ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

On: July 26, 2026 10:27 PM
Follow Us:

ಶಿವಮೊಗ್ಗ, ಜುಲೈ 26: ಮಾಜಿ ಶಾಸಕ ಹಾಗೂ ಕರ್ನಾಟಕ ಮಾಜಿ ಶಾಸಕರ ವೇದಿಕೆಯ ರಾಜ್ಯಾಧ್ಯಕ್ಷರಾಗಿದ್ದ ಹೆಚ್.ಎಂ. ಚಂದ್ರಶೇಖರಪ್ಪ ಅವರ ನಿಧನಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಕ್ರಿಯಾಶೀಲ, ನೇರ ಹಾಗೂ ನಿಷ್ಠುರ ವ್ಯಕ್ತಿತ್ವ ಹೊಂದಿದ್ದ ಹೆಚ್.ಎಂ. ಚಂದ್ರಶೇಖರಪ್ಪ ಅವರು ವೀರಶೈವ-ಲಿಂಗಾಯತ ಸಮಾಜದ ಹಿತಕ್ಕಾಗಿ ಅವಿರತವಾಗಿ ಶ್ರಮಿಸಿದವರು. ತಮ್ಮೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಅವರು ಸಮಾಜದ ಅಭಿವೃದ್ಧಿ ಹಾಗೂ ಜನಹಿತದ ವಿಚಾರಗಳನ್ನು ಸದಾ ಹಂಚಿಕೊಳ್ಳುತ್ತಿದ್ದ ಸಂದರ್ಭಗಳನ್ನು ಮರೆಯಲು ಸಾಧ್ಯವಿಲ್ಲ ಎಂದು ಜಗದ್ಗುರುಗಳು ಸ್ಮರಿಸಿದ್ದಾರೆ.

ಸುಮಾರು 34 ವರ್ಷಗಳ ಹಿಂದೆ ಶಿವಮೊಗ್ಗದಲ್ಲಿ ನಡೆದ ಶ್ರೀ ಜಗದ್ಗುರು ಪಂಚಾಚಾರ್ಯ ಅಡ್ಡಪಲ್ಲಕ್ಕಿ ಮಹೋತ್ಸವ ಯಶಸ್ವಿಗೊಳಿಸಲು ಅವರು ಅತ್ಯಂತ ಸಕ್ರಿಯವಾಗಿ ಶ್ರಮಿಸಿದ್ದರು. ಆ ಮಹೋತ್ಸವದ ಬಳಿಕವೇ ಶಿವಮೊಗ್ಗ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದು, ಅದು ಗುರುಸೇವೆಯ ಫಲವೆಂಬ ಭಾವನೆಯನ್ನು ಅವರು ಸದಾ ವ್ಯಕ್ತಪಡಿಸುತ್ತಿದ್ದರು ಎಂದು ತಿಳಿಸಿದ್ದಾರೆ.

ಅಗಲಿದ ಹೆಚ್.ಎಂ. ಚಂದ್ರಶೇಖರಪ್ಪ ಅವರ ಪವಿತ್ರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ಕರುಣಿಸಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರು ಹಾಗೂ ಅಪಾರ ಅಭಿಮಾನಿಗಳಿಗೆ ದಯಪಾಲಿಸಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಶಿವಮೊಗ್ಗದ ಮಾಜಿ ಶಾಸಕ, ಕರ್ನಾಟಕ ಮಾಜಿ ಶಾಸಕರ ವೇದಿಕೆ ರಾಜ್ಯಾಧ್ಯಕ್ಷರಾದ ಹೆಚ್.ಎಂ. ಚಂದ್ರಶೇಖರಪ್ಪ ನಿಧನ

ಮಣ್ಣಿನ ಅಡಿಯಲ್ಲಿರುವ ಇತಿಹಾಸವನ್ನು ಸಮಾಜದ ಮುಂದೆ ತರುತ್ತಿರುವ ಮಲೆನಾಡು ಇತಿಹಾಸ ಸಂಶೋಧನೆ ಮತ್ತು ಅಧ್ಯಯನ ವೇದಿಕೆಯ ಕಾರ್ಯ ಶ್ಲಾಘನೀಯ; ನಿಮ್ಮ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ: ಕೆ.ಎಸ್. ಈಶ್ವರಪ್ಪ

ಧರ್ಮೇಂದ್ರ ಪ್ರಧಾನ ನಿರ್ಧಾರ ವಿದ್ಯಾರ್ಥಿಗಳ ಹಿತಕ್ಕಾಗಿ; ಪರೀಕ್ಷಾ ವ್ಯವಸ್ಥೆಯಲ್ಲಿ ಮೋದಿ ಸರ್ಕಾರ ಮಹತ್ವದ ಸುಧಾರಣೆ ತಂದಿದೆ, ಕಾಂಗ್ರೆಸ್ ಮಾತ್ರ ರಾಜಕೀಯ ಮಾಡುತ್ತಿದೆ: ಬಿ.ವೈ. ವಿಜಯೇಂದ್ರ

​ನೀಟ್-ಯುಜಿ ಅಕ್ರಮ ವಿವಾದ: ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

SIR ಮನೆ ಮನೆ ಅಭಿಯಾನಕ್ಕೆ ಯುವಶಕ್ತಿ ಸಜ್ಜಾಗಲಿ; ಕಾಂಗ್ರೆಸ್ ಅಪಪ್ರಚಾರಕ್ಕೆ ತಕ್ಕ ಉತ್ತರ ಕೊಡಿ: ಸಂಸದ ಬಿ.ವೈ. ರಾಘವೇಂದ್ರ

ಮತದಾನ ನಮ್ಮ ಹಕ್ಕು, ಹೆಸರು ನೋಂದಣಿ ನಮ್ಮ ಹೊಣೆ: ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಜುಲೈ 25-26ರಂದು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ

Leave a Comment