ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ನೀಟ್ ಅಕ್ರಮದಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ

On: May 14, 2026 8:15 PM
Follow Us:

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಜಾರಿಗೊಳಿಸಿರುವ ಪರಿಷ್ಕೃತ ವಸ್ತ್ರಸಂಹಿತೆ ಯಾವುದೇ ಒಂದು ಧರ್ಮವನ್ನು ಓಲೈಸುವ ಅಥವಾ ಮತ್ತೊಂದು ಸಮುದಾಯವನ್ನು ನೋಯಿಸುವ ಉದ್ದೇಶದ್ದಲ್ಲ, ಬದಲಾಗಿ ಸಂವಿಧಾನದ ಆಶಯವಾಗಿರುವ ಸರ್ವಧರ್ಮ ಸಮಭಾವ, ಸಮಾನತೆ ಹಾಗೂ ಪರಸ್ಪರ ಗೌರವದ ಮೌಲ್ಯಗಳಿಗೆ ಅನುಗುಣವಾಗಿಯೇ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಬಿಡುಗಡೆ ಮಾಡಿದ ಸುದೀರ್ಘ ಮಾಧ್ಯಮ ಪ್ರಕಟಣೆಯಲ್ಲಿ ಅವರು, ರಾಜ್ಯ ಸರ್ಕಾರದ ನೂತನ ವಸ್ತ್ರಸಂಹಿತೆ ಎಲ್ಲ ಜಾತಿ-ಧರ್ಮಗಳ ಸಂಪ್ರದಾಯ ಮತ್ತು ಆಚರಣೆಗಳಿಗೆ ಗೌರವ ನೀಡುವ ನಿಲುವಿನ ಪ್ರತಿಬಿಂಬವಾಗಿದೆ ಎಂದು ಹೇಳಿದ್ದಾರೆ. ಸಮಾಜವನ್ನು ಜಾತಿ-ಧರ್ಮಗಳ ಹೆಸರಿನಲ್ಲಿ ವಿಭಜಿಸಲು ಯತ್ನಿಸುವ ಶಕ್ತಿಗಳಿಗೆ ಈ ನಿರ್ಧಾರ ಅಸಹನೀಯವಾಗಿರುವುದು ಸಹಜ ಎಂದು ಟೀಕಿಸಿರುವ ಅವರು, ಅಂತಹವರು ಮೊದಲು ಆತ್ಮಪರಿಶೀಲನೆ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಅವರು ದೇಶಾದ್ಯಂತ ಚರ್ಚೆಯಾಗುತ್ತಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಉಲ್ಲೇಖಿಸಿ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ತಳ್ಳಿರುವ ಈ ಗಂಭೀರ ಅಪರಾಧದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಮೌನ ವಹಿಸಿರುವುದು ಆಶ್ಚರ್ಯಕರ ಎಂದಿದ್ದಾರೆ. ವಿದ್ಯಾರ್ಥಿಗಳೊಂದಿಗೆ “ಪರೀಕ್ಷಾ ಪೇ ಚರ್ಚಾ” ನಡೆಸುವ ಪ್ರಧಾನಿ ಮೋದಿ, ನೀಟ್ ಪರೀಕ್ಷೆಯ ಅಕ್ರಮದಿಂದ ಸಂಕಷ್ಟಕ್ಕೀಡಾದ ವಿದ್ಯಾರ್ಥಿಗಳ ನೋವಿನ ಬಗ್ಗೆ ಒಂದೇ ಮಾತು ಆಡದಿರುವುದು ದುರಂತಕರ ಬೆಳವಣಿಗೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

​ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಜಾರಿಗೆ ತರಲಾಗಿರುವ ಪರಿಷ್ಕೃತ ವಸ್ತ್ರಸಂಹಿತೆಯು ಯಾವುದೇ ನಿರ್ದಿಷ್ಟ ಸಮುದಾಯದ ಓಲೈಕೆಗಾಗಿ ಅಲ್ಲ, ಬದಲಾಗಿ ಸಂವಿಧಾನದ ‘ಸರ್ವಧರ್ಮ ಸಮಭಾವ’ ತತ್ವಕ್ಕೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.

​”ನಮ್ಮ ವಸ್ತ್ರಸಂಹಿತೆಯು ಎಲ್ಲ ಜಾತಿ-ಧರ್ಮಗಳ ಆಚರಣೆ ಮತ್ತು ಸಂಪ್ರದಾಯಗಳನ್ನು ಗೌರವಿಸುತ್ತದೆ. ನಿಗದಿತ ಸಮವಸ್ತ್ರಕ್ಕೆ ಪೂರಕವಾಗಿ ಸೀಮಿತ ಸಾಂಪ್ರದಾಯಿಕ ಗುರುತುಗಳನ್ನು ಧರಿಸಲು ಅವಕಾಶ ನೀಡುವುದು ಯಾರನ್ನೂ ನೋಯಿಸುವ ಉದ್ದೇಶ ಹೊಂದಿಲ್ಲ. ಸಾಂವಿಧಾನಿಕ ಅರ್ಥದಲ್ಲಿ ಜಾತ್ಯತೀತತೆ ಎಂದರೆ ನಂಬಿಕೆಗಳಿಗೆ ವಿರುದ್ಧವಾಗಿರುವುದಲ್ಲ, ಬದಲಾಗಿ ಎಲ್ಲರಿಗೂ ಸಮಾನ ಗೌರವ ನೀಡುವುದಾಗಿದೆ,”

