ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಿದ್ದರಾಮಯ್ಯ–ಡಿಕೆಶಿ ಬ್ರೇಕ್‌ಫಾಸ್ಟ್ ಸಂಧಾನ: ಅಧಿಕಾರ ಗೊಂದಲಕ್ಕೆ ತೆರೆ

On: November 29, 2025 12:38 PM
Follow Us:

ಬೆಂಗಳೂರು: ಅಧಿಕಾರ ಹಂಚಿಕೆ ವಿವಾದದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ ಮಹತ್ವದ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಸಿ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಸಿದ್ದರಾಮಯ್ಯರ ಕಾವೇರಿ ನಿವಾಸದಲ್ಲಿ ಇಬ್ಬರು ನಾಯಕರು ಉಪಹಾರ ಸೇವಿಸುತ್ತ ಚರ್ಚೆ ನಡೆಸಿದ್ದು, ನಂತರ ಸುದ್ದಿಗೋಷ್ಠಿ ನಡೆಸಿ ಜಂಟಿ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರ ಸ್ಪಷ್ಟನೆ

ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಗೊಂದಲ ನಿರ್ಮಾಣವಾಗುವುದರ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. “ಕಳೆದ ಒಂದು ತಿಂಗಳಿಂದ ಸೃಷ್ಟಿಯಾಗಿರುವ ಗೊಂದಲಕ್ಕೆ ನಾವಿಬ್ಬರೂ ಕುಳಿತು ಮಾತನಾಡಿದ್ದೇವೆ. ಮುಂದಿನ ಚುನಾವಣೆಗಳು ನಮಗೆ ಅತ್ಯಂತ ಮುಖ್ಯ. ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರಲು ಒಟ್ಟಾಗಿ ಕಾರ್ಯನಿರ್ವಹಿಸುವುದಾಗಿ ತೀರ್ಮಾನಿಸಿದ್ದೇವೆ,” ಎಂದು ಹೇಳಿದರು. ತಾವು ಮತ್ತು ಡಿಕೆ ಶಿವಕುಮಾರ್ ನಡುವೆ ಯಾವುದೇ ವಿಧದ ವ್ಯತ್ಯಾಸವಿಲ್ಲವೆಂದು ಸ್ಪಷ್ಟಪಡಿಸಿದ ಸಿಎಂ, “ಇಂದಿಗೂ, ಎಂದೆಂದಿಗೂ ವ್ಯತ್ಯಾಸ ಇರುವುದಿಲ್ಲ. ನಾವು ಒಟ್ಟಿಗೇ ಹೋಗುತ್ತೇವೆ,” ಎಂದರು.

ಮುಂದುವರಿಸಿ, “ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ–ಜೆಡಿಎಸ್ ಮಾಡಬಹುದಾದ ಆರೋಪಗಳಿಗೆ ನಾವು ಸಮರ್ಥವಾಗಿ ಉತ್ತರಿಸಲು ತಂತ್ರ ರೂಪಿಸಿದ್ದೇವೆ. ನಮ್ಮ ಬಳಿ 142 ಶಾಸಕರು ಇದ್ದಾರೆ. ನಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಸಾಧ್ಯವೇ ಇಲ್ಲ,” ಎಂದು ಹೇಳಿದರು.
ಹೈಕಮಾಂಡ್ ನೀಡಿದ ಸೂಚನೆಗಳಿಗೆ ಇಬ್ಬರೂ ಸಂಪೂರ್ಣ ಬದ್ಧರಾಗಿದ್ದು, “ನಾಳೆಯಿಂದ ಯಾವುದೇ ಗೊಂದಲ ಇರೋದಿಲ್ಲ,” ಎಂದು ಭರವಸೆ ನೀಡಿದರು.

ಡಿಕೆ ಶಿವಕುಮಾರ್ ಅವರ ಪ್ರತಿಕ್ರಿಯೆ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಸಿದ್ದರಾಮಯ್ಯರ ಮಾತಿಗೆ ಪ್ರತಿಧ್ವನಿಯಾಗಿ, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸದಿಂದ ಬಂದಿದೆ. ಜನರಿಗೆ ನೀಡಿದ ಭರವಸೆಗಳನ್ನು ನಾವು ಈಡೇರಿಸುತ್ತಿದ್ದೇವೆ. ಸಿದ್ದರಾಮಯ್ಯರ ನೇತೃತ್ವದಲ್ಲಿ ನಾವು ಒಂದೇ ರಾಜಕೀಯ ತೀರ್ಮಾನಕ್ಕೆ ಬಂದಿದ್ದೇವೆ,” ಎಂದು ತಿಳಿಸಿದರು.

