ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

​ಮಂಡ್ಯದಲ್ಲಿ ರೈತ ದಂಪತಿ ಆತ್ಮಹತ್ಯೆ ದುರಂತ,!: ​”ಎಸಿ ಕೊಠಡಿ ಬಿಟ್ಟು ಜನರ ಬಳಿ ಬನ್ನಿ”: ರೈತನ ಆತ್ಮಹತ್ಯೆ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ

On: July 31, 2026 5:22 PM
Follow Us:

ಮಂಡ್ಯ, ಜುಲೈ 31: ಮಂಡ್ಯ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಸಾಲದ ಬಾಧೆ ತಾಳಲಾರದೆ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅತ್ಯಂತ ನೋವುಂಟು ಮಾಡುವ ಹಾಗೂ ರಾಜ್ಯದ ಕೃಷಿ ವಲಯ ಎದುರಿಸುತ್ತಿರುವ ಗಂಭೀರ ಸಂಕಷ್ಟವನ್ನು ಬಿಂಬಿಸುವ ದುರಂತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಮಂಡ್ಯ ತಾಲೂಕಿನ ಬೀಚನಹಳ್ಳಿ ಗ್ರಾಮದ ರೈತ ಪುಟ್ಟಸ್ವಾಮಿ ಹಾಗೂ ಅವರ ಪತ್ನಿ ನಾಗಮ್ಮ ಅವರು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ದುರ್ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ವಿಜಯೇಂದ್ರ, ಮೃತ ರೈತ ದಂಪತಿಯ ಕುಟುಂಬಕ್ಕೆ ತಮ್ಮ ಸಾಂತ್ವನ ಸಲ್ಲಿಸಿದರು.

​ಬೀಚನಹಳ್ಳಿ ಗ್ರಾಮದ ಪುಟ್ಟಸ್ವಾಮಿ ಮತ್ತು ನಾಗಮ್ಮ ದಂಪತಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಐದು ಎಕರೆ ಜಮೀನಿನಲ್ಲಿ ಟೊಮ್ಯಾಟೊ ಸೇರಿದಂತೆ ವಿವಿಧ ತರಕಾರಿ ಬೆಳೆಗಳನ್ನು ಬೆಳೆದಿದ್ದ ಈ ದಂಪತಿ, ನಿರಂತರ ಬೆಳೆ ನಷ್ಟ ಹಾಗೂ ಕೃಷಿ ವೆಚ್ಚದ ಒತ್ತಡದಿಂದಾಗಿ ₹10 ರಿಂದ ₹15 ಲಕ್ಷದಷ್ಟು ಸಾಲ ಮಾಡಿಕೊಂಡಿದ್ದರು. ಕೊನೆಗೆ ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ, ಸಾಲದ ಬಡ್ಡಿಯನ್ನು ಸಹ ತೀರಿಸಲಾಗದ ಭೀಕರ ಪರಿಸ್ಥಿತಿಗೆ ಸಿಲುಕಿ ಈ ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ. ಈ ಘಟನೆ ನಿಜಕ್ಕೂ ಅತ್ಯಂತ ದುರದೃಷ್ಟಕರ ಎಂದು ವಿಜಯೇಂದ್ರ ವಿಷಾದಿಸಿದರು.

​ಎಷ್ಟೇ ದೊಡ್ಡ ಕಷ್ಟಗಳು ಬಂದರೂ ರೈತರು ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ಮತ್ತು ಆತ್ಮಹತ್ಯೆಯಂತಹ ಅತಿಯಾದ ನಿರ್ಧಾರಗಳಿಗೆ ಮುಂದಾಗಬಾರದು ಎಂದು ವಿಜಯೇಂದ್ರ ಮನವಿ ಮಾಡಿದರು. ಸಮಸ್ಯೆ ಎಷ್ಟೇ ಸವಾಲಿನದ್ದಾಗಿದ್ದರೂ ಅದಕ್ಕೆ ಪರಿಹಾರ ಕಂಡುಕೊಳ್ಳುವ ವಿಶ್ವಾಸವನ್ನು ನಮ್ಮ ರೈತರು ಕಳೆದುಕೊಳ್ಳಬಾರದು, ಎಂದು ಅವರು ಕರೆ ನೀಡಿದರು.

​ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ನಡವಳಿಕೆಯನ್ನು ತೀವ್ರವಾಗಿ ತಟಸ್ಥಗೊಳಿಸಿದ ವಿಜಯೇಂದ್ರ, ಕೆಲವು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು:

  • ಬರಪೀಡಿತ ಪ್ರದೇಶ ಘೋಷಣೆ: ಮಳೆ ಅಭಾವದಿಂದ ಕಂಗೆಟ್ಟಿರುವ ತಾಲೂಕುಗಳನ್ನು ತಕ್ಷಣವೇ ‘ಬರಪೀಡಿತ ಪ್ರದೇಶಗಳು’ ಎಂದು ಅಧಿಕೃತವಾಗಿ ಘೋಷಿಸಬೇಕು.
  • ಸಾಲಮನ್ನಾ ಮತ್ತು ಪರಿಹಾರ: ಸಂಕಷ್ಟದಲ್ಲಿರುವ ರೈತರ ಕೃಷಿ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಮತ್ತು ತಕ್ಷಣವೇ ಸೂಕ್ತ ಪರಿಹಾರ ಪ್ಯಾಕೇಜ್ ಪ್ರಕಟಿಸಬೇಕು.
  • ಧೈರ್ಯ ತುಂಬುವ ಕೆಲಸ: ರೈತರಿಗೆ “ಬಿತ್ತನೆ ಮಾಡಬೇಡಿ, ಬೆಳೆ ಬೆಳೆಯಬೇಡಿ” ಎಂದು ಸಲಹೆ ನೀಡಿ ನಿರಾಶೆಗೊಳಿಸುವ ಬದಲು, ಸರ್ಕಾರ ಅವರಲ್ಲಿ ಭರವಸೆ ಮತ್ತು ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು.

​ರಾಜ್ಯಾದ್ಯಂತ ಮಳೆ ಕೊರತೆಯಿಂದಾಗಿ ಕೃಷಿ ಕ್ಷೇತ್ರ ತೀವ್ರ ಸಂಕಷ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ವಿಶೇಷ ತಂಡಗಳು ರಾಜ್ಯದ ಮೂಲೆ ಮೂಲೆಗಳಿಗೆ ಭೇಟಿ ನೀಡಿ ರೈತರ ವಸ್ತುಸ್ಥಿತಿಯನ್ನು ಅಧ್ಯಯನ ಮಾಡುತ್ತಿವೆ. ಸರ್ಕಾರ ಕೂಡಲೇ ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡು ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

​ಕಾವೇರಿ ನೀರಾವರಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿದ ವಿಜಯೇಂದ್ರ, ಜೂನ್ ತಿಂಗಳಲ್ಲೇ ತಮಿಳುನಾಡಿಗೆ ನೀರು ಹರಿಸಿ, ಈಗ ನಮ್ಮ ರಾಜ್ಯದ ರೈತರಿಗೆ ಬಿತ್ತನೆ ಮಾಡಬೇಡಿ ಎಂದು ಉಚಿತ ಸಲಹೆ ನೀಡುವುದು ಎಷ್ಟರ ಮಟ್ಟಿಗೆ ಸರಿ? ಎಂದು ಆಕ್ರೋಶ ಹೊರಹಾಕಿದರು. ಸರ್ವಪಕ್ಷ ಸಭೆ ಕರೆದು ಕಪಟ ನಾಟಕ ಆಡುವ ಬದಲು, ಇಂತಹ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಮಾಡಿಟ್ಟುಕೊಂಡಿರುವ ಪೂರ್ವಸಿದ್ದತೆಗಳೇನು ಎಂಬುದನ್ನು ಬಹಿರಂಗಪಡಿಸಬೇಕು ಎಂದು ಸವಾಲು ಹಾಕಿದರು.

