ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಗೃಹಲಕ್ಷ್ಮಿ ಈಗ ‘ಚುನಾವಣಾ ಲಕ್ಷ್ಮಿ’: ರಾಜ್ಯ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

On: May 6, 2026 3:31 PM
Follow Us:

ಚಿತ್ರದುರ್ಗ: ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ತಂತ್ರಗಳಾಗಿ ಮಾರ್ಪಟ್ಟಿವೆ. ‘ಗೃಹಲಕ್ಷ್ಮಿ’ ಯೋಜನೆ ಇಂದು ‘ಚುನಾವಣಾ ಲಕ್ಷ್ಮಿ’ಯಾಗಿ ಪರಿವರ್ತನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬುಧವಾರ ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯ ರಾಜಕೀಯ ವಿದ್ಯಮಾನಗಳು ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ಸ್ಮರಣಾರ್ಥ ಹಮ್ಮಿಕೊಂಡಿರುವ ‘ಅಭಿಮಾನೋತ್ಸವ’ದ ಕುರಿತು ವಿಸ್ತಾರವಾಗಿ ಮಾಹಿತಿ ಹಂಚಿಕೊಂಡರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗ್ಯಾರಂಟಿ ಯೋಜನೆಗಳ ಬಗ್ಗೆ ಅವರಿಗೆ ಅಷ್ಟೊಂದು ವಿಶ್ವಾಸವಿದ್ದರೆ, ಉಪಚುನಾವಣೆ ಸಂದರ್ಭದಲ್ಲಿ 15 ದಿನಗಳ ಕಾಲ ಬಾಗಲಕೋಟೆಯಲ್ಲಿ ಬೀಡು ಬಿಡುವ ಅಗತ್ಯವೇನಿತ್ತು ಎಂದು ವಿಜಯೇಂದ್ರ ಪ್ರಶ್ನಿಸಿದರು. “ಸರ್ಕಾರದ ಯೋಜನೆಗಳ ಮೇಲೆ ನಂಬಿಕೆಯಿಲ್ಲದ ಕಾರಣಕ್ಕೇ ಸಿಎಂ ಅಲ್ಲಿ ವಾಸ್ತವ್ಯ ಹೂಡಬೇಕಾಯಿತು. ಪ್ರತಿ ತಿಂಗಳು ನೀಡಬೇಕಾದ ಗೃಹಲಕ್ಷ್ಮಿ ಹಣವನ್ನು ತಡೆಹಿಡಿದು, ಉಪಚುನಾವಣೆಯ ಹೊತ್ತಿನಲ್ಲಿ ಬಿಡುಗಡೆ ಮಾಡಿರುವುದು ಜನರಿಗೆ ಒಡ್ಡಿರುವ ಆಮಿಷ. ಮುಂದಿನ ಕಂತುಗಳನ್ನು ಬಹುಶಃ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಬಂದಾಗಲೇ ನೀಡುತ್ತಾರೆ,” ಎಂದು ಅವರು ಲೇವಡಿ ಮಾಡಿದರು.

ಯಡಿಯೂರಪ್ಪನವರು ಈ ಹಿಂದೆ ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ ಮತ್ತು ಬೈಸಿಕಲ್ ವಿತರಣೆಯಂತಹ ದೂರದೃಷ್ಟಿಯ ಯೋಜನೆಗಳನ್ನು ನೀಡಿದ್ದರು. ಆದರೆ ಈಗಿನ ಸರ್ಕಾರ ಕೇವಲ ಮತ ಗಳಿಕೆಗಾಗಿ ಯೋಜನೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಅವರು ಆಕ್ಷೇಪಿಸಿದರು.

ಶೃಂಗೇರಿ ಕ್ಷೇತ್ರದ ಚುನಾವಣಾ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರ ಗೆಲುವಿನ ಕುರಿತು ಪ್ರಸ್ತಾಪಿಸಿದ ವಿಜಯೇಂದ್ರ, “ರಾಹುಲ್ ಗಾಂಧಿಯವರು ಮತಗಳ್ಳತನದ ಬಗ್ಗೆ ಮಾತನಾಡುತ್ತಾ ಪ್ರವಾಸ ಮಾಡಿದ್ದರು. ಈಗ ಹೈಕೋರ್ಟ್ ಆದೇಶದಂತೆ ಜೀವರಾಜ್ ಗೆದ್ದಿದ್ದಾರೆ. ಇದಕ್ಕಾಗಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು,” ಎಂದು ಆಗ್ರಹಿಸಿದರು.

ಜೀವರಾಜ್ ಅವರಿಗೆ ಪ್ರಮಾಣವಚನ ಬೋಧಿಸಲು ವಿಳಂಬ ಮಾಡುತ್ತಿರುವ ಸಭಾಧ್ಯಕ್ಷರ ನಡೆಯನ್ನು ಖಂಡಿಸಿದ ಅವರು, ಸ್ಪೀಕರ್ ಅವರು ರಾಜಕೀಯ ಒತ್ತಡಕ್ಕೆ ಮಣಿಯದೆ ಸಾಂವಿಧಾನಿಕ ಸ್ಥಾನದ ಗೌರವ ಕಾಪಾಡಬೇಕು ಎಂದು ಒತ್ತಾಯಿಸಿದರು.

ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸಾರ್ವಜನಿಕ ಜೀವನದ ಸುವರ್ಣ ಮಹೋತ್ಸವದ ಅಂಗವಾಗಿ ಚಿತ್ರದುರ್ಗದಲ್ಲಿ ನಡೆಯಲಿರುವ ‘ಅಭಿಮಾನೋತ್ಸವ’ ಕಾರ್ಯಕ್ರಮದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಕಾರ್ಯಕ್ರಮದ ವಿವರಗಳು:

  • ದಿನಾಂಕ: ಮೇ 9, 2026.
  • ಸಮಯ: ಮಧ್ಯಾಹ್ನ 2:00 ರಿಂದ ಸಂಜೆ 5:00 ರವರೆಗೆ. (ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭವಿರುವುದರಿಂದ ಬೆಳಿಗ್ಗೆ ಬದಲು ಮಧ್ಯಾಹ್ನಕ್ಕೆ ನಿಗದಿಪಡಿಸಲಾಗಿದೆ).
  • ಮುಖ್ಯ ಅತಿಥಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಜೆ 3:45ಕ್ಕೆ ಆಗಮಿಸಲಿದ್ದಾರೆ.

ಅಭಿಮಾನೋತ್ಸವಕ್ಕೆ ಸುಮಾರು 10 ಲಕ್ಷ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದ್ದು, ಇದಕ್ಕಾಗಿ 10,000 ಬಸ್‌ಗಳು ಮತ್ತು 50,000ಕ್ಕೂ ಹೆಚ್ಚು ಕಾರುಗಳ ವ್ಯವಸ್ಥೆ ಮಾಡಲಾಗಿದೆ. ನಾಡಿನ ವಿವಿಧ ಮಠಾಧೀಶರು ಮತ್ತು ಹರಗುರು ಚರಮೂರ್ತಿಗಳಿಗೆ ಮುಕ್ತ ಆಹ್ವಾನ ನೀಡಲಾಗಿದ್ದು, ಎಲ್ಲ ಸಮುದಾಯದ ಗುರುಗಳು ಭಾಗವಹಿಸಿ ಆಶೀರ್ವದಿಸಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.

ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಮಾಹಿತಿ ನೀಡಿ, ಕಾರ್ಯಕ್ರಮದಲ್ಲಿ ಬಿಎಸ್‍ವೈ ಅವರ ಜೀವನ ಚರಿತ್ರೆ ಕುರಿತ ಎರಡು ಪ್ರಮುಖ ಗ್ರಂಥಗಳಾದ ‘ಕೆಂದಾವರೆ- ಕಮಲದಲ್ಲಿ ಅರಳಿದ ಹೂ’ ಮತ್ತು ‘ಸದನದಲ್ಲಿ ಶಿಕಾರಿ’ ಬಿಡುಗಡೆಯಾಗಲಿವೆ ಎಂದು ತಿಳಿಸಿದರು. ಮೇ 8ರ ಸಂಜೆ ಯಡಿಯೂರಪ್ಪನವರ ಪುರಪ್ರವೇಶ ನಡೆಯಲಿದ್ದು, 24 ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಇದನ್ನು ಸಾಂಸ್ಕೃತಿಕ ಹಬ್ಬವಾಗಿ ಆಚರಿಸಲಾಗುವುದು.
ಸೋಲಿನಿಂದ ಬಿಜೆಪಿ ಕಾರ್ಯಕರ್ತರು ಎದೆಗುಂದುವ ಪ್ರಶ್ನೆಯೇ ಇಲ್ಲ, ಹಿರಿಯರ ಆಶೀರ್ವಾದದೊಂದಿಗೆ ರಾಜ್ಯದಲ್ಲಿ ಮತ್ತೆ ಸಂಘಟನೆ ಬಲಪಡಿಸಿ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸವನ್ನು ಈ ಸಂದರ್ಭದಲ್ಲಿ ನಾಯಕರು ವ್ಯಕ್ತಪಡಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಬಿಎಸ್‌ವೈ ಅಭಿಮಾನೋತ್ಸವಕ್ಕೆ ‘ವೈದ್ಯಕೀಯ ಕವಚ’: ಲಕ್ಷಾಂತರ ಅಭಿಮಾನಿಗಳ ಪಾಲಿಗೆ ಸಂಜೀವಿನಿಯಾದ ಡಾ.ಲಕ್ಷ್ಮಣ್, ಡಾ. ಚನ್ನಮಲ್ಲಯ್ಯ, ಡಾ.ನಾರಾಯಣ್ ತಂಡ

ಇಂಧನ ಉಳಿತಾಯಕ್ಕೆ ಪ್ರಧಾನಿ ಮೋದಿ ಮಾದರಿ: ಎಸ್‌ಪಿಜಿ ಬೆಂಗಾವಲು ಪಡೆಯಲ್ಲಿ 50% ಕಡಿತಕ್ಕೆ ಸೂಚನೆ

ದೇಶಕ್ಕೆ ಬುದ್ಧಿ ಹೇಳುವ ಕೇಂದ್ರಕ್ಕೆ ಒಂದು ಪರೀಕ್ಷೆ ನಡೆಸಲಾಗುತ್ತಿಲ್ಲವೇ? : ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಬಸವೇಶ್ವರ ಸೊಸೈಟಿಯ ಶತಮಾನೋತ್ಸವ ಸಂಭ್ರಮ: ಮೇ 16 ಮತ್ತು 17ರಂದು ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭ

ವೈದ್ಯಕೀಯ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ನೀಟ್ 2026 ರದ್ದು; ಶೀಘ್ರದಲ್ಲೇ ಮರುಪರೀಕ್ಷೆಯ ಹೊಸ ದಿನಾಂಕ ಘೋಷಣೆ

ಬಿಎಸ್‌ವೈ ಅಭಿಮಾನೋತ್ಸವದ ಅಭೂತಪೂರ್ವ ಯಶಸ್ಸು: ನಾಡಿನ ಜನತೆ ಹಾಗೂ ಆಗಮಿಸಿದ ಗಣ್ಯರಿಗೆ ಸಂಸದ ಬಿ.ವೈ. ರಾಘವೇಂದ್ರ ಕೃತಜ್ಞತೆ

Leave a Comment