ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಚಿವ ಈಶ್ವರ ಖಂಡ್ರೆ ಭವಿಷ್ಯದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವುದು ನಿಶ್ಚಿತ: ಶ್ರೀ ರಂಭಾಪುರಿ ಜಗದ್ಗುರುಗಳ ಭವಿಷ್ಯ

On: June 17, 2026 2:11 PM
Follow Us:

​ಬೀದರ್ / ಬಸವಕಲ್ಯಾಣ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಈಶ್ವರ ಖಂಡ್ರೆ ಅವರು ಮುಂದೊಂದು ದಿನ ಕರ್ನಾಟಕದ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಜಗದ್ಗುರು ಶ್ರೀ ಪ್ರಸನ್ನರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಭವಿಷ್ಯ ನುಡಿದಿದ್ದಾರೆ.

​ಬಸವಕಲ್ಯಾಣ ತಾಲೂಕಿನ ತಡೋಳಾದ ಶ್ರೀಮಠದಲ್ಲಿ ಮಂಗಳವಾರ ಜಿಲ್ಲೆಯ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಜರುಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವ ಈಶ್ವರ ಖಂಡ್ರೆ ಅವರಿಗೆ ಆಶೀರ್ವದಿಸಿ ಜಗದ್ಗುರುಗಳು ಮಾತನಾಡಿದರು. “ಮುಂದಿನ ದಿನಗಳಲ್ಲಿ ಖಂಡ್ರೆ ಅವರು ರಾಜ್ಯದ ಮುಖ್ಯಮಂತ್ರಿ ಪೀಠ ಅಲಂಕರಿಸಲಿದ್ದಾರೆ. ಆದರೆ, ಅವರು ಈಗಲೇ ಸಿಎಂ ಆಗಬೇಕು ಅಥವಾ 2028ರಲ್ಲೇ ಆಗಬೇಕೆಂಬ ಯಾವುದೇ ತಪ್ಪು ಕಲ್ಪನೆ ಹಾಗೂ ಅವಸರ ಯಾರಿಗೂ ಬೇಡ. ಮಾಧ್ಯಮದವರು ಸಹ ಈ ವಿಷಯದ ಬಗ್ಗೆ ಬೇರೆ ರೀತಿಯ ವ್ಯಾಖ್ಯಾನಗಳನ್ನು ನೀಡಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಬಾರದು. ಭವಿಷ್ಯದಲ್ಲಿ ಅವರು ಖಂಡಿತವಾಗಿಯೂ ಮುಖ್ಯಮಂತ್ರಿಯಾಗುತ್ತಾರೆ ಎಂಬ ದೃಢವಾದ ಆತ್ಮವಿಶ್ವಾಸ ನಮಗಿದೆ” ಎಂದು ಶ್ರೀಗಳು ಸ್ಪಷ್ಟಪಡಿಸಿದರು.

ದೊಡ್ಡ ಸ್ಥಾನ ಅಲಂಕರಿಸುವ ಯೋಗ್ಯತೆ ಖಂಡ್ರೆ ಅವರಿಗಿದೆ: ಶ್ರೀ ರಂಭಾಪುರಿ ಜಗದ್ಗುರುಗಳು

ಖಂಡ್ರೆ ಪರಿವಾರವು ಸುದೀರ್ಘ ಅವಧಿಯಿಂದ ಜನಸೇವೆಗೆ ತನ್ನನ್ನು ತಾನು ಸಮರ್ಪಿಸಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾ ಬಂದಿದೆ ಎಂದು ಶ್ಲಾಘಿಸಿದ ಶ್ರೀಗಳು, “ಈಶ್ವರ ಖಂಡ್ರೆ ಅವರಿಗೆ ಮುಂದೆ ಇನ್ನಷ್ಟು ಉನ್ನತ ರಾಜಕೀಯ ಸ್ಥಾನಮಾನಗಳು ಒಲಿದು ಬರಲಿವೆ. ಬೀದರ್ ಜಿಲ್ಲೆಯ ಜನತೆ, ನಾಡಿನ ಅಭಿಮಾನಿಗಳ ಸಹಕಾರ, ಪ್ರೋತ್ಸಾಹ ಹಾಗೂ ಭಗವಂತನ ಕೃಪೆಯಿಂದ ಅವರು ಅತ್ಯುನ್ನತ ಜವಾಬ್ದಾರಿಯನ್ನು ಹೊರಲಿದ್ದಾರೆ” ಎಂದು ಹೇಳಿದರು.

“ರಾಜ್ಯದ ಮುಖ್ಯಮಂತ್ರಿಯಾಗಲು ಬೇಕಾದ ಎಲ್ಲಾ ಅರ್ಹತೆ, ಯೋಗ್ಯತೆ ಮತ್ತು ಆಡಳಿತಾತ್ಮಕ ಸಾಮರ್ಥ್ಯವನ್ನು ಈಶ್ವರ ಖಂಡ್ರೆ ಹೊಂದಿದ್ದಾರೆ” ಎಂದು ಜಗದ್ಗುರುಗಳು ಮುಕ್ತ ಕಂಠದಿಂದ ಪ್ರಶಂಸಿಸಿದರು.

​ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ಸಚಿವ ಈಶ್ವರ ಖಂಡ್ರೆ ಅವರನ್ನು ಮಠದ ವತಿಯಿಂದ ಸನ್ಮಾನಿಸಿ, ಶುಭ ಹಾರೈಸಲಾಯಿತು.

