ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿ ವಿಷ ಸೇವಿಸಿ ಸಾವು.   

On: August 4, 2025 1:49 PM
Follow Us:

ನೋಟಿಸ್ ನೀಡಿದ ವಿಚಾರಕ್ಕೆ ವಿಷ ಸೇವಿಸಿದ್ದ ಜಿಲ್ಲಾ ಪಂಚಾಯತ್ ಸಿಇಒ ಮನೆಯ ಅಡುಗೆ ಕೆಲಸ ಮಾಡುವ ವ್ಯಕ್ತಿಯ ಸಾವಾಗಿದೆ. ಈಗ ಈ ಪ್ರಕರಣ ಯಾರ ವಿರುದ್ಧ ತಿರುಗಲಿದೆ ಎಂಬುದು ಕುತೂಹಲಕಾರಿಯಾಗಿದೆ.    ಎರಡು ದಿನ ರಜೆ ಕೇಳಿ ಹೋಗಿದ್ದ ಸಿಇಒ ಮನೆಯ ಅಡುಗೆ ಕೆಲಸದಾತ ಸುರೇಶ್ 10 ದಿನದ ಬಳಿಕ ಬಂದ ಹಿನ್ನಲೆಯಲ್ಲಿ ಆತನಿಗೆ ನೋಟೀಸ್ ನೀಡಲಾಗಿತ್ತು. ಈ ನೊಟೀಸ್ ಗೆ ಹೆದರಿ ಸುರೇಶ್ ರೌಂಡಪ್ ಸೇವಿಸಿದ್ದರು. ಅಸ್ವಸ್ಥರಾಗಿದ್ದ ಸುರೇಶ್ ಅವರನ್ನ ಮೆಗ್ಗಾನ್ ಗೆ ದಾಖಲಿಸಲಾಗಿತ್ತು.    ಮೆಗ್ಗಾನ್ ನಲ್ಲಿ ದಾಖಲಾಗಿದ್ದ ಸುರೇಶ್ ರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದಾಖಲಾದ ಮೂರು ದಿನಗಳ ನಂತರ ಸುರೇಶ್ ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವಾಗಿದೆ. ಅವರ ಮೃತದೇಹವನ್ನ ಮೆಗ್ಗಾನ್ ಗೆ ಸಾಗಿಸಲಾಗಿದೆ.ಘಟನೆ ನಡೆದ ದಿನವೆ ಈ ಪ್ರಕರಣವನ್ನ ಮಾಧ್ಯಮಗಳಿಂದ ದೂರ ಇಡುವ ಪ್ರಯತ್ನ ನಡೆದಿತ್ತು. ಜೀವ ಇದ್ದಾಗ ಯಾವ ರೀತಿ ಸ್ಟೇಟ್ ಮೆಂಟ್ ಆಗಿದೆ ಎಂಬುದೇ ಮಾಹಿತಿಯಿಲ್ಲವಾದ್ದರಿಂದ ಈ ಪ್ರಕರಣದಲ್ಲಿ ಆರೋಪಿ ಯಾರಾಗ್ತಾರೆ ಎಂಬುದೇ ಗೊತ್ತಾಗುತ್ತಿಲ್ಲ. ಮಾಹಿತಿ ಪ್ರಕಾರ ಕರ್ತವ್ಯ ಲೋಪದಲ್ಲಿ ನಿಂದಿಸಿ ನೋಟೀಸ್ ನೀಡಿದ್ದರೆ ಕ್ರಮವಾಗಲಿದೆ. ಕೇವಲ ಕರ್ತವ್ಯ ಲೋಪಕ್ಕೆ ನೋಟೀಸ್ ನೀಡಿದ್ದರೆ ಪ್ರಕರಣ ಬಹುತೇಕ ಬಿದ್ದು ಹೋಗಲಿದೆ.

K.M.Sathish Gowda

Join WhatsApp

Join Now

Facebook

Join Now

Read more

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ: ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ – ಭದ್ರಾವತಿ ಪೊಲೀಸರ ಚಾಣಾಕ್ಷ ತನಿಖೆಗೆ ದೊರೆತ ಐತಿಹಾಸಿಕ ಜಯ,.!

ಶಿವಮೊಗ್ಗ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ: 24 ಗಂಟೆಯೊಳಗೆ ಸರಗಳ್ಳರ ಬಂಧನ

“ನೈಟಿ ಧರಿಸಿದ್ದಕ್ಕೆ ಕೋಪ: ಹೆಂಡತಿಯನ್ನು ಜೀವಂತ ಸುಟ್ಟ ಪತಿ”

ನಟ ದುನಿಯಾ ವಿಜಯ್ ಸೇರಿದಂತೆ ಹಲವು ಮಂದಿ ಶೇರ್ ಮಾಡಿದ ಝಾಂಬಿ ಡ್ರಗ್ ಸುಳ್ಳು ವಿಡಿಯೋ ಪ್ರಕರಣ: ವೈರಲ್ ಮಾಡಿದವರ ವಿರುದ್ಧ ಕ್ರಮಕ್ಕೆ ಪೊಲೀಸ್ ಆಯುಕ್ತರ ಎಚ್ಚರಿಕೆ

“ಭದ್ರಾವತಿಯಲ್ಲಿ ಸಾಲದ ಕಿರುಕುಳಕ್ಕೆ ಜೀವ ಬಲಿ,.! 5 ವರ್ಷಗಳ ಬಳಿಕ ಆರೋಪಿತರಿಗೆ 10 ವರ್ಷ ಜೈಲು”

ಹನುಮಂತಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: ಅಡಕೆ ತೋಟದಲ್ಲಿ ಉರಿದುಹೋದ ಜೀವ – ಶಿವಮೊಗ್ಗ ಉಪನ್ಯಾಸಕರ ರಹಸ್ಯ ಸಾವು, ಕೊಲೆ ಶಂಕೆ‌,.!

Leave a Comment