ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಉಪಗ್ರಹದಿಂದ ನೇರ ಮೊಬೈಲ್ ನೆಟ್‌ವರ್ಕ್: BlueBird Block-2 ಇಸ್ರೋದಿಂದ ಯಶಸ್ವಿ ಉಡಾವಣೆ

On: December 24, 2025 1:36 PM
Follow Us:

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಅಮೆರಿಕದ ಖಾಸಗಿ ಕಂಪನಿ AST SpaceMobileಗೆ ಸೇರಿದ BlueBird Block-2 ಸಂವಹನ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇಂದು ಬೆಳಗ್ಗೆ 8:55:30ಕ್ಕೆ ಇಸ್ರೋನ ಬಾಹುಬಲಿ ಹೆವಿ-ಲಿಫ್ಟ್ ರಾಕೆಟ್ LVM3-M6 ಮೂಲಕ ಈ ಉಪಗ್ರಹವನ್ನು ಭೂಮಿಯ ಕೆಳ ಕಕ್ಷೆ (LEO)ಯಲ್ಲಿ ಸ್ಥಾಪಿಸಲಾಗಿದೆ. ಇದು ಇಸ್ರೋ ನಡೆಸಿದ ಸಂಪೂರ್ಣ ವಾಣಿಜ್ಯಿಕ ಉಡಾವಣೆಯಾಗಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ವಿಶ್ವಾಸಾರ್ಹತೆಯನ್ನು ಮತ್ತಷ್ಟು ಬಲಪಡಿಸಿದೆ.

ಸುಮಾರು 6100 ಕೆಜಿ ತೂಕ ಹೊಂದಿರುವ BlueBird Block-2 ಉಪಗ್ರಹವು, LVM3 ರಾಕೆಟ್ ಮೂಲಕ ಭೂಮಿಯ ಅತ್ಯಂತ ಕೆಳ ಕಕ್ಷೆಯಲ್ಲಿ ಇರಿಸಲಾದ ಅತಿಭಾರವಾದ ಪೇಲೋಡ್ ಎಂಬ ದಾಖಲೆಯನ್ನು ನಿರ್ಮಿಸಿದೆ. ಈ ಉಪಗ್ರಹದ ಪ್ರಮುಖ ವಿಶೇಷತೆ ಎಂದರೆ 4G ಮತ್ತು 5G ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಬ್ರಾಡ್‌ಬ್ಯಾಂಡ್ ಸಂಪರ್ಕ ಒದಗಿಸುವ ಸಾಮರ್ಥ್ಯ. ಇದರ ಮೂಲಕ ಸಂಪ್ರದಾಯಿಕ ಮೊಬೈಲ್ ಟವರ್‌ಗಳ ಅವಶ್ಯಕತೆ ಬಹುತೇಕ ಕಡಿಮೆಯಾಗಲಿದೆ.

ಈ ಉಪಗ್ರಹ ಉಡಾವಣೆಯ ಪ್ರಮುಖ ಗುರಿ ಸಂಪೂರ್ಣವಾಗಿ ವಾಣಿಜ್ಯಿಕವಾಗಿದ್ದು, ಸಂವಹನ ಉಪಗ್ರಹ ಉಡಾವಣಾ ವಲಯದಲ್ಲಿ ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರಮುಖ ಕೇಂದ್ರವಾಗಿ ರೂಪಿಸುವುದಾಗಿದೆ. BlueBird Block-2 ಯಶಸ್ವಿ ಉಡಾವಣೆಯೊಂದಿಗೆ, ದೂರದ ಪ್ರದೇಶಗಳು, ಅರಣ್ಯ ಪ್ರದೇಶಗಳು ಹಾಗೂ ನೆಟ್‌ವರ್ಕ್ ಕೊರತೆಯಿರುವ ಭಾಗಗಳಲ್ಲಿಯೂ 4G ಮತ್ತು 5G ಸೇವೆಗಳು ಲಭ್ಯವಾಗಲಿವೆ. ಇದರಿಂದ ಧ್ವನಿ ಕರೆ, ವೀಡಿಯೊ ಕರೆ, ಸಂದೇಶ ವಿನಿಮಯ ಮತ್ತು ಡೇಟಾ ಸೇವೆಗಳು ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಸಾಧ್ಯವಾಗಲಿದೆ.

ಅಮೆರಿಕದ AST SpaceMobile ಕಂಪನಿಯು ಈಗಾಗಲೇ ಸೆಪ್ಟೆಂಬರ್ 2024ರಲ್ಲಿ BlueBird-1 ಸೇರಿದಂತೆ ಐದು ಉಪಗ್ರಹಗಳನ್ನು ಉಡಾವಣೆ ಮಾಡಿದ್ದು, ವಿಶ್ವದಾದ್ಯಂತ 50ಕ್ಕೂ ಹೆಚ್ಚು ಮೊಬೈಲ್ ಆಪರೇಟರ್‌ಗಳೊಂದಿಗೆ ಪಾಲುದಾರಿಕೆ ಹೊಂದಿದೆ. ಸಾಂಪ್ರದಾಯಿಕ ನೆಟ್‌ವರ್ಕ್‌ಗಳು ತಲುಪದ ಪ್ರದೇಶಗಳಿಗೆ ಮೊಬೈಲ್ ಸಂಪರ್ಕ ಒದಗಿಸುವುದು ಈ ಕಂಪನಿಯ ಪ್ರಮುಖ ಗುರಿಯಾಗಿದೆ. ಮುಂದಿನ ದಿನಗಳಲ್ಲಿ ಇದೇ ರೀತಿಯ ಇನ್ನಷ್ಟು ಉಪಗ್ರಹಗಳನ್ನು ಉಡಾವಣೆ ಮಾಡುವ ಯೋಜನೆಯೂ ಇದೆ.

ಈ ಸೇವೆ ಪಡೆಯಲು ಬಳಕೆದಾರರು ತಮ್ಮ ಮೊಬೈಲ್ ಸೇವಾ ಪೂರೈಕೆದಾರರನ್ನು ಬದಲಾಯಿಸುವ ಅಗತ್ಯವಿಲ್ಲ. AST SpaceMobile ಜಾಗತಿಕ ಮೊಬೈಲ್ ಆಪರೇಟರ್‌ಗಳೊಂದಿಗೆ ಕೆಲಸ ಮಾಡುತ್ತಿರುವುದರಿಂದ, ಸಾಮಾನ್ಯ ಬಳಕೆದಾರರಿಗೆ ಈ ಸೇವೆ ಸುಲಭವಾಗಿ ಲಭ್ಯವಾಗಲಿದೆ. ಇಸ್ರೋ ಮತ್ತು AST SpaceMobile ನಡುವಿನ ಒಪ್ಪಂದದ ಅಡಿಯಲ್ಲಿ ನಡೆದ ಈ ಉಡಾವಣೆ, ಭಾರತೀಯ ಬಾಹ್ಯಾಕಾಶ ವಲಯಕ್ಕೆ ಹೊಸ ಆಯಾಮ ನೀಡಿದ್ದು, ಜಗತ್ತಿನ ಮೊಬೈಲ್ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ದಾರಿ ಮಾಡಿಕೊಡಲಿದೆ.

K.M.Sathish Gowda

Join WhatsApp

Join Now

Facebook

Join Now

Read more

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

‘ಎಲ್ಲರೂ ಬಾಯಿ ಮುಚ್ಚಿಕೊಂಡಿರಬೇಕು’: ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ಸಂದೇಶ

ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ–ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮೇಲೆ ಒತ್ತಡ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Comment