ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ವಿಜಯಪುರ ಜಿಲ್ಲೆ ಪ್ರವೇಶ ನಿರ್ಬಂಧ: ಕನ್ನೇರಿ ಸ್ವಾಮೀಜಿಗೆ ಸುಪ್ರೀಂಕೋರ್ಟ್ ಹಿನ್ನಡೆ

On: October 29, 2025 10:53 PM
Follow Us:

ವಿಜಯಪುರ: ಲಿಂಗಾಯತ ಒಕ್ಕೂಟದ ಸ್ವಾಮೀಜಿಗಳ ಬಗ್ಗೆ ಕನ್ನೇರಿ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡಿದ ಪರಿಣಾಮ, ವಿಜಯಪುರ ಜಿಲ್ಲೆ ಪ್ರವೇಶಕ್ಕೆ ಕನ್ನೇರಿ ಸ್ವಾಮೀಜಿಗೆ ಜಿಲ್ಲಾಡಳಿತದಿಂದ ನಿರ್ಬಂಧ ವಿಧಿಸಲಾಗಿತ್ತು. ಈ ನಿರ್ಬಂಧವನ್ನು ಹೈಕೋರ್ಟ್ ನಂತರ ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿದೆ. ಹೀಗಾಗಿ ಕನ್ನೇರಿ ಸ್ವಾಮೀಜಿಗೆ ಕಾನೂನು ಹೋರಾಟದಲ್ಲಿ ಹಿನ್ನಡೆ ಎದುರಾಗಿದೆ.

ಕನ್ನಡಿಗ ಸಮಾಜದ ಗಮನ ಸೆಳೆದ ಈ ಪ್ರಕರಣದಲ್ಲಿ, ಕನ್ನೇರಿ ಸ್ವಾಮೀಜಿ ಲಿಂಗಾಯತ ಒಕ್ಕೂಟದ ಶ್ರೀಗಳ ಬಗ್ಗೆ ಅವಮಾನಕಾರಿ ಹೇಳಿಕೆ ನೀಡಿರುವುದನ್ನು ಮೂಲ ಕಾರಣವಾಗಿ ಜಿಲ್ಲಾಡಳಿತ ಕ್ರಮ ಕೈಗೊಂಡಿತ್ತು. ಅಕ್ಟೋಬರ್ 16ರಿಂದ ಡಿಸೆಂಬರ್ 14ರವರೆಗೆ ಎರಡು ತಿಂಗಳು ವಿಜಯಪುರ ಜಿಲ್ಲೆಗೆ ಪ್ರವೇಶವನ್ನು ಕನ್ನೇರಿ ಸ್ವಾಮೀಜಿಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ವಿಜಯಪುರ ಜಿಲ್ಲಾಡಳಿತ ಈ ನಿರ್ಬಂಧವನ್ನು ಭಾರತೀಯ ದಂಡ ಸಂಹಿತೆಯ 163(3) ಸೆಕ್ಷನ್ ಪ್ರಕಾರ ಮುನ್ನೆಚ್ಚರಿಕಾ ಕ್ರಮವಾಗಿ ಹೇರಿತ್ತು. ಹೀಗಾಗಿ ಸಾರ್ವಜನಿಕ ಶಾಂತಿಯ ರಕ್ಷಣೆ ಮತ್ತು ಸಾರ್ವಜನಿಕ ಆತಂಕ ತಡೆಗೆ ಈ ಕ್ರಮ ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲಬುರ್ಗಿ ಹೈಕೋರ್ಟ್ ಪೀಠದ ಆದೇಶವನ್ನೇ ಪ್ರಶ್ನಿಸಿ ಕನ್ನೇರಿ ಸ್ವಾಮೀಜಿ ಪರವಾಗಿ ವಕೀಲರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ ಕೂಡ ಜಿಲ್ಲಾಡಳಿತದ ನಿರ್ಧಾರವನ್ನು ಶಿಘ್ರವಾಗಿ ಖಂಡಿಸಿ, ಹೈಕೋರ್ಟ್ ಆದೇಶವನ್ನೇ ಎತ್ತಿ ಹಿಡಿದಂತೆ, ಕನ್ನೇರಿ ಸ್ವಾಮೀಜಿಗೆ ಪ್ರವೇಶ ನಿರ್ಬಂಧ ಮುಂದುವರಿದಿದೆ.

K.M.Sathish Gowda

Join WhatsApp

Join Now

Facebook

Join Now

Leave a Comment