ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗ ಪೊಲೀಸರ ಮಾನವೀಯತೆ: ಕಳೆದುಹೋದ ಆಭರಣಗಳ ಬ್ಯಾಗ್ ಮಾಲೀಕರಿಗೆ ವಾಪಸ್

On: September 6, 2025 9:44 AM
Follow Us:

ಶಿವಮೊಗ್ಗ: ಅನಂತಪುರದ ಮಂಜಪ್ಪ ಕೆ. ಅವರು ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ಒಂದು ಬ್ಯಾಗ್‌ ಬಿಳಿಸಿಕೊಂಡು ಹೋಗಿದ್ದರು. ಬ್ಯಾಗ್‌ನಲ್ಲಿ ಒಂದು ಬಂಗಾರದ ಉಂಗುರ, ಒಂದು ಬೆಳ್ಳಿ ಉಂಗುರ ಹಾಗೂ ಒಂದು ಜೋಡಿ ಬೆಳ್ಳಿಯ ಕಿವಿಯೋಲೆಗಳಿದ್ದವು.

ಶಿವಮೊಗ್ಗದ ಗೋಪಿ ಸರ್ಕಲ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಎ.ಎಸ್‌.ಐ. ಮೋಹನ್ ಹಾಗೂ ಪೊಲೀಸರಾದ ರಾಜೇಸಾಬ್ ಮತ್ತು ಮುನೇಶಪ್ಪ ಅವರಿಗೆ ಬ್ಯಾಗ್‌ ಸಿಕ್ಕಿತು. ತಕ್ಷಣವೇ ಅವರು ಬ್ಯಾಗ್‌ನೊಳಗಿದ್ದ ಬಿಲ್‌ನಲ್ಲಿ ನೀಡಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿ, ಮಾಲೀಕರಾದ ಮಂಜಪ್ಪ ಅವರನ್ನು ಸಂಪರ್ಕಿಸಿದರು. ನಂತರ ಮಂಜಪ್ಪ ಅವರೇ ಬಂದು ತಮ್ಮ ವಸ್ತುಗಳನ್ನು ಸುರಕ್ಷಿತವಾಗಿ ವಾಪಸ್ ಪಡೆದುಕೊಂಡರು.

ಬ್ಯಾಗ್‌ ಮರಳಿ ಸಿಕ್ಕ ಹಿನ್ನೆಲೆಯಲ್ಲಿ ಸಂತೋಷಗೊಂಡ ಮಂಜಪ್ಪ ಅವರು, “ಇಂದು ಪೊಲೀಸರ ಪ್ರಾಮಾಣಿಕತೆ ಹಾಗೂ ಮಾನವೀಯತೆ ನನಗೆ ದೊಡ್ಡ ನೆರವಾಯಿತು. ನಾನು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ,” ಎಂದು ಪ್ರತಿಕ್ರಿಯಿಸಿದರು.

ಸ್ಥಳೀಯ ನಾಗರಿಕರು ಸಹ ಈ ಘಟನೆಗೆ ಸಂತೋಷ ವ್ಯಕ್ತಪಡಿಸಿ, “ಪೊಲೀಸರು ಸಮಾಜದಲ್ಲಿ ನಿಜವಾದ ಭದ್ರತಾ ಭಾವನೆ ಮೂಡಿಸುವಂತಹ ಕಾರ್ಯ ಮಾಡಿರುವುದು ಶ್ಲಾಘನೀಯ,” ಎಂದು ಅಭಿಪ್ರಾಯಪಟ್ಟರು.

ಶಿವಮೊಗ್ಗ ಪೊಲೀಸ್ ಇಲಾಖೆಯ ಈ ಕಾರ್ಯಾಚರಣೆ ಸಾರ್ವಜನಿಕರಿಂದ ಮೆಚ್ಚುಗೆ ಪಡೆಯುತ್ತಿದೆ.

K.M.Sathish Gowda

Join WhatsApp

Join Now

Facebook

Join Now

Read more

ಕೆಂಪೇಗೌಡರ ಆದರ್ಶ, ವಾಲ್ಮೀಕಿ ಮಹರ್ಷಿಗಳ ಮೌಲ್ಯಗಳು ಸಮಾಜಕ್ಕೆ ದಾರಿದೀಪ: ಬಿ.ವೈ. ರಾಘವೇಂದ್ರ

​ನಾಡಪ್ರಭುವಿನ ಕೊಡುಗೆ ಅಪ್ರತಿಮ ಎಂದ ವಿಜಯೇಂದ್ರ; ಕೆಂಪೇಗೌಡರ ಕೀರ್ತಿ ಜಗತ್ತಿಗೆ ಸಾರಿದ್ದು ಬಿ.ಎಸ್.ವೈ ಎಂದ ಅಶ್ವತ್ಥನಾರಾಯಣ್

ನಾಡಪ್ರಭು ಕೆಂಪೇಗೌಡರಿಗೆ ನಮ್ಮೂರ ಬಳಗದಿಂದ ಗೌರವ ನಮನ; ಅವರ ದೂರದೃಷ್ಟಿಯೇ ಬೆಂಗಳೂರಿನ ವೈಭವ, ಆದರ್ಶಗಳೇ ಇಂದಿನ ಸಮಾಜಕ್ಕೆ ದಾರಿದೀಪ: ಎಂ. ಶ್ರೀಕಾಂತ್

​ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಶನಿವಾರದ ಅವಧಿಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಏಕರೂಪದ ಶಾಲಾ ಸಮಯ ಜಾರಿ

ಗ್ರಾಮೀಣ ಮಹಿಳೆಯರ ಬದುಕಿಗೆ ಆಸರೆಯಾದ ಪುಷ್ಪಗಿರಿ ಸಂಸ್ಥೆ: ಜೂನ್ 29ರಂದು ಶಿವಮೊಗ್ಗದಲ್ಲಿ ಬೃಹತ್ ಮಹಿಳಾ ಸಮಾವೇಶ ಹಾಗೂ ‘ವಿದ್ಯಾಚೇತನ’ ಪ್ರಶಸ್ತಿ ಪ್ರದಾನ

​ದುಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಒಗ್ಗಟ್ಟಿನ ಹೋರಾಟ; ಪಕ್ಷಕ್ಕೆ ದ್ರೋಹ ಬಗೆದವರನ್ನು ಬಿಡುವುದಿಲ್ಲ: ಬಿ.ವೈ. ವಿಜಯೇಂದ್ರ

Leave a Comment