ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ: 24 ಗಂಟೆಯೊಳಗೆ ಸರಗಳ್ಳರ ಬಂಧನ

On: April 27, 2026 9:49 PM
Follow Us:

ಶಿವಮೊಗ್ಗ: ನಗರದ ಹೊರವಲಯದ ಹೊಳಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದ್ದ ಹಾಡಹಗಲು ಸರಗಳ್ಳತನ ಪ್ರಕರಣವನ್ನು ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.

​ಕಳೆದ ಏಪ್ರಿಲ್ 25 ರಂದು ಶಿವಮೊಗ್ಗ ನಗರದ ನಿವಾಸಿಗಳಾದ ಇಬ್ಬರು ಮಹಿಳೆಯರು ಹೊಳಲೂರು ಗ್ರಾಮ ಪಂಚಾಯಿತಿಯ ಮಹಿಳಾ ಸಂಘದ ಸಭೆಗೆ ತೆರಳುತ್ತಿದ್ದರು. ಬೆಳಿಗ್ಗೆ ಹೊಳಲೂರು ಸರ್ಕಾರಿ ಆಸ್ಪತ್ರೆಯ ಬಳಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ ಬಂದ ಅಪರಿಚಿತ ಕಿರಾತಕರು ಮಹಿಳೆಯೊಬ್ಬರ ಕೊರಳಿನಲ್ಲಿದ್ದ ಸುಮಾರು 35 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಬಲವಂತವಾಗಿ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 138/2026, ಕಲಂ 309 (4) BNS ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

​ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಎಸ್ಪಿ ನಿಖಿಲ್ ಬಿ. (IPS) ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಅಡಿಷನಲ್ ಎಸ್ಪಿ ಕಾರಿಯಪ್ಪ ಎ.ಜಿ. ಹಾಗೂ ಡಿವೈಎಸ್ಪಿ ಸಂಜೀವ್ ಕುಮಾರ್ ಟಿ. ಅವರ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ರಾಘವೇಂದ್ರ ಕಾಂಡಿಕೆ ಅವರ ಸಾರಥ್ಯದಲ್ಲಿ ಎಎಸ್ಐ ವಿಜಯ, ಸಿಬ್ಬಂದಿಗಳಾದ ಕಲ್ಲನಗೌಡ, ಕುಮಾರ್ ಬಣಕಾರ್, ದಾಕ್ಷಾಯಣಿ, ರಾಘವೇಂದ್ರ, ಶ್ರೀಕಾಂತ್, ಕಾಶಿನಾಥ ಮತ್ತು ಕವನ ಅವರನ್ನೊಳಗೊಂಡ ತಂಡವು ಆರೋಪಿಗಳ ಪತ್ತೆಗೆ ಜಾಲ ಬೀಸಿತ್ತು.

​ತಾಂತ್ರಿಕ ವಿಶ್ಲೇಷಣೆ ಹಾಗೂ ಚಾಣಾಕ್ಷ ತನಿಖೆ ನಡೆಸಿದ ತಂಡವು ಘಟನೆ ನಡೆದ ಮರುದಿನವೇ (ಏಪ್ರಿಲ್ 26) ಆರೋಪಿಗಳಾದ 1) ಮನೋಜ್ ಶಿರಮಣ ಸಿ ಮತ್ತು 2) ವಿಜಯ್ ಕುಮಾರ್ ಎಂಬುವವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತರಿಂದ ಕೆಳಗಿನ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ:

  • ಚಿನ್ನದ ಸರ: ಸುಮಾರು 2,50,000/- ರೂ. ಮೌಲ್ಯದ 18 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ.
  • ವಾಹನ: ಕೃತ್ಯಕ್ಕೆ ಬಳಸಿದ್ದ ಅಂದಾಜು 40,000/- ರೂ. ಮೌಲ್ಯದ ಸ್ಪ್ಲೆಂಡರ್ ಬೈಕ್ ವಶ ಪಡಿಸಿಕೊಂಡಿದ್ದು ಆರೋಪಿಗಳನ್ನು ಸದ್ಯ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

​ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಸರಗಳ್ಳತನ ಪ್ರಕರಣವನ್ನು ಅತ್ಯಂತ ವೇಗವಾಗಿ ಭೇದಿಸಿ, ಕಳುವಾದ ಸ್ವತ್ತನ್ನು ಮರಳಿ ಪಡೆಯುವಲ್ಲಿ ಶ್ರಮಿಸಿದ ಇನ್ಸ್‌ಪೆಕ್ಟರ್ ರಾಘವೇಂದ್ರ ಕಾಂಡಿಕೆ ಮತ್ತು ಅವರ ಇಡೀ ತಂಡದ ಶ್ಲಾಘನೀಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಯು ಜಿಲ್ಲೆಯ ಪೊಲೀಸರ ದಕ್ಷತೆಗೆ ಹಿಡಿದ ಕೈಗನ್ನಡಿಯಾಗಿದೆ.

K.M.Sathish Gowda

Join WhatsApp

Join Now

Facebook

Join Now

Leave a Comment