ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಮೋದಿ ಜಪಾನ್–ಚೀನಾ ಪ್ರವಾಸಕ್ಕೆ ದೇವೇಗೌಡ ಶ್ಲಾಘನೆ: ಪುಟಿನ್–ಜಿನ್‌ಪಿಂಗ್ ಜೊತೆಗಿನ ಮಾತುಕತೆಗೆ ಮೆಚ್ಚುಗೆ

On: September 3, 2025 8:42 PM
Follow Us:

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಜಪಾನ್ ಮತ್ತು ಚೀನಾ ಪ್ರವಾಸವನ್ನು ಶ್ಲಾಘಿಸಿದ್ದಾರೆ. ಈ ಕುರಿತಾಗಿ ಅವರು ಪ್ರಧಾನಿ ಮೋದಿಗೆ ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ.

ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಎಸ್ಸಿಒ ಶೃಂಗಸಭೆಯು ಭಾರತ–ಚೀನಾ–ರಷ್ಯಾ ದೇಶಗಳ ಸಮಾಗಮಕ್ಕೆ ವೇದಿಕೆಯಾದ ಹಿನ್ನೆಲೆಯಲ್ಲಿ ದೇವೇಗೌಡರು ಮೋದಿ ಅವರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಅಮೆರಿಕ ಹೇರುತ್ತಿರುವ ಸುಂಕಕ್ಕೆ ಪರ್ಯಾಯ ಮಾರ್ಗ ಹುಡುಕುತ್ತಿರುವ ಪ್ರಧಾನಿ ಮೋದಿಯವರ ಪ್ರಯತ್ನ ಶ್ಲಾಘನೀಯ.
  • ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಬೆಸೆಯುತ್ತಿರುವ ಸ್ನೇಹ ಹೊಸ ಜಾಗತಿಕ ಸಂದೇಶ ನೀಡುತ್ತಿದೆ.
  • ಉಕ್ರೇನ್ ಯುದ್ಧ ಕೊನೆಗಾಣಿಸಲು ಮೋದಿಯವರು ಪುಟಿನ್‌ ಅವರೊಂದಿಗೆ ಚರ್ಚೆ ನಡೆಸಿರುವುದು ಶಾಂತಿಗಾಗಿ ಮಹತ್ವದ್ದು.
  • ಭಾರತದ ಆರ್ಥಿಕ, ಜನಸಂಖ್ಯಾ ಮತ್ತು ಪ್ರಜಾಪ್ರಭುತ್ವದ ಶಕ್ತಿ ಅಮೆರಿಕ ಕೂಡ ಮರುಪರಿಶೀಲನೆಗೆ ದಾರಿಯಾಗಲಿದೆ.
  • ಪುಟಿನ್ ಮತ್ತು ಜಿನ್‌ಪಿಂಗ್ ಜೊತೆಗಿನ ಮೋದಿ ಅವರ ಛಾಯಾಚಿತ್ರಗಳು ಹಾಗೂ ವಿಡಿಯೋಗಳು ಜಗತ್ತಿನಾದ್ಯಂತ ರಾಷ್ಟ್ರಾಧ್ಯಕ್ಷರ ಸ್ನೇಹದ ಸಂಕೇತವಾಗಿ ಹರಡುತ್ತಿವೆ.
  • ಇದು ಭಾರತವನ್ನು ಜಾಗತಿಕ ಸಮೃದ್ಧಿ ಮತ್ತು ಶಾಂತಿಯ ಕೇಂದ್ರದಲ್ಲಿ ಸ್ಥಾಪಿಸುವ ಹೊಸ ವಿಶ್ವಕ್ರಮದ ಆರಂಭವಾಗಿದೆ.
  • ಭಾರತದ ಸವಾಲುಗಳನ್ನು ಅವಕಾಶವಾಗಿ ಪರಿವರ್ತಿಸಲು ಮೋದಿ ದೃಢನಿಶ್ಚಯ ಹೊಂದಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪತ್ರದ ಕೊನೆಯಲ್ಲಿ ದೇವೇಗೌಡರು, “ದೇವರು ನಿಮಗೆ ಹೆಚ್ಚಿನ ಶಕ್ತಿ ಮತ್ತು ಉತ್ತಮ ಆರೋಗ್ಯವನ್ನು ನೀಡಲಿ” ಎಂದು ಪ್ರಾರ್ಥಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಕೆಂಪೇಗೌಡರ ಆದರ್ಶ, ವಾಲ್ಮೀಕಿ ಮಹರ್ಷಿಗಳ ಮೌಲ್ಯಗಳು ಸಮಾಜಕ್ಕೆ ದಾರಿದೀಪ: ಬಿ.ವೈ. ರಾಘವೇಂದ್ರ

​ನಾಡಪ್ರಭುವಿನ ಕೊಡುಗೆ ಅಪ್ರತಿಮ ಎಂದ ವಿಜಯೇಂದ್ರ; ಕೆಂಪೇಗೌಡರ ಕೀರ್ತಿ ಜಗತ್ತಿಗೆ ಸಾರಿದ್ದು ಬಿ.ಎಸ್.ವೈ ಎಂದ ಅಶ್ವತ್ಥನಾರಾಯಣ್

ನಾಡಪ್ರಭು ಕೆಂಪೇಗೌಡರಿಗೆ ನಮ್ಮೂರ ಬಳಗದಿಂದ ಗೌರವ ನಮನ; ಅವರ ದೂರದೃಷ್ಟಿಯೇ ಬೆಂಗಳೂರಿನ ವೈಭವ, ಆದರ್ಶಗಳೇ ಇಂದಿನ ಸಮಾಜಕ್ಕೆ ದಾರಿದೀಪ: ಎಂ. ಶ್ರೀಕಾಂತ್

​ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಶನಿವಾರದ ಅವಧಿಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಏಕರೂಪದ ಶಾಲಾ ಸಮಯ ಜಾರಿ

ಗ್ರಾಮೀಣ ಮಹಿಳೆಯರ ಬದುಕಿಗೆ ಆಸರೆಯಾದ ಪುಷ್ಪಗಿರಿ ಸಂಸ್ಥೆ: ಜೂನ್ 29ರಂದು ಶಿವಮೊಗ್ಗದಲ್ಲಿ ಬೃಹತ್ ಮಹಿಳಾ ಸಮಾವೇಶ ಹಾಗೂ ‘ವಿದ್ಯಾಚೇತನ’ ಪ್ರಶಸ್ತಿ ಪ್ರದಾನ

​ದುಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಒಗ್ಗಟ್ಟಿನ ಹೋರಾಟ; ಪಕ್ಷಕ್ಕೆ ದ್ರೋಹ ಬಗೆದವರನ್ನು ಬಿಡುವುದಿಲ್ಲ: ಬಿ.ವೈ. ವಿಜಯೇಂದ್ರ

Leave a Comment