ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಭೀಕರ ಮಳೆಗಾಳಿಗೆ ತುತ್ತಾದ ಅಡಿಕೆ ತೋಟಗಳು: ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೃಷಿಕ ಸಮಾಜದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

On: May 21, 2026 9:14 PM
Follow Us:

ಶಿವಮೊಗ್ಗ: ಇತ್ತೀಚೆಗೆ ಏಪ್ರಿಲ್ 24, 2026 ಹಾಗೂ ಮೇ 17, 2026ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಯಿಂದ ತಾಲ್ಲೂಕಿನ 10ಕ್ಕೂ ಹೆಚ್ಚು ಹಳ್ಳಿಗಳಲ್ಲಿ ನೂರಾರು ಎಕರೆ ಪ್ರದೇಶದಲ್ಲಿದ್ದ ಅಡಿಕೆ ತೋಟಗಳು ಭಾರೀ ಹಾನಿಗೊಳಗಾಗಿವೆ. ಅದರಲ್ಲೂ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಹೋಬಳಿಯ ಸುಮಾರು 32 ಹಳ್ಳಿಗಳನ್ನು ಒಳಗೊಂಡಂತೆ ಒಟ್ಟು 8 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ಸಂಪೂರ್ಣವಾಗಿ ನಾಶವಾಗಿವೆ.

ಈ ಭೀಕರ ಹಾನಿಯ ಕುರಿತು ಸಮಗ್ರ ವರದಿ ಸಿದ್ಧಪಡಿಸಿ, ಸಂಕಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರದೇಶ ಕೃಷಿಕ ಸಮಾಜದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ನಷ್ಟದ ತೀವ್ರತೆಯನ್ನು ಪರಿಗಣಿಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ವರದಿ ರವಾನಿಸಿ ಈ ಪ್ರಕೃತಿ ವಿಕೋಪವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಹಾಗೂ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ತಕ್ಷಣ ಗರಿಷ್ಠ ಪರಿಹಾರ ನೀಡುವಂತೆ ನಿಯೋಗವು ಒತ್ತಾಯಿಸಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರದೇಶ ಕೃಷಿಕ ಸಮಾಜದ ಕಾರ್ಯಾಧ್ಯಕ್ಷರಾದ ನಗರದ ಮಹದೇವಪ್ಪ, ಜಿಲ್ಲಾಧ್ಯಕ್ಷರಾದ ಹೆಚ್.ಎಸ್. ನಾಗರಾಜ್, ಶಿವಮೊಗ್ಗ ತಾಲ್ಲೂಕು ಅಧ್ಯಕ್ಷರಾದ ಕ್ಯಾತಿನಕೊಪ್ಪದ ಚಂದ್ರಶೇಖರ್, ಜಿಲ್ಲಾ ನಿರ್ದೇಶಕರಾದ ಲೋಕೇಶ್, ಶಿಕಾರಿಪುರ ನಿರ್ದೇಶಕರಾದ ಡಿ.ಡಿ. ಶಿವಕುಮಾರ್ ಹಾಗೂ ಷಣ್ಮುಖಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಮನೆಯ ಸುತ್ತಮುತ್ತ ಸ್ವಚ್ಛತೆ ಇರಲಿ, ಡೆಂಗ್ಯೂ ಜ್ವರಕ್ಕೆ ಬ್ರೇಕ್ ಹಾಕಿ!: ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಿ ಡೆಂಗ್ಯೂ ಮುಕ್ತ ಸಮಾಜ ನಿರ್ಮಿಸೋಣ: ಡಾ. ಗುಡದಪ್ಪ ಕಸಬಿ ಕರೆ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ ಪುಣ್ಯಸ್ಮರಣೆ: “ದೇಶದ ಪ್ರಗತಿಗೆ ಅಡಿಪಾಯ ಹಾಕಿದ ನಾಯಕ ರಾಜೀವ್ ಗಾಂಧಿ” – ನಗರದ ಮಹದೇವಪ್ಪ

ರಾಹುಲ್ ಗಾಂಧಿ ದೇಶದ ಜನರ ಕ್ಷಮೆಯಾಚಿಸಲಿ; ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

ಶಿಕ್ಷಣ ಇಲಾಖೆಯ ಸುಧಾರಣೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ: ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಕೆಪಿಎಸ್ ಶಾಲೆಗಳಿಗೆ ಹೊಸ ಚೈತನ್ಯ; ಶಿಕ್ಷಕರ ಭರ್ತಿಗೆ ಹಸಿರು ನಿಶಾನೆ

ಮಲೆನಾಡಿನ ಒಡಲಿಗೆ ಅಣುಕಂಟಕ: ಬೇಸೂರು ಅಣುಸ್ಥಾವರ ವಿರೋಧಿ ಹೋರಾಟಕ್ಕೆ ‘ಪರ್ಯಾವರಣ ಟ್ರಸ್ಟ್’ ಬೆಂಬಲ

ಶಿವಮೊಗ್ಗದ ಸಹಕಾರಿ ರಂಗದಲ್ಲಿ ಹೊಸ ಮೈಲುಗಲ್ಲು: “ಗೆಳೆಯರ ಬಳಗ ಸಹಕಾರ ಸಂಘದ” ನೂತನ ಕಚೇರಿ ಉದ್ಘಾಟನೆ – ಅನಿಲ್ ಕುಂಚಿ ನಾಯಕತ್ವಕ್ಕೆ ಗಣ್ಯರ ಶ್ಲಾಘನೆ!

Leave a Comment