ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

8.5 ಲಕ್ಷ ಬೆಲೆ ಬಾಳುವ ಚಿನ್ನ ಬೆಳ್ಳಿ ಕಳ್ಳತನ ಕೇಸು:  ಆರೋಪಿಯನ್ನು ಬಂಧನ ಮಾಡಿದ ಆನವಟ್ಟಿ ಪೊಲೀಸರು

On: August 1, 2025 11:57 PM
Follow Us:

ಸೊರಬ: ಮನೆ ಬೀಗ ಹಾಕಿಕೊಂಡು ಜಮೀನು ಕೆಲಸಕ್ಕೆ ಹೋದ ವೇಳೆ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆನವಟ್ಟಿ ಪೊಲೀಸರು ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಸೊರಬ ತಾಲೂಕಿನ ಶಕುನವಳ್ಳಿ ಗ್ರಾಮದ ನಿವಾಸಿ ಶಂಭುಲಿಂಗಪ್ಪ ಎಂಬವರ ಮನೆಯಲ್ಲಿ ಜುಲೈ 25ರಂದು ಅವರ ಜಮೀನಿಗೆ ಹೋಗಿದ್ದ ವೇಳೆಯಲ್ಲಿ ಮನೆ ಬಾಗಿಲನ್ನು ಒಡೆದು ಬೀರುವ ಇಂಟರ್ಲಾಕ್ ನಲ್ಲಿ ಇಟ್ಟಿದ್ದ ಸುಮಾರು 8.49000 ರೂ ಮೌಲ್ಯದ ಬಂಗಾರದ ಆಭರಣಗಳು ಮತ್ತು ಬೆಳ್ಳಿಗಳ ಆಭರಣಗಳು ಕಳುವಾಗಿತ್ತು.  ಪ್ರಕರಣವನ್ನು ಭೇದಿಸಲು ಎಸ್ ಪಿ ಮಿಥುನ್ ಕುಮಾರ ಜಿಲ್ಲೆ ಹೆಚ್ಚುವರಿ ರಕ್ಷಣಾಧಿಕಾರಿ ಹಾಗೂ ಶಿಕಾರಿಪುರದ ಡಿಎಸ್ಪಿ ಅವರ ಮಾರ್ಗದರ್ಶನದಲ್ಲಿ ಸೊರಬ ಸಿಪಿಐ ರಾಜಶೇಖರ್ ಪಿಎಸ್ಐ ಚಂದನ್ ನೇತೃತ್ವದಲ್ಲಿ ಸಿಬ್ಬಂದಿಗಳನ್ನು ಒಳಗೊಂಡ ತಂಡವನ್ನು ರಚಿಸಲಾಗಿತ್ತು. ತಂಡವು ಹಾವೇರಿ ಜಿಲ್ಲೆಯ ಅಬ್ದುಲ್ ಸತ್ತರ್ (27) ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.    ಬಂಧಿತರಿಂದ  8,49,000 ರೂ ಮೌಲ್ಯದ 135 ಗ್ರಾಂ ಚಿನ್ನಾಭರಣ ಮತ್ತು 200 ಗ್ರಾಂ ಬೆಳ್ಳಿಯ ಆಭರಣಗಳು ಮತ್ತು ಕೃತ್ಯಕ್ಕೆ ಬಳಸಿದ್ದ ವಾಹನವನ್ನ ವಶಕ್ಕೆ ಪಡೆಯಲಾಗಿದೆ

K.M.Sathish Gowda

Join WhatsApp

Join Now

Facebook

Join Now

Leave a Comment