ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಗ್ಯಾರಂಟಿ ವಿವಾದ: “ನನ್ನ ಮಾತು ತಪ್ಪಾಗಿ ಅರ್ಥೈಸಲಾಗಿದೆ” – ದೇಶಪಾಂಡೆ ಸ್ಪಷ್ಟನೆ

On: October 13, 2025 7:25 PM
Follow Us:

ಕಾರವಾರ, ಅಕ್ಟೋಬರ್​ 13: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಶಾಸಕ ಆರ್​.ವಿ. ದೇಶಪಾಂಡೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶಪಾಂಡೆಗೆ ಸ್ವತಃ ಕರೆ ಮಾಡಿ, ಹೇಳಿಕೆಯ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ ಎನ್ನಲಾಗಿದೆ.

ಮಾಹಿತಿ ಪ್ರಕಾರ, ಸಿಎಂ ಅವರೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ದೇಶಪಾಂಡೆ ಅವರು, “ನಾನು ಬೆಂಗಳೂರಿಗೆ ಬಂದು ಈ ಕುರಿತು ಸ್ವತಃ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ. ಹುಬ್ಬಳ್ಳಿಯಿಂದ ರಾತ್ರಿ 8 ಗಂಟೆಗೆ ಬೆಂಗಳೂರಿಗೆ ತೆರಳಲಿರುವ ಅವರು ಇಂದು ರಾತ್ರಿ ಅಥವಾ ನಾಳೆ ಮುಖ್ಯಮಂತ್ರಿಯನ್ನು ಭೇಟಿಯಾಗುವ ಸಾಧ್ಯತೆಯಿದೆ.

ದೇಶಪಾಂಡೆ ಸ್ಪಷ್ಟನೆ

ಚರ್ಚೆ ತೀವ್ರಗೊಂಡ ಹಿನ್ನೆಲೆಯಲ್ಲಿ ಮಾಧ್ಯಮ ಪ್ರಕಟಣೆ ಮೂಲಕ ದೇಶಪಾಂಡೆ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

“ದಾಂಡೇಲಿಯಲ್ಲಿ ನಡೆದ ಸಭೆಯಲ್ಲಿ ನಾನು ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡಿಲ್ಲ. ಸಿದ್ದರಾಮಯ್ಯ ಅವರು ಬಡವರ ಪರವಾಗಿ ಜಾರಿಗೆ ತಂದಿರುವ ಈ ಯೋಜನೆಗಳು ಶ್ಲಾಘನೀಯ. ನನ್ನ ಮಾತಿನ ಉದ್ದೇಶ ಟೀಕಿಸುವುದಲ್ಲ, ಪ್ರಶಂಸಿಸುವುದೇ. ಆದರೆ ಕೆಲವರು ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿದ್ದಾರೆ ಎಂಬುದು ವಿಷಾದನೀಯ,” ಎಂದು ಅವರು ತಿಳಿಸಿದ್ದಾರೆ.

ಅವರು ಮುಂದುವರೆದು, “ಸಿದ್ದರಾಮಯ್ಯ ಅವರ ಜನಪರ ಆಡಳಿತ ಶಕ್ತಿ ಈ ಯೋಜನೆಗಳಲ್ಲಿದೆ. ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ತಂದಿದೆ ಎಂಬ ಮಾತು ನಾನು ಎಲ್ಲಿಯೂ ಹೇಳಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಈಗಾಗಲೇ ಗ್ಯಾರಂಟಿಗಳ ಆರ್ಥಿಕ ಪರಿಣಾಮಗಳ ಬಗ್ಗೆ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ, ಸ್ವಪಕ್ಷದ ಹಿರಿಯ ನಾಯಕರ ಹೇಳಿಕೆ ಸಿಎಂಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

K.M.Sathish Gowda

Join WhatsApp

Join Now

Facebook

Join Now

Read more

ಜಲಕ್ರಾಂತಿಗೆ ದೆಹಲಿಯಲ್ಲಿ ಹೊಸ ಚೈತನ್ಯ: ಶ್ರೀ ತರಳಬಾಳು ಜಗದ್ಗುರು ಮತ್ತು ಜಲತಜ್ಞ ಡಾ. ರಾಜೇಂದ್ರ ಸಿಂಗ್ ನಡುವೆ ಮಹತ್ವದ ಮಾತುಕತೆ

ಹಾಸನದಲ್ಲಿ ಗೂಂಡಾಗಿರಿ: ಬೆಟ್ಟದ ಭೈರವೇಶ್ವರ ದೇವಸ್ಥಾನ ಬಳಿ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ, ಪ್ರಕರಣ ದಾಖಲು

ಶಿವಮೊಗ್ಗ ಪೊಲೀಸರಿಗೆ ಗೌರವ: ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ರಮೇಶ್ ಕುಮಾರ್ ಸೇರಿದಂತೆ ಮೂವರಿಗೆ ಮುಖ್ಯಮಂತ್ರಿ ಪದಕ ಘೋಷಣೆ

ಕೇಂದ್ರವನ್ನು ಟೀಕಿಸುವುದರಲ್ಲೇ 3 ವರ್ಷ ವ್ಯರ್ಥ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಶ್ರೀ ರಾಮನವಮಿ ಸಂಭ್ರಮ: ಶಿವಮೊಗ್ಗದಲ್ಲಿ ಅದ್ಧೂರಿ ರಥೋತ್ಸವ ಹಾಗೂ ದುರ್ಗಿಗುಡಿ ಮಿತ್ರಕೂಟದಿಂದ ಪಾನಕ–ಕೋಸಂಬರಿ ವಿತರಣೆ

ಇಂಧನ ಬೆಲೆ ಏರಿಕೆ ಭೀತಿ ನಡುವೆ ಕೇಂದ್ರದ ದೊಡ್ಡ ನಿರ್ಧಾರ: ಪೆಟ್ರೋಲ್ ಸುಂಕ 3 ರೂ., ಡೀಸೆಲ್ ಸುಂಕ ಸಂಪೂರ್ಣ ರದ್ದು

Leave a Comment