ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಜನಸಾಗರದ ನಡುವೆ ಸಾಗಿದ ‘ಬಳ್ಳಾರಿ ಚಲೋ’; ವಿಜಯೇಂದ್ರ ನಾಯಕತ್ವಕ್ಕೆ ಜನಬೆಂಬಲದ ಮಹಾಪೂರ: ಬಳ್ಳೇಕೆರೆ ಸಂತೋಷ್

On: September 8, 2026 1:02 PM
Follow Us:

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ಹಾಗೂ ಜನವಿರೋಧಿ ಆಡಳಿತವನ್ನು ಖಂಡಿಸಿ, ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಉದ್ದೇಶದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಪ್ರಾರಂಭವಾದ ದಿನದಿಂದಲೂ ಭರ್ಜರಿ ಜನಬೆಂಬಲದೊಂದಿಗೆ ಮುಂದುವರಿಯಿತು. ಪಾದಯಾತ್ರೆಯುದ್ದಕ್ಕೂ ಕಂಡುಬಂದ ಜನಸಾಗರ, ಕಾರ್ಯಕರ್ತರ ಉತ್ಸಾಹ ಹಾಗೂ ಸಾರ್ವಜನಿಕರ ಸ್ವಯಂಪ್ರೇರಿತ ಬೆಂಬಲವು ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬಿದೆ.

ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಯುವ ನಾಯಕ ಹಾಗೂ ಪ್ರಕೋಷ್ಠಗಳ ಶಿವಮೊಗ್ಗ ಜಿಲ್ಲಾ ಸಂಚಾಲಕ ಬಳ್ಳೇಕೆರೆ ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಹಾಗೂ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಸಂಸದ ಬಿ.ವೈ. ರಾಘವೇಂದ್ರ ಅವರೊಂದಿಗೆ ಸುಮಾರು 10 ಕಿಲೋಮೀಟರ್ ಉತ್ಸಾಹದಿಂದ ಹೆಜ್ಜೆ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಳ್ಳೇಕೆರೆ ಸಂತೋಷ್, ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಕೇವಲ ರಾಜಕೀಯ ಪಾದಯಾತ್ರೆಯಲ್ಲ, ಜನರ ಸಮಸ್ಯೆಗಳನ್ನು ಆಲಿಸಿ, ಅವರ ಧ್ವನಿಯನ್ನು ಸರ್ಕಾರದ ಗಮನಕ್ಕೆ ತರುವ ಜನಪರ ಹೋರಾಟವಾಗಿದೆ ಎಂದು ಹೇಳಿದರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಬಿಜೆಪಿ ಕಾರ್ಯಕರ್ತರು, ಯುವಕರು, ರೈತರು, ಮಹಿಳೆಯರು ಸೇರಿದಂತೆ ಸಾವಿರಾರು ಜನರು ಪಾದಯಾತ್ರೆಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿರುವುದು ವಿಜಯೇಂದ್ರ ಅವರ ನಾಯಕತ್ವದ ಮೇಲಿನ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಪಾದಯಾತ್ರೆ ಸಾಗಿದ ಪ್ರತಿಯೊಂದು ಗ್ರಾಮ, ಪಟ್ಟಣ ಹಾಗೂ ಮಾರ್ಗದುದ್ದಕ್ಕೂ ಸಾರ್ವಜನಿಕರು ಆತ್ಮೀಯವಾಗಿ ಸ್ವಾಗತಿಸಿ, ಬೆಂಬಲ ವ್ಯಕ್ತಪಡಿಸುತ್ತಿರುವುದು ಗಮನಾರ್ಹವಾಗಿದೆ ಎಂದು ಸಂತೋಷ್ ಅವರು ಹೇಳಿದರು.

“ಬಿ.ವೈ. ವಿಜಯೇಂದ್ರ ಅವರ ಸರಳತೆ, ಸಂಘಟನಾ ಸಾಮರ್ಥ್ಯ ಮತ್ತು ಜನರೊಂದಿಗೆ ಬೆರೆಯುವ ಗುಣ ಪಾದಯಾತ್ರೆಗೆ ವಿಶೇಷ ಶಕ್ತಿ ನೀಡಿದೆ. ಬಿಸಿಲು, ದಣಿವು ಯಾವುದನ್ನೂ ಲೆಕ್ಕಿಸದೆ ಸಾವಿರಾರು ಕಾರ್ಯಕರ್ತರು ಹಾಗೂ ಜನರು ಅವರೊಂದಿಗೆ ಹೆಜ್ಜೆ ಹಾಕುತ್ತಿರುವ ದೃಶ್ಯ ನಿಜಕ್ಕೂ ಅಭೂತಪೂರ್ವ. ಜನರ ಸಮಸ್ಯೆಗಳಿಗಾಗಿ ನಾಯಕರು ಸ್ವತಃ ರಸ್ತೆಗೆ ಇಳಿದು ಹೋರಾಟ ನಡೆಸುತ್ತಿರುವುದು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ” ಎಂದು ಬಳ್ಳೇಕೆರೆ ಸಂತೋಷ್ ಹೇಳಿದರು.

