ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗದಲ್ಲಿ ಮೊಳಗಿದ ದೇಶಭಕ್ತಿಯ ಘೋಷಣೆ: ಸಾವಿರಾರು ವಿದ್ಯಾರ್ಥಿಗಳಿಂದ ತಿರಂಗಾ ಯಾತ್ರೆ

On: August 14, 2026 5:22 PM
Follow Us:

ಶಿವಮೊಗ್ಗ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ಏಕ್ ಭಾರತ್–ಶ್ರೇಷ್ಠ ಭಾರತ್’ ಪರಿಕಲ್ಪನೆಯಡಿ ನಗರದ ರಾಮಣ್ಣ ಶ್ರೇಷ್ಠ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗಾ ಯಾತ್ರೆಯನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಯಿತು.

ಯಾತ್ರೆಯಲ್ಲಿ 1,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು, ರಾಷ್ಟ್ರಧ್ವಜವನ್ನು ಹಿಡಿದು ದೇಶಭಕ್ತಿ ಘೋಷಣೆಗಳನ್ನು ಮೊಳಗಿಸಿದರು. ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ ಯಾತ್ರೆಗೆ ವಿಶೇಷ ಮೆರುಗು ನೀಡಿತು.

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಮತ್ತು ದೇಶಪ್ರೇಮವನ್ನು ಸ್ಮರಿಸಿದ ವಿದ್ಯಾರ್ಥಿಗಳು, ದೇಶದ ಅಖಂಡತೆ, ಏಕತೆ ಹಾಗೂ ಪ್ರಗತಿಗಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಶ್ರಮಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.

ತ್ರಿವರ್ಣ ಧ್ವಜವು ಪ್ರತಿಯೊಬ್ಬ ಭಾರತೀಯನ ಹೆಮ್ಮೆ ಮತ್ತು ಗೌರವದ ಸಂಕೇತವಾಗಿದ್ದು, ಅದರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂಬ ಸಂದೇಶವನ್ನು ಯಾತ್ರೆ ಸಾರಿತು. ದೇಶದ ಭವಿಷ್ಯವಾಗಿರುವ ಯುವಜನತೆ ಏಕತೆ, ಶಿಸ್ತು ಹಾಗೂ ದೇಶಭಕ್ತಿಯ ಮೌಲ್ಯಗಳೊಂದಿಗೆ ಮುನ್ನಡೆಯಲಿ ಎಂಬ ಆಶಯವೂ ವ್ಯಕ್ತವಾಯಿತು.

ಈ ದೇಶಭಕ್ತಿ ಸಮಾರಂಭದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ, ಶಾಸಕರಾದ ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷರಾದ ಜಗದೀಶ್, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ದತ್ತಾತ್ರಿ ಹಾಗೂ ಜ್ಯೋತಿಪ್ರಕಾಶ್, ಮಾಲತೇಶ್, ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ ಜಿಲ್ಲಾ ಮತ್ತು ನಗರ ಘಟಕದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಹರ್ ಘರ್ ತಿರಂಗಾ! ಜೈ ಹಿಂದ್! 🇮🇳

K.M.Sathish Gowda

Join WhatsApp

Join Now

Facebook

Join Now

Read more

ಕಾವೇರಿ ನೀರು ತಮಿಳುನಾಡಿಗೆ ಹರಿಸಬೇಡಿ; ಬಿಟ್ಟರೆ ರಾಜ್ಯಾದ್ಯಂತ ಹೋರಾಟ: ಹೆಚ್.ಆರ್. ಬಸವರಾಜಪ್ಪ ಎಚ್ಚರಿಕೆ

ಅಡಕೆ ಬೆಳೆಗಾರರ ಬದುಕಿನ ಮೇಲೆ ‘ಪಾನ್‌ ನಿಷೇಧ’ದ ಹೊಡೆತ; ರೈತರ ಬೆನ್ನಿಗೆ ಚೂರಿ ಹಾಕಿದ ಸರ್ಕಾರ: ಏಕಾಏಕಿ ನಿರ್ಧಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಆಕ್ರೋಶ

ಧೈರ್ಯವಿದ್ದರೆ ನೇರವಾಗಿ ಆರ್‌ಎಸ್‌ಎಸ್‌ ನಿಷೇಧಿಸಿ!: ಮಹಿಳೆಯರಿಗೆ ಸಂಪುಟದಲ್ಲಿ ಅವಕಾಶವಿಲ್ಲ, ಆರೋಪ ಎದುರಿಸುವವರಿಗೆ ಸಚಿವ ಪಟ್ಟ! ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಶಿವಮೊಗ್ಗದ ಸಾರ್ವಜನಿಕ ಸಾರಿಗೆಗೆ ಹೊಸ ವೇಗ: 50 ಪಿಎಂ ಇ-ಬಸ್‌ಗಳನ್ನು ಶೀಘ್ರ ರಸ್ತೆಗಿಳಿಸಲು ಸಾರಿಗೆ ಸಚಿವರಿಗೆ ಚೇತನ್ ಕೆ. ಗೌಡ ಮನವಿ

ಸಣ್ಣ ವ್ಯಾಪಾರಿಗಳೇ ಆತಂಕ ಬೇಡ!: ಪ್ರತಿಯೊಂದು ಯುಪಿಐ ವಹಿವಾಟಿಗೂ ಶುಲ್ಕ ಎನ್ನುವುದು ತೀರಾ ಹಸಿ ಸುಳ್ಳು!

ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರಿಗೆ ಮಂತ್ರಿಗಿರಿ ಏಕೆ?: ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ

Leave a Comment