ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಮೇ 9 ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವಕ್ಕೆ ಕೌಂಟ್‌ಡೌನ್: ಶಿವಮೊಗ್ಗದಿಂದ 50 ಸಾವಿರ ಕಾರ್ಯಕರ್ತರ ಭಾಗವಹಿಸುವ ನಿರೀಕ್ಷೆ – ಎನ್.ಕೆ. ಜಗದೀಶ್

On: April 30, 2026 2:16 PM
Follow Us:

ಶಿವಮೊಗ್ಗ: ದೇಶದಲ್ಲಿ ಪ್ರಪ್ರಥಮ ಬಾರಿಗೆ ರೈತ ಬಜೆಟ್ ಮಂಡಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸಾರ್ಥಕ ಜನಸೇವೆಯನ್ನು ಗೌರವಿಸಲು ಮೇ 9ರಂದು ಚಿತ್ರದುರ್ಗದಲ್ಲಿ ಬೃಹತ್ ‘ಅಭಿಮಾನೋತ್ಸವ’ ಆಯೋಜಿಸಲಾಗಿದೆ. ಈ ಕುರಿತು ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಕೆ. ಜಗದೀಶ್ ಅವರು ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

ಯಡಿಯೂರಪ್ಪ ಅವರು ರಾಜ್ಯ ರಾಜಕೀಯದಲ್ಲಿ ಅಪಾರ ಕೊಡುಗೆ ನೀಡಿದ್ದು, ರೈತರು, ಕಾರ್ಮಿಕರು ಹಾಗೂ ಸಮಾಜದ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಅರ್ಪಿಸಿದ ನಾಯಕರು ಎಂದು ಅವರು ಶ್ಲಾಘಿಸಿದರು. ಅವರ ಸೇವೆಯನ್ನು ಸ್ಮರಿಸುವ ಸಲುವಾಗಿ ಈ ಅಭಿಮಾನೋತ್ಸವವನ್ನು ಭವ್ಯವಾಗಿ ಹಾಗೂ ಐತಿಹಾಸಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಈ ಬೃಹತ್ ಕಾರ್ಯಕ್ರಮವು ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ಮಾನ್ಯ ಗೋವಿಂದ ಕಾರಜೋಳ ಅವರು ಅಧ್ಯಕ್ಷತೆ ವಹಿಸಲಿದ್ದು, ಹಲವಾರು ಗಣ್ಯರು ಹಾಗೂ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯಿಂದ ಸುಮಾರು 50,000ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರ ಮಾರ್ಗದರ್ಶನದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಕಾರ್ಯಕ್ರಮದ ಯಶಸ್ಸಿಗಾಗಿ ಪ್ರಚಾರ ಕಾರ್ಯವನ್ನು ಈಗಾಗಲೇ ವೇಗಗೊಳಿಸಲಾಗಿದ್ದು, ವಾಹನಗಳಿಗೆ ಅಂಟಿಸುವ ವಿಶೇಷ ಸ್ಟಿಕ್ಕರ್‌ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿಸುವುದು ಮುಖ್ಯ ಉದ್ದೇಶವಾಗಿದೆ ಎಂದು ವಿವರಿಸಿದರು.

ಶಿವಮೊಗ್ಗ ಜಿಲ್ಲೆಯ ಮಟ್ಟದಲ್ಲಿ ಈ ಕಾರ್ಯಕ್ರಮದ ಉಸ್ತುವಾರಿಯನ್ನು ಎಸ್. ಎಸ್ ಜ್ಯೋತಿ ಪ್ರಕಾಶ್ ಹಾಗೂ ಎಸ್. ದತ್ತಾತ್ರಿ ಅವರು ನಿರ್ವಹಿಸುತ್ತಿದ್ದು, ಎಲ್ಲಾ ತಾಲ್ಲೂಕುಗಳಲ್ಲಿ ಸಭೆಗಳು ಹಾಗೂ ಸಂಘಟನೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬ ಕಾರ್ಯಕರ್ತರೂ ಕಾರ್ಯಕ್ರಮದ ಯಶಸ್ಸಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಅವರು ಕರೆ ನೀಡಿದರು.

ದಣಿವರಿಯದ ಧೀಮಂತ ರೈತ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸಾರ್ಥಕ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಅಂಗವಾಗಿ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ “ಬಿಎಸ್‌ವೈ ಅಭಿಮಾನೋತ್ಸವ” ಕಾರ್ಯಕ್ರಮದ ಪೂರ್ವಭಾವಿಯಾಗಿ ಶಿವಮೊಗ್ಗದಲ್ಲಿ ಇಂದು ಪ್ರಚಾರ ಕಾರ್ಯಕ್ಕೆ ಭರ್ಜರಿ ಚಾಲನೆ ನೀಡಲಾಯಿತು.

ಸಂಸದ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ನಗರದ ವಿವಿಧ ಭಾಗಗಳಲ್ಲಿ ವಾಹನಗಳಿಗೆ ವಿಶೇಷ ಸ್ಟಿಕ್ಕರ್‌ಗಳನ್ನು ಅಂಟಿಸುವ ಮೂಲಕ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಈ ಮೂಲಕ ಅಭಿಮಾನೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಆಹ್ವಾನ ನೀಡಲಾಯಿತು.

