡಿದ ಸಿದ್ದರಾಮಯ್ಯ, “ಸಮರ್ಥ್ ಅತ್ಯಂತ ವಿದ್ಯಾವಂತ ಹಾಗೂ ಎಲ್ಲಾ ರೀತಿಯ ಅರ್ಹತೆಗಳನ್ನು ಹೊಂದಿರುವ ಸಮರ್ಥ ಅಭ್ಯರ್ಥಿ. ಅವರು ಗೆದ್ದು ಜನರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆ ಅಭಿವೃದ್ಧಿಗೆ ಶಾಮನೂರು ಶಿವಶಂಕರಪ್ಪ ಅವರ ಕೊಡುಗೆ ಅಪಾರವಾಗಿದೆ. ಆ ಕುಟುಂಬದ ಸೇವಾ ಪರಂಪರೆಯನ್ನು ಮುಂದುವರಿಸುವ ಸಾಮರ್ಥ್ಯ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ಇದೆ. ಹೀಗಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅವರು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಸಿದ್ದರಾಮಯ್ಯ, “ರಾಜ್ಯದಲ್ಲಿ ಈಗಾಗಲೇ 1.43 ಲಕ್ಷ ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೆ ವೆಚ್ಚ ಮಾಡಿದ್ದೇವೆ. ಸಮರ್ಥ್ ಗೆದ್ದರೆ ಈ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ನನಗೆ ಶಕ್ತಿ ಸಿಗುತ್ತದೆ” ಎಂದರು.

ದಾವಣಗೆರೆ ಜಿಲ್ಲೆಗೆ ಮಾತ್ರವೇ 538 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗಾಗಿ ವಿನಿಯೋಗಿಸಲಾಗಿದೆ. ಮಧ್ಯವರ್ತಿಗಳಿಲ್ಲದೆ ಈ ಹಣ ನೇರವಾಗಿ ಜನರ ಖಾತೆಗೆ ಜಮೆಯಾಗಿದ್ದು, ಸಾವಿರಾರು ಕುಟುಂಬಗಳ ಬದುಕು ಸುಧಾರಿಸಿದೆ ಎಂದು ವಿವರಿಸಿದರು. “ಜನರ ಹಣವನ್ನು ಜನರಿಗೆ ವಾಪಸ್ ನೀಡುವುದು ತಪ್ಪೇ?” ಎಂದು ಪ್ರಶ್ನಿಸಿ, ಈ ಯೋಜನೆಗಳಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದನ್ನು ಟೀಕಿಸಿದರು.

ಬಿಜೆಪಿ 2018ರ ಚುನಾವಣೆಯಲ್ಲಿ 600 ಭರವಸೆಗಳನ್ನು ನೀಡಿದ್ದರೂ, ಅದರಲ್ಲಿ ಶೇಕಡಾ 10ರಷ್ಟೂ ಈಡೇರಿಸಿಲ್ಲ ಎಂದು ಆರೋಪಿಸಿದ ಸಿದ್ದರಾಮಯ್ಯ, “2013ರಲ್ಲಿ ಕಾಂಗ್ರೆಸ್ 165 ಭರವಸೆ ನೀಡಿ, ಅದರಲ್ಲಿ 158 ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿತ್ತು. 2023ರಲ್ಲಿ ಘೋಷಿಸಿದ ಐದು ಗ್ಯಾರಂಟಿಗಳನ್ನೂ ಪೂರ್ಣವಾಗಿ ಜಾರಿಗೆ ತಂದಿದ್ದೇವೆ” ಎಂದು ಹೇಳಿದರು.

ಕಾಂಗ್ರೆಸ್ ಎಲ್ಲ ಜಾತಿ, ಧರ್ಮ, ವರ್ಗಗಳ ಜನರನ್ನು ಸಮಾನವಾಗಿ ಕಾಣುವ ಪಕ್ಷವಾಗಿದ್ದು, “ನಮ್ಮ ಗ್ಯಾರಂಟಿಗಳ ಲಾಭವನ್ನು ಎಲ್ಲಾ ಜನಾಂಗದವರು ಪಡೆಯುತ್ತಿದ್ದಾರೆ. ಅದಕ್ಕಾಗಿ ನಮ್ಮದು ‘ಸರ್ವ ಜನಾಂಗದ ಶಾಂತಿಯ ತೋಟ’” ಎಂದು ಹೇಳಿದರು.

