ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಅಂತರರಾಷ್ಟ್ರೀಯ ಸಹಕಾರಿ ದಿನಾಚರಣೆ: ಸಹಕಾರ ಕ್ಷೇತ್ರದ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅತ್ಯಂತ ಮಹತ್ವದ್ದು: ಸಂಸದ ಬಿ.ವೈ. ರಾಘವೇಂದ್ರ

On: July 4, 2026 1:37 PM
Follow Us:

ಶಿಕಾರಿಪುರ: ಗ್ರಾಮೀಣ ಆರ್ಥಿಕತೆಯ ಹಾಗೂ ರೈತರ ಬೆನ್ನೆಲುಬಾಗಿ ಹಗಲಿರುಳು ಶ್ರಮಿಸುವ ಸಹಕಾರ ಕ್ಷೇತ್ರದ ಪ್ರತಿಯೊಬ್ಬ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ಸದಸ್ಯರ ಆರೋಗ್ಯ ರಕ್ಷಣೆ ಅತ್ಯಂತ ಪ್ರಮುಖವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

​ಅಂತರರಾಷ್ಟ್ರೀಯ ಸಹಕಾರಿ ದಿನ ಹಾಗೂ ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ 5 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಶಿಕಾರಿಪುರದ ಶಾಂತಿನಗರದ ಬನಸಿರಿ ಸಭಾಂಗಣದಲ್ಲಿ ತಾಲ್ಲೂಕಿನ ಎಲ್ಲಾ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರಿಗೆ ಮತ್ತು ಸಿಬ್ಬಂದಿ ವರ್ಗದವರಿಗಾಗಿ ಆಯೋಜಿಸಲಾಗಿದ್ದ “ಒಂದು ದಿನದ ವಿಶೇಷ ಆರೋಗ್ಯ ತಪಾಸಣೆ ಶಿಬಿರ ಮತ್ತು ಆರೋಗ್ಯ ಮಾಹಿತಿ ಕಾರ್ಯಾಗಾರ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರಿಗಳ ಆರೋಗ್ಯ ರಕ್ಷಣೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಂಸದರು, “ದೇಶದ ಮತ್ತು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಸಹಕಾರ ರಂಗದ ಪಾತ್ರ ಹಿರಿದಾದುದು. ಗ್ರಾಮೀಣ ಮಟ್ಟದಲ್ಲಿ ಸಾಮಾನ್ಯ ಜನರಿಗೆ ಮತ್ತು ರೈತಾಪಿ ವರ್ಗಕ್ಕೆ ಆರ್ಥಿಕ ಶಕ್ತಿ ತುಂಬುವ ಸಹಕಾರ ಕ್ಷೇತ್ರದ ಬಲವರ್ಧನೆಗೆ ಶ್ರಮಿಸುತ್ತಿರುವ ನಮ್ಮ ಹೆಮ್ಮೆಯ ಸಿಬ್ಬಂದಿ ವರ್ಗದವರು ತಮ್ಮ ದೈನಂದಿನ ಕಾರ್ಯದೊತ್ತಡದ ನಡುವೆಯೂ ಆರೋಗ್ಯದ ಕಡೆಗೆ ಗಮನ ಹರಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಉಚಿತ ತಪಾಸಣೆ ಹಾಗೂ ಸೂಕ್ತ ಆರೋಗ್ಯದ ಮಾಹಿತಿ ಒದಗಿಸುತ್ತಿರುವ ಈ ಶಿಬಿರವು ಅತ್ಯಂತ ಶ್ಲಾಘನೀಯವಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಸಹಕಾರ ಕ್ಷೇತ್ರದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿರುವ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಮತ್ತು ಸುಖಿ ಜೀವನ ಲಭಿಸಲಿ” ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.