ಕೇಂದ್ರೀಯ ವಿದ್ಯಾಲಯಗಳಲ್ಲಿ ಈಗಾಗಲೇ ಇರುವ ವಸ್ತ್ರಸಂಹಿತೆಯ ಮಾದರಿಯನ್ನೇ ರಾಜ್ಯದಲ್ಲೂ ಅನುಸರಿಸಲಾಗುತ್ತಿದ್ದು, ಇದನ್ನು ವಿರೋಧಿಸುವ ಬಿಜೆಪಿ ನಾಯಕರು ಕೇಂದ್ರೀಯ ವಿದ್ಯಾಲಯಗಳ ನಿಯಮವನ್ನೂ ವಿರೋಧಿಸುವರೇ ಎಂದು ಅವರು ಪ್ರಶ್ನಿಸಿದ್ದಾರೆ.

​ಇಂದು ದೇಶದ ಮುಂದಿರುವ ಬಹುದೊಡ್ಡ ಸವಾಲು ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರದ್ದಾಗಿರುವ ನೀಟ್ ಪರೀಕ್ಷೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದ ಬಿಜೆಪಿ ನಾಯಕರ ಮೌನವನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. “ಪರೀಕ್ಷಾ ಪೇ ಚರ್ಚಾ ನಡೆಸುವ ಪ್ರಧಾನಿಯವರಿಗೆ 22 ಲಕ್ಷ ಅಮಾಯಕ ವಿದ್ಯಾರ್ಥಿಗಳ ಭವಿಷ್ಯ ಮುರುಟಿ ಹೋಗಿರುವುದು ಕಾಣಿಸುತ್ತಿಲ್ಲವೇ? ಇದೊಂದು ಗಂಭೀರ ಅಪರಾಧವಾಗಿದ್ದರೂ, ಬಿಜೆಪಿ ನಾಯಕರು ಹಗರಣದ ಆರೋಪಿಗಳನ್ನು ಮತ್ತು ಕೇಂದ್ರ ಸಚಿವರನ್ನು ಸಮರ್ಥಿಸಿಕೊಳ್ಳುತ್ತಿರುವುದು ದೇಶದ ವಿದ್ಯಾರ್ಥಿ ಸಮೂಹಕ್ಕೆ ಮಾಡುತ್ತಿರುವ ದ್ರೋಹ,” ಎಂದು ಕಿಡಿಕಾರಿದ್ದಾರೆ.

​ರಾಜ್ಯದ ಬಿಜೆಪಿ ನಾಯಕರ ನಡವಳಿಕೆಯನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಗಳು, “ಒಂದೆರಡು ಕಡೆ ಜನಿವಾರ ತೆಗೆಸಿದಾಗ ಅಥವಾ ಹಿಜಾಬ್ ವಿಷಯ ಬಂದಾಗ ಕೋಮು ದ್ವೇಷದ ಬೆಂಕಿ ಹಚ್ಚಲು ಹೊರಡುವ ಇವರಿಗೆ, ನೀಟ್ ಅಕ್ರಮದಿಂದ ಕಣ್ಣೀರು ಹಾಕುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳ ರೋದನೆ ಕೇಳಿಸುತ್ತಿಲ್ಲವೇ? ರಾಜ್ಯದ ಸಿಇಟಿ ಪರೀಕ್ಷೆಯಲ್ಲಿ ಸಣ್ಣ ಲೋಪವಾದಾಗ ಹಾರಾಡುತ್ತಿದ್ದವರು ಈಗ ರಾಜ್ಯದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನ್ಯಾಯವಾದಾಗ ಬಾಯಿಗೆ ಬೀಗ ಹಾಕಿಕೊಂಡಿರುವುದೇಕೆ?” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

​ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಸಿಇಟಿ ಪರೀಕ್ಷೆಯು ಕ್ರಾಂತಿಕಾರಿಯಾಗಿದ್ದು, ಸಾವಿರಾರು ಬಡ ವಿದ್ಯಾರ್ಥಿಗಳು ವೈದ್ಯರು ಮತ್ತು ಎಂಜಿನಿಯರ್‌ಗಳಾಗಲು ದಾರಿಯಾಗಿತ್ತು. ಆದರೆ ನೀಟ್ ವ್ಯವಸ್ಥೆಯ ಮೂಲಕ ಕೇಂದ್ರ ಸರ್ಕಾರವು ರಾಜ್ಯದ ಶಿಕ್ಷಣದ ಹಕ್ಕನ್ನು ಕಿತ್ತುಕೊಂಡಿದೆ ಎಂದು ಅವರು ಆಕ್ಷೇಪಿಸಿದ್ದಾರೆ.

