ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಡಾ. ವಿಷ್ಣುವರ್ಧನ್‌, ನಟಿ ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ

On: September 11, 2025 7:14 PM
Follow Us:

ಬೆಂಗಳೂರು, ಸೆಪ್ಟೆಂಬರ್ 11: ಕನ್ನಡ ಚಿತ್ರರಂಗದ ದಿಗ್ಗಜ ಕಲಾವಿದರಾದ ಡಾ. ವಿಷ್ಣುವರ್ಧನ್ ಮತ್ತು ಖ್ಯಾತ ನಟಿ ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ಘೋಷಿಸಿದೆ.

200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದ ವಿಷ್ಣುವರ್ಧನ್ ಅವರು ಕನ್ನಡದ ಪರದೆಯಲ್ಲಷ್ಟೇ ಅಲ್ಲ, ಜನರ ಹೃದಯದಲ್ಲಿಯೂ ಸದಾ ಬದುಕಿರುವ ಕಲಾವಿದ. ತಮ್ಮ ವಿಶಿಷ್ಟ ಅಭಿನಯ ಶೈಲಿ, ಸಮರ್ಪಣೆ ಮತ್ತು ವಿಭಿನ್ನ ಪಾತ್ರಗಳ ಮೂಲಕ ಅವರು ಕನ್ನಡ ಚಿತ್ರರಂಗದಲ್ಲಿ ಅಜರಾಮರ ಸ್ಥಾನ ಪಡೆದಿದ್ದಾರೆ.

ಅದೇ ರೀತಿ, ಕನ್ನಡದ ಜೊತೆಗೆ ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿಯೂ ಮಿಂಚಿದ ಬಿ. ಸರೋಜಾದೇವಿ ಅವರು ಕನ್ನಡ ಸಿನೆಮಾದ ‘ಅಭಿನಯ ಶಾರದೆ ’ಎಂದು ಕರೆಯಲ್ಪಟ್ಟಿದ್ದರು. 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿ, ದಶಕಗಳ ಕಾಲ ಅಭಿಮಾನಿಗಳ ಮನಸ್ಸನ್ನು ಗೆದ್ದಿದ್ದ ಅವರು ದಕ್ಷಿಣ ಭಾರತೀಯ ಚಿತ್ರರಂಗದ ಚಿರಸ್ಮರಣೀಯ ತಾರೆಗಳ ಪೈಕಿ ಒಬ್ಬರು.

ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಹಲವು ಬಾರಿ ಸರ್ಕಾರದ ಗಮನಕ್ಕೆ ತಂದಿದ್ದ “ಇಬ್ಬರಿಗೂ ಕರ್ನಾಟಕ ರತ್ನ ನೀಡಬೇಕು” ಎಂಬ ಮನವಿಯನ್ನು ಈ ಬಾರಿ ಸರ್ಕಾರ ಅಂಗೀಕರಿಸಿದೆ.

ಇದರಿಂದ ಕನ್ನಡ ಚಲನಚಿತ್ರ ಕ್ಷೇತ್ರಕ್ಕೆ ಇಬ್ಬರು ದಿಗ್ಗಜರು ನೀಡಿದ ಕೊಡುಗೆ ಮತ್ತೊಮ್ಮೆ ಸ್ಮರಿಸಲ್ಪಟ್ಟಿದ್ದು, ಅಭಿಮಾನಿಗಳ ಹರ್ಷಕ್ಕೆ ಕಾರಣವಾಗಿದೆ.

K.M.Sathish Gowda

Join WhatsApp

Join Now

Facebook

Join Now

Read more

ಕೆಂಪೇಗೌಡರ ಆದರ್ಶ, ವಾಲ್ಮೀಕಿ ಮಹರ್ಷಿಗಳ ಮೌಲ್ಯಗಳು ಸಮಾಜಕ್ಕೆ ದಾರಿದೀಪ: ಬಿ.ವೈ. ರಾಘವೇಂದ್ರ

​ನಾಡಪ್ರಭುವಿನ ಕೊಡುಗೆ ಅಪ್ರತಿಮ ಎಂದ ವಿಜಯೇಂದ್ರ; ಕೆಂಪೇಗೌಡರ ಕೀರ್ತಿ ಜಗತ್ತಿಗೆ ಸಾರಿದ್ದು ಬಿ.ಎಸ್.ವೈ ಎಂದ ಅಶ್ವತ್ಥನಾರಾಯಣ್

ನಾಡಪ್ರಭು ಕೆಂಪೇಗೌಡರಿಗೆ ನಮ್ಮೂರ ಬಳಗದಿಂದ ಗೌರವ ನಮನ; ಅವರ ದೂರದೃಷ್ಟಿಯೇ ಬೆಂಗಳೂರಿನ ವೈಭವ, ಆದರ್ಶಗಳೇ ಇಂದಿನ ಸಮಾಜಕ್ಕೆ ದಾರಿದೀಪ: ಎಂ. ಶ್ರೀಕಾಂತ್

​ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಶನಿವಾರದ ಅವಧಿಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಏಕರೂಪದ ಶಾಲಾ ಸಮಯ ಜಾರಿ

ಗ್ರಾಮೀಣ ಮಹಿಳೆಯರ ಬದುಕಿಗೆ ಆಸರೆಯಾದ ಪುಷ್ಪಗಿರಿ ಸಂಸ್ಥೆ: ಜೂನ್ 29ರಂದು ಶಿವಮೊಗ್ಗದಲ್ಲಿ ಬೃಹತ್ ಮಹಿಳಾ ಸಮಾವೇಶ ಹಾಗೂ ‘ವಿದ್ಯಾಚೇತನ’ ಪ್ರಶಸ್ತಿ ಪ್ರದಾನ

​ದುಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಒಗ್ಗಟ್ಟಿನ ಹೋರಾಟ; ಪಕ್ಷಕ್ಕೆ ದ್ರೋಹ ಬಗೆದವರನ್ನು ಬಿಡುವುದಿಲ್ಲ: ಬಿ.ವೈ. ವಿಜಯೇಂದ್ರ

Leave a Comment