​ಬೆಂಗಳೂರಿನ ಎಸಿ ಕೊಠಡಿಗಳಲ್ಲಿ ಕುಳಿತು ಅಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ನಡೆಸುವುದರಿಂದ ಅಥವಾ ದೆಹಲಿಯಲ್ಲಿ ಕಾಲ ಕಳೆಯುವುದರಿಂದ ರೈತರ ಕಣ್ಣೀರು ಒರೆಸಲು ಸಾಧ್ಯವಿಲ್ಲ, ಎಂದ ಅವರು, ಮುಖ್ಯಮಂತ್ರಿಗಳು ತಕ್ಷಣವೇ ರಾಜ್ಯ ಪ್ರವಾಸ ಕೈಗೊಂಡು ನೇರವಾಗಿ ಜಮೀನುಗಳಿಗೆ ಭೇಟಿ ನೀಡಿ ರೈತರ ಕಷ್ಟಗಳನ್ನು ಆಲಿಸಬೇಕು ಎಂದು ಆಗ್ರಹಿಸಿದರು. ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ, ಈ ಸರ್ಕಾರ ಬದುಕಿದ್ದರೂ ಸತ್ತಂತೆಯೇ ಸರಿ ಎಂದು ಖಾರವಾಗಿ ಟೀಕಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಮಂಡ್ಯ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್, ಮೈಸೂರು ವಿಭಾಗ ಸಹ-ಪ್ರಭಾರಿ ನಿಂಗರಾಜುಗೌಡ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಅಶೋಕ್ ಜಯರಾಮ್ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರದ ಪ್ರಮುಖ ಮುಖಂಡರಾದ ಎಸ್.ಪಿ. ಸ್ವಾಮಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಶಿವಮೊಗ್ಗ–ಮಲೆನಾಡಿನ ಕೃಷಿ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

ಕೃಷಿ ಸಚಿವರಿಲ್ಲ, ರೈತರ ಪರ ನಿಲ್ಲುವವರಿಲ್ಲ,.!; ಬರದಿಂದ ತತ್ತರಿಸಿದ ರೈತರನ್ನು ರಾಜ್ಯ ಸರ್ಕಾರ ಸಂಪೂರ್ಣ ಕೈಬಿಟ್ಟಿದೆ, ಇದು ರೈತ ವಿರೋಧಿ ಸರ್ಕಾರ : ಆರಗ ಜ್ಞಾನೇಂದ್ರ

ಸಂಸದ ಬಿ.ವೈ. ರಾಘವೇಂದ್ರ ಯತ್ನಕ್ಕೆ ಲಭಿಸಿದ ಫಲ: ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750 ರೈತ ಕುಟುಂಬಗಳಿಗೆ ನೇರ ಲಾಭ!

​ತಮಿಳುನಾಡು ಪರ ಸಿಎಂ, ರೈತರಿಗೆ ದ್ರೋಹ: ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟಕ್ಕೆ ಬಿ.ವೈ. ವಿಜಯೇಂದ್ರ ಕರೆ

ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಸೇರಿದಂತೆ ಸಮಾಜಮುಖಿ ಸೇವೆಗಳಲ್ಲಿ ರೋಟರಿ ಸಂಸ್ಥೆಗಳ ಕೊಡುಗೆ ಅನನ್ಯ: ಶಾಸಕ ಎಸ್.ಎನ್. ಚನ್ನಬಸಪ್ಪ

ಯುವಕರ ಭವಿಷ್ಯದೊಂದಿಗೆ ಕಾಂಗ್ರೆಸ್ ಸರ್ಕಾರ ಚೆಲ್ಲಾಟ; ಕೆಪಿಎಸ್‌ಸಿ ಸೇರಿದಂತೆ ಎಲ್ಲಾ ನೇಮಕಾತಿ ಅಕ್ರಮಗಳಿಗೆ ಸಿಬಿಐ ತನಿಖೆ ಅಗತ್ಯ: ಬಿ.ವೈ. ವಿಜಯೇಂದ್ರ

Leave a Comment