ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಸ್ಪಂದನೆ: ಬೆಂಬಲ ಬೆಲೆಯಲ್ಲಿ ಐದು ಪ್ರಮುಖ ಧಾನ್ಯ ಖರೀದಿ

On: September 20, 2025 6:16 PM
Follow Us:

ದೆಹಲಿ, ಸೆಪ್ಟೆಂಬರ್ 20, 2025: ಕರ್ನಾಟಕದ ರೈತರು 2025-26ನೇ ಸಾಲಿನ ಮುಂಗಾರದಲ್ಲಿ ಅತಿವೃಷ್ಟಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಸಂತೋಷದ ಸುದ್ದಿ ಬಂದಿದೆ. ರಾಜ್ಯದಲ್ಲಿ ಬೆಳೆಯಲ್ಪಟ್ಟ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ (ಶೇಂಗಾ), ಸೋಯಾಬಿನ್ ಮತ್ತು ಸೂರ್ಯಕಾಂತಿ ಧಾನ್ಯಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಲಾಗಿದೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯದ ರೈತ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಸರ್ಕಾರಕ್ಕೆ ಧಾನ್ಯ ಖರೀದಿ ಕ್ರಮವನ್ನು ತಕ್ಷಣ ಆರಂಭಿಸಲು ಸೂಚಿಸಿದ್ದಾರೆ. ಈ ಯೋಜನೆಯಡಿ:

  • ಹೆಸರು ಕಾಳು: 38,000 ಮೆಟ್ರಿಕ್ ಟನ್
  • ಉದ್ದು: 60,810 ಮೆಟ್ರಿಕ್ ಟನ್
  • ಕಡಲೆಬೀಜ: 61,148 ಮೆಟ್ರಿಕ್ ಟನ್
  • ಸೋಯಾಬಿನ್: 1,15,000 ಮೆಟ್ರಿಕ್ ಟನ್
  • ಸೂರ್ಯಕಾಂತಿ: 15,650 ಮೆಟ್ರಿಕ್ ಟನ್

ತ್ವರಿತವಾಗಿ ತೆರೆಯಲು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಕೇಂದ್ರದ ನಿರ್ಧಾರಕ್ಕೆ ಕರ್ನಾಟಕದ ರೈತರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವೆ ಶಿವರಾಜ್ ಸಿಂಗ್ ಚೌಹಾಣ್ ಅವರು ತಕ್ಷಣ ಸ್ಪಂದಿಸಿ, ರಾಜ್ಯದ ರೈತರ ನೆರವಿಗೆ ಮುಂದಾಗಿದ್ದು, ಈ ಕ್ರಮವು ರೈತರ ಸಂಕಷ್ಟವನ್ನು ತಕ್ಷಣ ಕಡಿಮೆ ಮಾಡಲು ಸಹಾಯ ಮಾಡಲಿದೆ. ಸಚಿವ ಜೋಶಿ ಅವರು ಕೇಂದ್ರದ ಈ ತ್ವರಿತ ನೆರವಿಗೆ ರಾಜ್ಯದ ರೈತರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಈ ನಿರ್ಧಾರವು ಅತಿವೃಷ್ಟಿಯಿಂದ ಸಂಕಷ್ಟದಲ್ಲಿ ಸಿಲುಕಿದ ರೈತರಿಗೆ ನವರಾತ್ರಿ ಉಡುಗೊರೆ ಎಂಬಂತೆ ಮಹತ್ವದ ನೆರವಿನ ಸಮಾನವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರದಿಂದ ರೈತರಿಗೆ ತಕ್ಷಣ ನೆರವು ದೊರಕಲಿದೆ ಎಂಬ ನಿರೀಕ್ಷೆ ಇದೆ.

K.M.Sathish Gowda

Join WhatsApp

Join Now

Facebook

Join Now

Read more

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

‘ಎಲ್ಲರೂ ಬಾಯಿ ಮುಚ್ಚಿಕೊಂಡಿರಬೇಕು’: ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ಸಂದೇಶ

ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ–ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮೇಲೆ ಒತ್ತಡ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Comment