​ಈ ಸಂದರ್ಭದಲ್ಲಿ ಮೆಹಕರ್-ತಡೋಳಾ ಸಂಸ್ಥಾನದ ಶ್ರೀ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಹುಡಗಿಯ ಶ್ರೀ ವಿರೂಪಾಕ್ಷ ಶಿವಾಚಾರ್ಯರು, ಹಲಬರ್ಗಾದ ಶ್ರೀ ಹಾವಗಿಲಿಂಗೇಶ್ವರ ಶಿವಾಚಾರ್ಯರು, ಶ್ರೀ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯರು ಹಾಗೂ ಶ್ರೀ ಘನಲಿಂಗ ರುದ್ರಮುನಿ ಶಿವಾಚಾರ್ಯರು ಸೇರಿದಂತೆ ಬೀದರ್ ಜಿಲ್ಲೆಯ ವಿವಿಧ ಮಠಗಳ ಪ್ರಮುಖ ಪೂಜ್ಯರು ಉಪಸ್ಥಿತರಿದ್ದು ಆಶೀರ್ವದಿಸಿದರು.

ಪೂಜ್ಯರ ಆಶೀರ್ವಾದವೇ ಜನಸೇವೆಗೆ ಪ್ರೇರಣೆ: ಸಚಿವ ಈಶ್ವರ ಖಂಡ್ರೆ

ಜಗದ್ಗುರುಗಳ ಹಾಗೂ ವಿವಿಧ ಮಠಾಧೀಶರ ಆಶೀರ್ವಾದ ಸ್ವೀಕರಿಸಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ ಅವರು, “ಪೂಜ್ಯ ಮಹಾಸ್ವಾಮಿಗಳ ಆಶೀರ್ವಾದದ ನುಡಿಗಳು ಮತ್ತು ಅವರ ಮಾರ್ಗದರ್ಶನವು ಸಾರ್ವಜನಿಕ ಜೀವನದಲ್ಲಿ ಮತ್ತಷ್ಟು ಜವಾಬ್ದಾರಿಯಿಂದ ಹಾಗೂ ನಿಷ್ಠೆಯಿಂದ ಕಾರ್ಯನಿರ್ವಹಿಸಲು ನನಗೆ ಮಹತ್ತರವಾದ ಪ್ರೇರಣೆ ನೀಡಿದೆ” ಎಂದು ಹೇಳಿದರು.

“ರಾಜ್ಯದ ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ” ಎಂದು ಅವರು ಭರವಸೆ ನೀಡಿದರು.

K.M.Sathish Gowda

Join WhatsApp

Join Now

Facebook

Join Now

Read more

ನಮಗೆ ನಿಮ್ಮ ‘ಫ್ರೀ ಬಸ್’ ಬೇಡ, ಟೈಮಿಗೆ ಬಸ್ ಕೊಡಿ! ಹೊಸನಗರ ಮಾರ್ಗದಲ್ಲಿ ಸಾರಿಗೆ ಇಲಾಖೆಯ ನಾಟಕಕ್ಕೆ ಬ್ರೇಕ್ ಹಾಕಿ ಸಚಿವ ಬೈರತಿ ಸುರೇಶ್ ಅವರೇ!

3 ವರ್ಷಕ್ಕೆ ₹100 ಕೋಟಿ ಪೋಲು; ಏನೂ ಕೆಲಸ ಮಾಡದ ಗ್ಯಾರಂಟಿ ಸಮಿತಿ ನಮಗೆ ಬೇಕೇ? ಸರಕಾರದ ವಿರುದ್ಧ ಬಿಜೆಪಿ ರಾಜ್ಯ ವಕ್ತಾರ ಎಸ್. ಪ್ರಕಾಶ್ ವಾಗ್ದಾಳಿ!

ದ.ರಾ.ಬೇಂದ್ರೆಯವರ ಆದರ್ಶಗಳನ್ನು ಸಾಕಾರಗೊಳಿಸುತ್ತಿರುವ ಗೆಳೆಯರ ಬಳಗ ಸೌಹಾರ್ದ ಸಹಕಾರಿ ಸಂಘ; ವಿಶ್ವಾಸ, ಸೇವೆ ಮತ್ತು ಸಹಕಾರದ ಶಕ್ತಿಯೇ ಸಂಘದ ಯಶಸ್ಸಿನ ಹಿಂದಿನ ಶಕ್ತಿ: ಶ್ರೀ ರಂಭಾಪುರಿ ಜಗದ್ಗುರುಗಳು

ಶಿವಮೊಗ್ಗದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ: ರಕ್ತದಾನದಿಂದ ಜೀವ ಉಳಿಸುವ ಶ್ರೇಷ್ಠ ಕಾರ್ಯದಲ್ಲಿ ಪಾಲ್ಗೊಳ್ಳಿ: ಜಿ. ವಿಜಯ್ ಕುಮಾರ್

ದಲಿತ ಮುಖ್ಯಮಂತ್ರಿ ಕನಸು: ಆತ್ಮಾಭಿಮಾನದ ಹಕ್ಕೊತ್ತಾಯವೇ, ಆತ್ಮವಂಚನೆಯ ರಾಜಕಾರಣವೇ?

ಶಿವಮೊಗ್ಗ ಜಿಲ್ಲಾ ವಿತರಕರ ಸಂಘದಿಂದ ವಿಶ್ವ ರಕ್ತದಾನಿಗಳ ದಿನಾಚರಣೆ: ​ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯ: ಬಿ. ಗೋಪಿನಾಥ್ ಕರೆ

Leave a Comment