ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಧರ್ಮಸ್ಥಳ ಪ್ರಕರಣ: ಅನಾಮಿಕ ಚಿನ್ನಯ್ಯ ಬಂಧನ

On: August 23, 2025 10:37 AM
Follow Us:

ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ಸುಳ್ಳು ದೂರು ನೀಡಿದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್‌ ಸಿಎನ್‌ ಚಿನ್ನಯ್ಯ ಬಂಧಿಸಿದ್ದಾರೆ.

ಸಾಕ್ಷಿ ಸಂರಕ್ಷಣಾ ಯೋಜನೆಯಡಿ ರಕ್ಷಣೆ ಪಡೆದಿದ್ದ ಅನಾಮಿಕ ದೂರುದಾರನನ್ನು ಎಸ್‌ಐಟಿ ಬಂಧಿಸಿದೆ. ದೂರಿನಲ್ಲಿ ಸುಳ್ಳು ಮಾಹಿತಿ ಮತ್ತು ತನಿಖೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಹೊಸ ಎಫ್‌ಐಆರ್ ದಾಖಲಾಗಿದೆ. ಸಮಾಧಿ ಸ್ಥಳಗಳಲ್ಲಿ ಅಸ್ತಿಪಂಜರಗಳು ಪತ್ತೆಯಾಗಿಲ್ಲ. ಬಂಧಿತನ ವಿಚಾರಣೆ ಮುಂದುವರೆದಿದೆ.

ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ವಿಷಯದ ಕುರಿತು ದಾಖಲಾಗಿದ್ದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದಾರೆ. ತಲೆಬುರುಡೆ ತಂದ ಈ ಪ್ರಕರಣದಲ್ಲಿ ಸಾಕ್ಷಿ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅವನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇಂದು ಬೆಳ್ತಂಗಡಿ ಕೋರ್ಟ್‌ಗೆ ಮಾಸ್ಕ್‌ಮ್ಯಾನ್‌ನ್ನು ಹಾಜರುಪಡಿಸಲಿದ್ದರೆ. ಅದಕ್ಕೂ ಮುನ್ನ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಬಳಿಕ ಕೋರ್ಟ್ ಮುಂದೆ ಅವನನ್ನು ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಸಲ್ಲಿಸಲಿದೆ.

ಎಸ್‌ಐಟಿ ತನಿಖೆ ಇನ್ನಷ್ಟು ಆಳಕ್ಕೆ ಮುಂದುವರಿಯುವ ಸಾಧ್ಯತೆ ಇದೆ.

K.M.Sathish Gowda

Join WhatsApp

Join Now

Facebook

Join Now

Read more

ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರಿಗೆ ಮಂತ್ರಿಗಿರಿ ಏಕೆ?: ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ

‘ನಮ್ಮ ಭೂಮಿ–ನಮ್ಮ ಹಕ್ಕು’ ಘೋಷಣೆಗೆ ಶಿವಮೊಗ್ಗ ಜೆಡಿಎಸ್ ಧ್ವನಿ: ಬಿಡದಿ ಪಾದಯಾತ್ರೆಗೆ ಕೆ.ಬಿ. ಪ್ರಸನ್ನ ಕುಮಾರ್ ಬೆಂಬಲ

ಕಾರ್ಪೊರೇಟ್‌ಗಳ ವಿರುದ್ಧ ರೈತರ ಆಕ್ರೋಶ; ರಸ್ತೆ ತಡೆಗೆ ಇಳಿದ ಹೆಚ್.ಆರ್. ಬಸವರಾಜಪ್ಪ ಸೇರಿ ಮುಖಂಡರ ಬಂಧನ

ಶಿವಮೊಗ್ಗದಲ್ಲಿ ‘ಹರ್ ಘರ್ ತಿರಂಗಾ’ ಸಂಭ್ರಮ: 30 ಸಾವಿರ ಮನೆಗಳಿಗೆ ರಾಷ್ಟ್ರಧ್ವಜ ವಿತರಣೆ, ಬೃಹತ್ ತಿರಂಗಾ ಯಾತ್ರೆಗೆ ಬಿಜೆಪಿ ಸಿದ್ಧತೆ

ದೇಶವಿರೋಧಿ ಕಾಂಗ್ರೆಸ್‌ನಿಂದ ದೇಶಾಭಿಮಾನ ಕಲಿಯುವ ಅಗತ್ಯವಿಲ್ಲ: ವಿಜಯೇಂದ್ರ

ಭದ್ರಾ ನೀರು ಹರಿಯಲಿ, ಚಿತ್ರದುರ್ಗದ ಬರ ಅಳಿಯಲಿ! ₹5,300 ಕೋಟಿ ಸಾಲದು, ₹6,200 ಕೋಟಿ ಕೊಡಿ: ಕೇಂದ್ರ ಸರ್ಕಾರಕ್ಕೆ ತರಳಬಾಳು ಶ್ರೀಗಳ ಆಗ್ರಹ

Leave a Comment