ಇದಲ್ಲದೆ, ಮಾಧ್ಯಮ ಪ್ರತಿನಿಧಿಗಳನ್ನು ಸಹ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಗಿದ್ದು, ಈ ಅಭಿಮಾನೋತ್ಸವವು ರಾಜ್ಯ ರಾಜಕೀಯದಲ್ಲಿ ಮಹತ್ವದ ಮೈಲುಗಲ್ಲಾಗಲಿದೆ ಎಂದು ಜಗದೀಶ್ ಅಭಿಪ್ರಾಯಪಟ್ಟರು.

ಯಡಿಯೂರಪ್ಪ ಅವರ ಅರ್ಧ ಶತಮಾನದ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಈ ಅಭಿಮಾನೋತ್ಸವವು ಕೇವಲ ಆಚರಣೆಯಷ್ಟೇ ಅಲ್ಲದೆ, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮತ್ತು ಸಂಘಟನೆ ಬಲವರ್ಧನೆಗೆ ಕಾರಣವಾಗಲಿದೆ ಎಂದು ಜಿಲ್ಲಾ ಅಧ್ಯಕ್ಷರು ವಿಶ್ವಾಸ ವ್ಯಕ್ತಪಡಿಸಿದರು.

​ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಕೆ. ಜಗದೀಶ್, ಮಾಜಿ ಶಾಸಕರಾದ ಕೆ.ಬಿ. ಅಶೋಕ್ ನಾಯ್ಕ್, ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ, ಪ್ರಮುಖರಾದ ಎಸ್.ಎಸ್. ಜ್ಯೋತಿ ಪ್ರಕಾಶ್, ಹರಿಕೃಷ್ಣ, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಮೋಹನ್ ರೆಡ್ಡಿ, ಎಚ್.ಸಿ. ಮಾಲತೇಶ್, ನಾಗರಾಜ್, ಮಂಗೋಟೆ ರುದ್ರೇಶ್, ರಾಹುಲ್ ಬಿದ್ರೆ, ಶ್ರೀಮತಿ ಸುರೇಖಾ ಮುರುಳೀಧರ್, ಜಿಲ್ಲಾ ಮಾಧ್ಯಮ ಪ್ರಮುಖರಾದ ಎಸ್. ಚಂದ್ರಶೇಖರ್, ಎನ್. ಮಂಜುನಾಥ್, ಶರತ್ ಕಲ್ಯಾಣಿ, ಶ್ರೀಮತಿ ಶಾಂತಾ ಸುರೇಂದ್ರ, ಹಾಗೂ ಶ್ರೀಮತಿ ಸುಮಲತಾ ಭೂಪಾಳಂ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ರಾಜ್ಯ ರಾಜಕಾರಣದ ನಾಯಕತ್ವ ಗೊಂದಲಕ್ಕೆ ತೆರೆ ಎಳೆದ ಮಲ್ಲಿಕಾರ್ಜುನ ಖರ್ಗೆ: ಸದ್ಯಕ್ಕಿಲ್ಲ ‘ಸಿಎಂ’ ಬದಲಾವಣೆ

ಅಡಿಕೆ ಬೆಳೆಗಾರರಿಗೆ ಹೆಕ್ಟೇರ್‌ಗೆ ₹1 ಲಕ್ಷ ವಿಶೇಷ ಪರಿಹಾರ ಘೋಷಿಸಿ: ರೈತರಿಗೆ ತಕ್ಷಣ ನೆರವು ನೀಡದಿದ್ದರೆ ಬೃಹತ್ ಪ್ರತಿಭಟನೆ – ಸರ್ಕಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಎಚ್ಚರಿಕೆ

​”ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ‘ದಲಿತ ಕಾರ್ಡ್’ ಪ್ಲೇ ಮಾಡಿದ ಯತೀಂದ್ರ: ಕೈ ಪಾಳಯದಲ್ಲಿ ತಲ್ಲಣ!”

ಬಿಎಸ್‍ವೈ ಅಭಿಮಾನೋತ್ಸವಕ್ಕೆ 10 ಲಕ್ಷ ಅಧಿಕ ಜನಸಾಗರ ನಿರೀಕ್ಷೆ: ವಿಜಯನಗರದಲ್ಲಿ ನವ ಸಂಚಲನ ಮೂಡಿಸಿದ ಬಿ.ವೈ. ವಿಜಯೇಂದ್ರ ಕರೆ

​ಪಂಚರಾಜ್ಯ ಎಕ್ಸಿಟ್ ಪೋಲ್ ಪ್ರಕಟ: ತಮಿಳುನಾಡಿನಲ್ಲಿ ಡಿಎಂಕೆ ಆರ್ಭಟ, ಅಸ್ಸಾಂ, ಬಂಗಾಳದಲ್ಲಿ ಬಿಜೆಪಿ ಅಬ್ಬರ, ಕೇರಳದಲ್ಲಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಜಯ!

ವೀರಶೈವ ಭವನದಲ್ಲಿ ಪಂಚಮುಖಿ ಶಿವಲಿಂಗ ಪ್ರತಿಷ್ಠಾಪನೆ; ಸಾಂಸ್ಕೃತಿಕ ಮೌಲ್ಯಗಳ ಸಂರಕ್ಷಣೆ ಇಂದಿನ ಅಗತ್ಯ- ಸಿ.ಎಸ್. ಷಡಾಕ್ಷರಿ

Leave a Comment