ಪಾದಯಾತ್ರೆಯ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಹೆಜ್ಜೆ ಹಾಕಿದ ಕ್ಷಣ ತಮ್ಮ ಪಾಲಿಗೆ ಅತ್ಯಂತ ಸಂತಸದ ಹಾಗೂ ಹೆಮ್ಮೆಯ ಅನುಭವವಾಗಿದೆ ಎಂದು ಅವರು ತಿಳಿಸಿದರು. ಇದೇ ವೇಳೆ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿರುವ ತಮ್ಮ ನೆಚ್ಚಿನ ನಾಯಕ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರೊಂದಿಗೆ ಹೆಜ್ಜೆ ಹಾಕಿರುವುದು ಅವಿಸ್ಮರಣೀಯ ಕ್ಷಣವಾಗಿದೆ ಎಂದು ಸಂತೋಷ್ ಹೇಳಿದರು.

“ನಾಡಿನ ಅಭಿವೃದ್ಧಿ, ಜನರ ಕಲ್ಯಾಣ ಹಾಗೂ ಜನಸೇವೆಯ ಸಂಕಲ್ಪದೊಂದಿಗೆ ನಡೆಯುತ್ತಿರುವ ಈ ಪಾದಯಾತ್ರೆ ಸದಾ ಸ್ಮರಣೀಯವಾಗಿರಲಿದೆ. ಜನರ ನಡುವೆ ನಿಂತು, ಅವರ ಕಷ್ಟ-ಸಂಕಷ್ಟಗಳನ್ನು ಆಲಿಸಿ, ಅವರ ಪರವಾಗಿ ಧ್ವನಿ ಎತ್ತುವ ನಾಯಕತ್ವಕ್ಕೆ ಜನರು ನೀಡುತ್ತಿರುವ ಬೆಂಬಲ ಅಪಾರವಾಗಿದೆ. ಈ ಜನಬೆಂಬಲವೇ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಲಿಷ್ಠ ಪರ್ಯಾಯ ರಾಜಕೀಯ ಶಕ್ತಿಯಾಗಿ ಬಿಜೆಪಿಯನ್ನು ಮತ್ತಷ್ಟು ಸಂಘಟಿಸಲು ಪ್ರೇರಣೆಯಾಗಲಿದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

‘ಬಳ್ಳಾರಿ ಚಲೋ’ ಪಾದಯಾತ್ರೆ ದಿನದಿಂದ ದಿನಕ್ಕೆ ಮತ್ತಷ್ಟು ವೇಗ ಪಡೆದುಕೊಳ್ಳುತ್ತಿದ್ದು, ಮಾರ್ಗದುದ್ದಕ್ಕೂ ಸೇರುತ್ತಿರುವ ಜನಸಾಗರ ಬಿಜೆಪಿಯ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಜನಾಂದೋಲನವು ರಾಜ್ಯದ ಜನರ ಆಶೋತ್ತರಗಳಿಗೆ ಧ್ವನಿಯಾಗುವ ಜೊತೆಗೆ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳ ವಿರುದ್ಧ ಜನಾಭಿಪ್ರಾಯವನ್ನು ಸಂಘಟಿಸುವ ಪ್ರಮುಖ ಹೋರಾಟವಾಗಿ ರೂಪುಗೊಳ್ಳುತ್ತಿದೆ ಎಂದು ಬಳ್ಳೇಕೆರೆ ಸಂತೋಷ್ ಹೇಳಿದರು.

K.M.Sathish Gowda

Join WhatsApp

Join Now

Facebook

Join Now

Read more

ಅಭಿವೃದ್ಧಿಯ ವೇಗಕ್ಕೆ ರೈಲು ಕೋಚ್‌ಗಳೇ ಸಾಕ್ಷಿ; ಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯ ಕಟ್ಟಲಿಲ್ಲ, ನಾವು 50 ಸಾವಿರ ಆಧುನಿಕ ರೈಲು ಬೋಗಿ ನಿರ್ಮಿಸಿದ್ದೇವೆ: ಪ್ರಧಾನಿ ನರೇಂದ್ರ ಮೋದಿ

ಜನರ ಬದುಕಿನ ಪ್ರಶ್ನೆಗಳಿಗಾಗಿ ನಡೆಯುತ್ತಿರುವ ಜನಾಂದೋಲನ ‘ಬಳ್ಳಾರಿ ಚಲೋ’: ಬಿ.ವೈ. ವಿಜಯೇಂದ್ರ

ಯುವಶಕ್ತಿಯೇ ಭಾರತದ ಭವಿಷ್ಯ; KPSCಗೆ ಕಾಯಕಲ್ಪ, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಆದ್ಯತೆ: ಬಿ.ವೈ. ವಿಜಯೇಂದ್ರ

ಕುರಿಗಾಯಿಗಳ ಬದುಕಿನಿಂದ ವಿದ್ಯಾರ್ಥಿಗಳ ಕನಸುಗಳವರೆಗೆ: ಜನರ ನಡುವೆ ಬೆರೆತು ಬಳ್ಳಾರಿ ತಲುಪಿದ ‘ಬಳ್ಳಾರಿ ಚಲೋ’

ಗೋ ಪೂಜೆಯೊಂದಿಗೆ ಆರಂಭಗೊಂಡ ಬಿಜೆಪಿ ಪಾದಯಾತ್ರೆಯ ನಾಲ್ಕನೇ ದಿನ ಕಾರಟಗಿಯಲ್ಲಿ ಸಮಾಪ್ತಿ

ವಿಜಯೇಂದ್ರ ನೇತೃತ್ವದ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಜನಸಾಗರ!: ಪಂಚ ಗ್ಯಾರಂಟಿಗಳ ಭ್ರಮೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರ; ಕಡುಬಡವರ ಬದುಕು ಮರೆತಿದೆ: ಬಿ.ವೈ. ವಿಜಯೇಂದ್ರ

Leave a Comment