​ಶಿಬಿರದಲ್ಲಿ ತಾಲ್ಲೂಕಿನ ನೂರಾರು ಸಹಕಾರ ಸಂಘಗಳ ಪದಾಧಿಕಾರಿಗಳು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡು ಉಚಿತ ಆರೋಗ್ಯ ತಪಾಸಣೆಯ ಸೌಲಭ್ಯವನ್ನು ಪಡೆದುಕೊಂಡರು. ತಜ್ಞ ವೈದ್ಯರ ತಂಡದಿಂದ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ತಪಾಸಣೆ ನಡೆಸಿ, ಸೂಕ್ತ ಸಲಹೆ ಹಾಗೂ ಆರೋಗ್ಯ ಜಾಗೃತಿಯ ಮಾಹಿತಿಯನ್ನು ನೀಡಲಾಯಿತು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. (ಬೆಂಗಳೂರು), ಬಸವೇಶ್ವರ ಸಹಕಾರಿ ಒಕ್ಕೂಟ (ಶಿಕಾರಿಪುರ), ತಾಲ್ಲೂಕು ಸಹಕಾರ ಭಾರತಿ (ಶಿಕಾರಿಪುರ), ಸಹಕಾರ ಇಲಾಖೆ (ಶಿವಮೊಗ್ಗ) ಮತ್ತು ಉಪವಿಭಾಗ (ಸಾಗರ) ಹಾಗೂ ಶಿಕಾರಿಪುರ ತಾಲ್ಲೂಕಿನ ವಿವಿಧ ಎಲ್ಲಾ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಸಹಕಾರ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಸಹಕಾರ ಸಂಘಗಳ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಹಕಾರ ಪ್ರಮುಖರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಮತದಾರರ ಪಟ್ಟಿ ಪರಿಷ್ಕರಣೆ ದುರ್ಬಳಕೆ: ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗದಿಂದ ದೂರು

ರಾಜಕೀಯ ನಾಯಕರಿಗೆ ನಡುಕ: 30 ದಿನ ಜೈಲಿನಲ್ಲಿದ್ದರೆ ಮುಖ್ಯಮಂತ್ರಿ, ಸಚಿವರ ಹುದ್ದೆ ಸ್ವಯಂಚಾಲಿತ ರದ್ದು? ಮುಂಗಾರು ಕಲಾಪದಲ್ಲಿ 130ನೇ ತಿದ್ದುಪಡಿ ಅಸ್ತ್ರ!

ಜರ್ಮನಿ ಪ್ರವಾಸದಲ್ಲಿದ್ದೂ ಉಗಾಂಡಾದ ಭಕ್ತರ ಕಣ್ಣೀರು ಒರೆಸಿದ ಶ್ರೀ ತರಳಬಾಳು ಜಗದ್ಗುರುಗಳು; “ಮಗಳ ಕೊನೆ ಮುಖ ನೋಡಬೇಕೆಂಬ” ತಾಯಿಯ ಆಕ್ರಂದನಕ್ಕೆ ತಕ್ಷಣವೇ ಸ್ಪಂದಿಸಿದ ಕರುಣಾಮಯಿ ಜಗದ್ಗುರುಗಳು

ಸಾವಿನ ಬಲೆ ಹೆಣೆಯುತ್ತಿರುವ ಕೇಬಲ್‌ಗಳು: ವಿದ್ಯುತ್ ಇಲಾಖೆ–ಮಹಾನಗರ ಪಾಲಿಕೆಯ ನಿರ್ಲಕ್ಷ್ಯಕ್ಕೆ ಕೋಟೆ ರಸ್ತೆಯಲ್ಲಿ ಹಸು ಬಲಿ; ನಗರದ ವಿದ್ಯುತ್ ಕಂಬಗಳಲ್ಲೇ ಸಾಕ್ಷಾತ್ ಯಮನ ದರ್ಶನ!

ಸಮಾಜಮುಖಿ ಸೇವೆಯಲ್ಲಿ ಶಿವಮೊಗ್ಗ ಸರ್ವೋದಯ ಮಂಡಳಿ ರಾಜ್ಯಕ್ಕೆ ಮಾದರಿ: ಡಾ. ಎಚ್.ಎಸ್. ಸುರೇಶ್

​ವಿದ್ಯೆಯ ಜೊತೆಗೆ ಸಂಸ್ಕಾರಯುತ ಶಿಕ್ಷಣ ಇಂದಿನ ತುರ್ತು ಅಗತ್ಯ; ಸಿದ್ಧಗಂಗಾ ಶ್ರೀಗಳ ದಾಸೋಹ ಪರಂಪರೆಯೇ ನಮಗೆ ಪ್ರೇರಣೆ: ಸಿ.ಎಸ್. ಷಡಾಕ್ಷರಿ

Leave a Comment