​”ದಶಕಗಳಿಂದ ನಾವು ಸಿಇಟಿ ಪರೀಕ್ಷೆಯನ್ನು ಸುರಕ್ಷಿತವಾಗಿ ನಡೆಸಿಕೊಂಡು ಬಂದಿದ್ದೇವೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಯೋಗ್ಯತೆ ಇಲ್ಲದಂತಾಗಿದೆ. ಇದು ಕೇಂದ್ರ ಸರ್ಕಾರದ ಆಡಳಿತಾತ್ಮಕ ವೈಫಲ್ಯಕ್ಕೆ ಜೀವಂತ ಸಾಕ್ಷಿ,” ಎಂದು ಟೀಕಿಸಿದ್ದಾರೆ.

​ಈ ಒಟ್ಟಾರೆ ಲೋಪಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ನೇರ ಹೊಣೆ ಎಂದು ದೂರಿದ ಸಿದ್ದರಾಮಯ್ಯ, ಈ ಕೆಳಗಿನ ಆಗ್ರಹಗಳನ್ನು ಮುಂದಿಟ್ಟಿದ್ದಾರೆ:

  1. ​ದೇಶದ ವಿದ್ಯಾರ್ಥಿಗಳ ಕ್ಷಮೆಯನ್ನು ಪ್ರಧಾನಿ ಮೋದಿ ಕೇಳಬೇಕು.
  2. ​ವೈಫಲ್ಯ ಕಂಡ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕು.

ಶಿಕ್ಷಣ ಸಂಸ್ಥೆಗಳು ಕೇವಲ ಪಾಠದ ಕೇಂದ್ರಗಳಾಗಬಾರದು; ಅವು ವೈಚಾರಿಕತೆ, ಸಮಾನತೆ ಮತ್ತು ಭ್ರಾತೃತ್ವವನ್ನು ಬೆಳೆಸುವ ಕೇಂದ್ರಗಳಾಗಬೇಕು. ಯಾವುದೇ ವಿದ್ಯಾರ್ಥಿಗೆ ಅವರ ನಂಬಿಕೆಯ ಕಾರಣಕ್ಕೆ ಶಿಕ್ಷಣದ ಹಕ್ಕು ನಿರಾಕರಣೆಯಾಗಬಾರದು ಎಂಬುದು ಸರ್ಕಾರದ ದೃಢ ಸಂಕಲ್ಪ ಎಂದು ಮುಖ್ಯಮಂತ್ರಿಗಳು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

​ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್‌ಗೆ ಸುಪ್ರೀಂ ‘ಶಾಕ್’; ಇನ್ನೂ ಒಂದು ವರ್ಷ ಜೈಲೇ ಫಿಕ್ಸ್!

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ (SIR) ಚುನಾವಣಾ ಆಯೋಗದ ‘ಮಹಾ ಮಾಸ್ಟರ್ ಪ್ಲಾನ್’: ಜೂನ್ 30ರಿಂದ ಮನೆ-ಮನೆಗೆ ಅಧಿಕಾರಿಗಳ ಭೇಟಿ ಆರಂಭ

ಶಾಲೆಗಳಲ್ಲಿ ಹಿಜಾಬ್ ಕಿಡಿ: ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಕೆಂಡಾಮಂಡಲ

ರಾಜ್ಯದಲ್ಲಿ ವಿವಾದಿತ ಸಮವಸ್ತ್ರ ಆದೇಶ ವಾಪಸ್: ಸಾಂಪ್ರದಾಯಿಕ ಗುರುತುಗಳಿಗೆ ಮುಕ್ತ ಅವಕಾಶ – ಸಚಿವ ಮಧು ಬಂಗಾರಪ್ಪ

​ಬೆಂಗಳೂರಿಗರಿಗೆ ರಾಜ್ಯ ಸರ್ಕಾರದ ‘ಬಂಪರ್’ ಗಿಫ್ಟ್: ಬಿ-ಖಾತೆದಾರರಿಗೆ ಭಾರೀ ರಿಲೀಫ್, 5% ಇದ್ದ ಶುಲ್ಕ 2%ಕ್ಕೆ ಇಳಿಕೆ

ಬಿಎಸ್‌ವೈ ಅಭಿಮಾನೋತ್ಸವಕ್ಕೆ ‘ವೈದ್ಯಕೀಯ ಕವಚ’: ಲಕ್ಷಾಂತರ ಅಭಿಮಾನಿಗಳ ಪಾಲಿಗೆ ಸಂಜೀವಿನಿಯಾದ ಡಾ.ಲಕ್ಷ್ಮಣ್, ಡಾ. ಚನ್ನಮಲ್ಲಯ್ಯ, ಡಾ.ನಾರಾಯಣ್ ತಂಡ

Leave a Comment