ಕಾಂಗ್ರೆಸ್ ಮಹಾತ್ಮ ಗಾಂಧಿ, ಅಂಬೇಡ್ಕರ್ ಹಾಗೂ ಬಸವಣ್ಣ ಅವರ ಆಶಯಗಳ ಹಾದಿಯಲ್ಲಿ ಸಾಗುತ್ತಿದೆ. ಆದರೆ ಬಿಜೆಪಿ ಗೋಡ್ಸೆ ಮತ್ತು ಮನುವಾದಿಗಳ ಚಿಂತನೆಗೆ ಅನುಗುಣವಾಗಿ ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದರು.

“ಬಿಜೆಪಿಯವರು ನನ್ನನ್ನು ‘ಸಾಲದ ರಾಮಯ್ಯ’ ಎಂದು ಟೀಕಿಸುತ್ತಾರೆ. ಈ ಚುನಾವಣೆಯಲ್ಲಿ ಅವರನ್ನು ಸೋಲಿಸಿ ನಾನು ‘ಅನ್ನದ ರಾಮಯ್ಯ’ ಎನ್ನುವುದನ್ನು ತೋರಿಸಿ” ಎಂದು ಜನರಿಗೆ ಕರೆ ನೀಡಿದರು.

ರಾಜ್ಯದ ತಳ ಸಮುದಾಯಗಳ ಅಭಿವೃದ್ಧಿಯೇ ನಮ್ಮ ಸರ್ಕಾರದ ಮೂಲ ಉದ್ದೇಶ. ಬಸವಣ್ಣ ಅವರ ಸಮಾನತೆಯ ತತ್ವದಡಿ ಆಡಳಿತ ನಡೆಸುತ್ತಿದ್ದು, ಯಾವುದೇ ಮಧ್ಯವರ್ತಿಗಳಿಲ್ಲದೆ ಬಡವರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರೋಡ್‌ಶೋ ವೇಳೆ ಅಪಾರ ಜನಸ್ತೋಮ ಸೇರುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ಬೆಂಬಲ ವ್ಯಕ್ತವಾಗಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ರಾಜಕೀಯ ಕಾವು ಹೆಚ್ಚಾಗಿದೆ.

K.M.Sathish Gowda

Join WhatsApp

Join Now

Facebook

Join Now

Read more

ದಾವಣಗೆರೆಯಲ್ಲಿ ಆರ್ಯವೈಶ್ಯ ಬಂಧುಗಳ ಸ್ನೇಹ ಮಿಲನ: ಆರ್ಯವೈಶ್ಯರ ಐಕ್ಯತೆ ಶ್ಲಾಘನೆ, ದಾಸಕರಿಯಪ್ಪಗೆ ಬೆಂಬಲಿಸಿ – ಬಿ.ಎಸ್. ಯಡಿಯೂರಪ್ಪ ಕರೆ

ಗ್ಯಾರಂಟಿಗಳ ಹೆಸರಿನಲ್ಲಿ ಖಜಾನೆ ಖಾಲಿ? ರಾಜ್ಯದ ಆರ್ಥಿಕ ಸತ್ಯ ಬಹಿರಂಗಪಡಿಸಿ: ಬಿ.ವೈ. ವಿಜಯೇಂದ್ರ

ಭ್ರಷ್ಟಾಚಾರ, ತೆರಿಗೆ ಭಾರ ಆರೋಪಗಳ ಮಧ್ಯೆ ಬಾಗಲಕೋಟೆ ಉಪಚುನಾವಣೆ ರಂಗು: ಸಿಎಂ ವಿರುದ್ಧ ಬೊಮ್ಮಾಯಿ–ವಿಜಯೇಂದ್ರ ವಾಗ್ದಾಳಿ

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಜನಸಾಗರ – ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಶ್ರೀ ತರಳಬಾಳು ಜಗದ್ಗುರುಗಳ ಆಶೀರ್ವಾದ ಪಡೆದ ಶ್ರೀನಿವಾಸ್ ದಾಸಕರಿಯಪ್ಪ: ದಾವಣಗೆರೆ ಉಪಚುನಾವಣೆಯಲ್ಲಿ ಗೆಲುವಿನ ವಿಶ್ವಾಸ

ಭ್ರಷ್ಟ, ಮನೆಹಾಳ ಕಾಂಗ್ರೆಸ್ ತೊಲಗಿಸಿ, ಲಂಚದ ಸರ್ಕಾರ ಕಿತ್ತೊಗೆಯಲು ಬಿಜೆಪಿ ಬೆಂಬಲಿಸಿ: ದಾವಣಗೆರೆ ಉಪಚುನಾವಣೆ ಪ್ರಣಾಳಿಕೆ ಬಿಡುಗಡೆ ವೇಳೆ ಆರ್. ಆಶೋಕ್ ಮನವಿ

Leave a Comment