ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ‘ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ತೆರಳುವ ಸಂದರ್ಭದಲ್ಲಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರಮುಖ ಬಿಜೆಪಿ ನಾಯಕರು ಮಾರ್ಗಮಧ್ಯೆ ನಾಗಸಾಧುಗಳನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು.

ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯಲಿರುವ ಈ ಬೃಹತ್ ಅಭಿಮಾನೋತ್ಸವಕ್ಕೆ ತೆರಳುವ ಮಾರ್ಗಮಧ್ಯೆ ಈ ಭೇಟಿ ನಡೆದಿದ್ದು, ನಾಯಕರು ಸಾಧು-ಸಂತರೊಂದಿಗೆ ಕೆಲಕಾಲ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕರಾದ ಕರುಣಾಕರ ಕಾಸಲೆ, ಡಾ. ಲಕ್ಷ್ಮಣ್ ಹಾಗೂ ಡಾ. ಚನ್ನಮಲ್ಲಯ್ಯ ಸೇರಿದಂತೆ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ರಾಜಕೀಯ ಸಂಭ್ರಮದ ನಡುವೆಯೂ ಆಧ್ಯಾತ್ಮಿಕ ಶಕ್ತಿಯ ಆಶೀರ್ವಾದ ಪಡೆದ ನಾಯಕರು, ನಂತರ ಕಾರ್ಯಕ್ರಮದ ಸ್ಥಳಕ್ಕೆ ಪ್ರಯಾಣ ಬೆಳೆಸಿದರು.







