ಹಾವೇರಿ: ದೂರುದಾರ ಮಾನಸಿಕವಾಗಿ ಅಸ್ವಸ್ಥನೋ ಅಥವಾ ಸ್ವಸ್ಥನೋ ಎನ್ನುವುದನ್ನು ಮಾನಸಿಕ ತಜ್ಞರು ಮೊದಲು ಪರೀಕ್ಷಿಸಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು ಮಾನಸಿಕವಾಗಿ ಸ್ವಸ್ತನಾಗಿದ್ದಾನೋ ಅಥವಾ ಅಸ್ವಸ್ಥನಾಗಿದ್ದಾನೋ ಎನ್ನುವುದನ್ನು ಮಾನಸಿಕ ತಜ್ಞರಿಂದ ಮೊದಲು ಪರೀಕ್ಷಿಸಬೇಕು. ನಂತರ ಕ್ರಮ ಜರುಗಿಸುವುದು ಒಳ್ಳೆಯದು ಎನ್ನುವುದು ನನ್ನ ಅಭಿಪ್ರಾಯ ಎಂದಿದ್ದಾರೆ.
ನಾನು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ದೂರುದಾರ ಮೊದಲು ಮಾನಸಿಕವಾಗಿ ಆರೋಗ್ಯವಾಗಿದ್ದಾನಾ ಅನ್ನೋದನ್ನ ದೃಢಪಡಿಸಿಕೊಂಡ ನಂತರ ಎಸ್ಐಟಿ ತಂಡ ತನಿಖೆ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.