ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಎಸ್. ಬಂಗಾರಪ್ಪನವರ ಸ್ಮರಣೆಗೆ ಮತ್ತೊಂದು ಗೌರವ — ಶಿವಮೊಗ್ಗ ನಗರದ ನೂರು ಅಡಿ ರಸ್ತೆಗೆ ‘ಶ್ರೀ ಎಸ್. ಬಂಗಾರಪ್ಪ ಮಾರ್ಗ’ ಎಂದು ನಾಮಕರಣ

On: October 29, 2025 12:24 AM
Follow Us:

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ, ಸಮ ಸಮಾಜದ ಸಮಾಜಮುಖಿ ನಾಯಕ ಹಾಗೂ ರಾಜ್ಯದ ಅಪರೂಪದ ರಾಜಕಾರಣಿ ಶ್ರೀ ಎಸ್. ಬಂಗಾರಪ್ಪನವರ 93ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಅವರ ಜನ್ಮಸ್ಥಳವಾದ ಬಂಗಾರದಮವನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆ ಐತಿಹಾಸಿಕ ಪ್ರವಾಸಿ ತಾಣವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗದಲ್ಲಿ ಮತ್ತೊಂದು ಗೌರವದ ಸುದ್ದಿ ಬಂದಿದೆ.

ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯ ನೂರು ಅಡಿ ರಸ್ತೆಯನ್ನು ಹಾಲ್ಕುಳ ರಸ್ತೆದಿಂದ ಡಿವಿಜಿ ಸರ್ಕಲ್‌ವರೆಗೆ “ಶ್ರೀ ಎಸ್. ಬಂಗಾರಪ್ಪ ಮಾರ್ಗ” ಎಂದು ನಾಮಕರಣ ಮಾಡಲು ಘನ ಸರ್ಕಾರ ಆದೇಶ ಹೊರಡಿಸಿದೆ.

ಈ ಆದೇಶವನ್ನು ಅತ್ಯಂತ ತುಂಬು ಹೃದಯದಿಂದ ಸ್ವಾಗತಿಸಿರುವ ಜಿಲ್ಲಾ ಆರ್ಯ ಈಡಿಗರ ಸಂಘದ ನಿರ್ದೇಶಕರು ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರಾದ ಜಿ.ಡಿ. ಮಂಜುನಾಥ್, ಈ ನಾಮಕರಣಕ್ಕೆ ಕಾರಣಿ ಭೂತರಾದ ಎಲ್ಲ ಸಂಘ-ಸಂಸ್ಥೆಗಳು ಹಾಗೂ ಹಿರಿಯ ಮುಖಂಡರಿಗೆ ಎಸ್. ಬಂಗಾರಪ್ಪ ವಿಚಾರವೇದಿಕೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

“ಬಂಗಾರಪ್ಪನವರ ಸಮಾಜಮುಖಿ ಚಿಂತನೆ ಹಾಗೂ ಜನಪರ ಆಡಳಿತದಿಂದ ಅವರು ಎಲ್ಲ ಜನಾಂಗಗಳ ಹೃದಯದಲ್ಲಿ ಅಳಿಸಲಾಗದ ಗುರುತು ಬಿಟ್ಟಿದ್ದಾರೆ. ಈ ನಾಮಕರಣವು ಅವರ ಸ್ಮರಣೆಯನ್ನು ಶಾಶ್ವತಗೊಳಿಸುವ ಹೆಜ್ಜೆ,” ಎಂದು ಹೇಳಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಪೊಲೀಸ್ ಇಲಾಖೆಯಲ್ಲಿ ‘ಮೇಜರ್ ಸರ್ಜರಿ’: 129 ಇನ್ಸ್‌ಪೆಕ್ಟರ್‌, 23 ಡಿವೈಎಸ್ಪಿಗಳಿಗೆ ವರ್ಗಾವಣೆ; ಬೆಂಗಳೂರು ಸಿಟಿ ಪಟ್ಟಿ ಇನ್ನೂ ಬಾಕಿ

ಸೂಡಾ ಕಾಮಗಾರಿಗಳ ಮೇಲೆ ಭ್ರಷ್ಟಾಚಾರ ನೆರಳು; ಡಿಸಿ ಕಚೇರಿ ಮುಂದೆ ಜೆಡಿಎಸ್ ಪ್ರತಿಭಟನೆ

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

Leave a Comment