“ವಿರೋಧ ಪಕ್ಷಗಳು ಏನೇ ಮಾಡಿದರೂ ಅದರ ವಿರುದ್ಧ ತಂತ್ರ ರೂಪಿಸಿದ್ದೇವೆ. ನಾನು ಯಾವುದೇ ಗುಂಪು ರಾಜಕೀಯಕ್ಕೆ ಅವಕಾಶ ನೀಡಿಲ್ಲ. ಹೈಕಮಾಂಡ್ ಹೇಳಿದಂತೆ ಇಬ್ಬರೂ ಸೇರಿ ಕೆಲಸ ಮಾಡುತ್ತೇವೆ,” ಎಂದು ಹೇಳಿದರು.

ಅಧಿಕಾರ ಹಂಚಿಕೆ ಕುರಿತಾಗಿ ತೀವ್ರತೆ ಮೂಡುತ್ತಿದ್ದ ಸಂದರ್ಭದಲ್ಲಿ ಇಬ್ಬರು ನಾಯಕರು ಒಂದೇ ವೇದಿಕೆಯಲ್ಲಿ ಬಂದು ಜಂಟಿ ಸಂದೇಶ ಕೊಟ್ಟಿರುವುದು ಕಾಂಗ್ರೆಸ್ ಹೈಕಮಾಂಡ್ ಸೂಚನೆಗಳ ಪಾಲನೆ ಮಾತ್ರವಲ್ಲ, ಸರ್ಕಾರದ ಏಕತೆ ಪ್ರದರ್ಶನವಾಗಿಯೂ ಕಾಣಿಸಿದೆ. ಮುಂದೆ ಗೊಂದಲವಿಲ್ಲದೆ ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಇಬ್ಬರು ನಾಯಕರು ಘೋಷಿಸಿದ್ದು, ರಾಜಕೀಯ ವಲಯದಲ್ಲಿ ಇದೊಂದು ಶಾಂತಿದಾಯಕ ಸಂದೇಶವಾಗಿದೆ.

K.M.Sathish Gowda

Join WhatsApp

Join Now

Facebook

Join Now

Read more

ಜಲಕ್ರಾಂತಿಗೆ ದೆಹಲಿಯಲ್ಲಿ ಹೊಸ ಚೈತನ್ಯ: ಶ್ರೀ ತರಳಬಾಳು ಜಗದ್ಗುರು ಮತ್ತು ಜಲತಜ್ಞ ಡಾ. ರಾಜೇಂದ್ರ ಸಿಂಗ್ ನಡುವೆ ಮಹತ್ವದ ಮಾತುಕತೆ

ಹಾಸನದಲ್ಲಿ ಗೂಂಡಾಗಿರಿ: ಬೆಟ್ಟದ ಭೈರವೇಶ್ವರ ದೇವಸ್ಥಾನ ಬಳಿ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ, ಪ್ರಕರಣ ದಾಖಲು

ಶಿವಮೊಗ್ಗ ಪೊಲೀಸರಿಗೆ ಗೌರವ: ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ರಮೇಶ್ ಕುಮಾರ್ ಸೇರಿದಂತೆ ಮೂವರಿಗೆ ಮುಖ್ಯಮಂತ್ರಿ ಪದಕ ಘೋಷಣೆ

ಕೇಂದ್ರವನ್ನು ಟೀಕಿಸುವುದರಲ್ಲೇ 3 ವರ್ಷ ವ್ಯರ್ಥ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಶ್ರೀ ರಾಮನವಮಿ ಸಂಭ್ರಮ: ಶಿವಮೊಗ್ಗದಲ್ಲಿ ಅದ್ಧೂರಿ ರಥೋತ್ಸವ ಹಾಗೂ ದುರ್ಗಿಗುಡಿ ಮಿತ್ರಕೂಟದಿಂದ ಪಾನಕ–ಕೋಸಂಬರಿ ವಿತರಣೆ

ಇಂಧನ ಬೆಲೆ ಏರಿಕೆ ಭೀತಿ ನಡುವೆ ಕೇಂದ್ರದ ದೊಡ್ಡ ನಿರ್ಧಾರ: ಪೆಟ್ರೋಲ್ ಸುಂಕ 3 ರೂ., ಡೀಸೆಲ್ ಸುಂಕ ಸಂಪೂರ್ಣ ರದ್ದು

Leave a Comment