ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

​’ಇರುವುದೊಂದೇ ಭೂಮಿ, ರಕ್ಷಣೆ ನಮ್ಮ ಹೊಣೆ: ಪ್ರಕೃತಿ ಮೇಲಿನ ದಬ್ಬಾಳಿಕೆ ನಿಲ್ಲಿಸಿ ಮನುಷ್ಯನೇ ತಪ್ಪು ಸರಿಪಡಿಸಿಕೊಳ್ಳಲಿ’ – ಜಿ.ಡಿ. ಮಂಜುನಾಥ್

On: June 11, 2026 1:18 PM
Follow Us:

​ನಗರದ ಶಾಂತವೇರಿ ಗೋಪಾಲಗೌಡ ಬಡಾವಣೆಯ ಕ್ರೀಡಾ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಈ ಕಾರ್ಯಕ್ರಮವನ್ನು ಗೋಪಾಲಗೌಡ ಬಡಾವಣೆಯ ಡಿ-ಬ್ಲಾಕ್ ನಿವಾಸಿಗಳು, ಶ್ರೀ ಸಿದ್ಧಿ ವಿನಾಯಕ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಹಾಗೂ ಚಂದನ ಪಾರ್ಕಿನ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

🌱 ‘ಇರುವುದೊಂದೇ ಭೂಮಿ, ರಕ್ಷಣೆ ನಮ್ಮ ಹೊಣೆ’

ಗಿಡ ನೆಟ್ಟು ಮಾತನಾಡಿದ ಜಿ.ಡಿ. ಮಂಜುನಾಥ್ ಅವರು, ಪ್ರಕೃತಿಯ ಮೇಲಿನ ಮಾನವನ ಹಸ್ತಕ್ಷೇಪ ಮತ್ತು ದಬ್ಬಾಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು.

“ಇಂದು ತಂತ್ರಜ್ಞಾನ ಮತ್ತು ನಗರೀಕರಣದ ಹೆಸರಿನಲ್ಲಿ ಪರಿಸರ ತೀವ್ರವಾಗಿ ಕಲುಷಿತಗೊಳ್ಳುತ್ತಿದೆ. ಮಾನವನು ತನ್ನ ಸ್ವಾರ್ಥಕ್ಕಾಗಿ ಮಾಡಿದ ತಪ್ಪುಗಳ ಪರಿಣಾಮವನ್ನು ಇಂದು ನಾವೆಲ್ಲರೂ ಎದುರಿಸುತ್ತಿದ್ದೇವೆ. ನಾವು ಮಾಡಿದ ತಪ್ಪನ್ನು ನಾವೇ ತಿದ್ದಿಕೊಳ್ಳಬೇಕಿದೆ. ‘ಇರುವುದೊಂದೇ ಭೂಮಿ’ ಎಂಬ ಸತ್ಯವನ್ನು ಅರಿತು, ಅದನ್ನು ಮುಂದಿನ ಪೀಳಿಗೆಗಾಗಿ ರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಪ್ರತಿಯೊಬ್ಬರೂ ಕನಿಷ್ಠ ಒಂದೊಂದು ಗಿಡವನ್ನು ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು,” ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮೆಸ್ಕಾಂ ಸಲಹಾ ಸಮಿತಿ ಸದಸ್ಯರಾದ ಆರ್. ರಾಜಶೇಖರ್ ಅವರು ಮಾತನಾಡಿ, ಪರಿಸರ ಜಾಗೃತಿ ಕೇವಲ ಭಾಷಣಕ್ಕೆ ಸೀಮಿತವಾಗದೆ ಕ್ರಿಯಾರೂಪಕ್ಕೆ ಬರಬೇಕು ಎಂದು ಆಶಯ ವ್ಯಕ್ತಪಡಿಸಿದರು.

​ಈ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಗೂ ಪದಾಧಿಕಾರಿಗಳಾದ ಗೀತೇಂದ್ರ ಗೌಡ್ರು, ಗುರುರಾಜ್ ಎಲ್., ಜಿ.ಎಸ್. ಶಿವಕುಮಾರ್, ಅಶೋಕ್, ಬೋರೇಗೌಡರು, ರವಿ, ಬಸವರಾಜ್, ರಂಗಣ್ಣ, ಮಲ್ಲಿಕಾರ್ಜುನ, ರವಿಕುಮಾರ್, ವಿಜಯ್ ಕುಮಾರ್ ಸೇರಿದಂತೆ ಬಡಾವಣೆಯ ನೂರಾರು ಸಾರ್ವಜನಿಕರು ಮತ್ತು ಪರಿಸರ ಪ್ರೇಮಿಗಳು ಉಪಸ್ಥಿತರಿದ್ದು, ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಶಿವಮೊಗ್ಗದ ಸಾರ್ವಜನಿಕ ಸಾರಿಗೆಗೆ ಹೊಸ ವೇಗ: 50 ಪಿಎಂ ಇ-ಬಸ್‌ಗಳನ್ನು ಶೀಘ್ರ ರಸ್ತೆಗಿಳಿಸಲು ಸಾರಿಗೆ ಸಚಿವರಿಗೆ ಚೇತನ್ ಕೆ. ಗೌಡ ಮನವಿ

ಸಣ್ಣ ವ್ಯಾಪಾರಿಗಳೇ ಆತಂಕ ಬೇಡ!: ಪ್ರತಿಯೊಂದು ಯುಪಿಐ ವಹಿವಾಟಿಗೂ ಶುಲ್ಕ ಎನ್ನುವುದು ತೀರಾ ಹಸಿ ಸುಳ್ಳು!

ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರಿಗೆ ಮಂತ್ರಿಗಿರಿ ಏಕೆ?: ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ

‘ನಮ್ಮ ಭೂಮಿ–ನಮ್ಮ ಹಕ್ಕು’ ಘೋಷಣೆಗೆ ಶಿವಮೊಗ್ಗ ಜೆಡಿಎಸ್ ಧ್ವನಿ: ಬಿಡದಿ ಪಾದಯಾತ್ರೆಗೆ ಕೆ.ಬಿ. ಪ್ರಸನ್ನ ಕುಮಾರ್ ಬೆಂಬಲ

ಕಾರ್ಪೊರೇಟ್‌ಗಳ ವಿರುದ್ಧ ರೈತರ ಆಕ್ರೋಶ; ರಸ್ತೆ ತಡೆಗೆ ಇಳಿದ ಹೆಚ್.ಆರ್. ಬಸವರಾಜಪ್ಪ ಸೇರಿ ಮುಖಂಡರ ಬಂಧನ

ಶಿವಮೊಗ್ಗದಲ್ಲಿ ‘ಹರ್ ಘರ್ ತಿರಂಗಾ’ ಸಂಭ್ರಮ: 30 ಸಾವಿರ ಮನೆಗಳಿಗೆ ರಾಷ್ಟ್ರಧ್ವಜ ವಿತರಣೆ, ಬೃಹತ್ ತಿರಂಗಾ ಯಾತ್ರೆಗೆ ಬಿಜೆಪಿ ಸಿದ್ಧತೆ

Leave a Comment