ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗ ನಗರದಲ್ಲಿ ‘ಅಕ್ಕ ಪಡೆ’ಗೆ ಚಾಲನೆ ಮಹಿಳಾ ಸುರಕ್ಷತೆಗೆ ಬಲವಾದ ಪೊಲೀಸ್ ವ್ಯವಸ್ಥೆ: ಅಸಭ್ಯ ವರ್ತನೆಗೆ ಕಠಿಣ ಎಚ್ಚರಿಕೆ,.!

On: January 7, 2026 7:01 PM
Follow Us:

ಶಿವಮೊಗ್ಗ: ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಹಾಗೂ ಶಿವಮೊಗ್ಗ ನಗರ ಮತ್ತು ಹೊರವಲಯದಲ್ಲಿ ಸಮಾಜಘಾತುಕ ಶಕ್ತಿಗಳ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ‘ಅಕ್ಕ ಪಡೆ’ಯನ್ನು ರಚಿಸಲಾಗಿದ್ದು, ಇಂದು ಬೆಳಗ್ಗೆ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಅದಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ, ಹಾಗೂ ಸಂತೋಷ್ ಎಂ.ಎಸ್, ಮಾನ್ಯ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ರವರು ಅಕ್ಕ ಪಡೆಗೆ ಅಧಿಕೃತವಾಗಿ ಚಾಲನೆ ನೀಡಿ ಶುಭಹಾರೈಸಿದರು.

ಅಕ್ಕ ಪಡೆಗೆ ನಿಯೋಜಿಸಲಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಬಸ್ ನಿಲ್ದಾಣ, ಮಾರುಕಟ್ಟೆ, ದೇವಸ್ಥಾನ, ಉದ್ಯಾನವನಗಳು ಸೇರಿದಂತೆ ಜನಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ನಿರಂತರ ಗಸ್ತು ನಡೆಸಲಿದ್ದಾರೆ. ಅದರೊಂದಿಗೆ ಶಾಲಾ–ಕಾಲೇಜುಗಳು ಆರಂಭವಾಗುವ ಮತ್ತು ಮುಕ್ತಾಯವಾಗುವ ಸಮಯದಲ್ಲಿ, ಲೇಡಿಸ್ ಹಾಸ್ಟೇಲ್‌ಗಳ ಸುತ್ತಮುತ್ತ ವಿಶೇಷ ನಿಗಾ ವಹಿಸಲಾಗುತ್ತದೆ. ಮಹಿಳೆಯರು ಹಾಗೂ ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸುವವರ ಮೇಲೆ ತಕ್ಷಣದ ಕ್ರಮ ಜರುಗಿಸಲಾಗುವ ಮೂಲಕ ತಪ್ಪಿತಸ್ಥರಿಗೆ ಕಠಿಣ ಸಂದೇಶ ರವಾನಿಸಲಾಗುತ್ತದೆ.

ಅಕ್ಕ ಪಡೆಗೆ ನಿಯೋಜಿಸಲಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಬಸ್ ನಿಲ್ದಾಣ, ಮಾರುಕಟ್ಟೆ, ದೇವಸ್ಥಾನ, ಉದ್ಯಾನವನಗಳು ಸೇರಿದಂತೆ ಜನಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ನಿರಂತರ ಗಸ್ತು ನಡೆಸಲಿದ್ದಾರೆ. ಅದರೊಂದಿಗೆ ಶಾಲಾ–ಕಾಲೇಜುಗಳು ಆರಂಭವಾಗುವ ಮತ್ತು ಮುಕ್ತಾಯವಾಗುವ ಸಮಯದಲ್ಲಿ, ಲೇಡಿಸ್ ಹಾಸ್ಟೇಲ್‌ಗಳ ಸುತ್ತಮುತ್ತ ವಿಶೇಷ ನಿಗಾ ವಹಿಸಲಾಗುತ್ತದೆ. ಮಹಿಳೆಯರು ಹಾಗೂ ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸುವವರ ಮೇಲೆ ತಕ್ಷಣದ ಕ್ರಮ ಜರುಗಿಸಲಾಗುವ ಮೂಲಕ ತಪ್ಪಿತಸ್ಥರಿಗೆ ಕಠಿಣ ಸಂದೇಶ ರವಾನಿಸಲಾಗುತ್ತದೆ.

ಈ ಹೊಸ ವ್ಯವಸ್ಥೆಯಿಂದ ಮಹಿಳೆಯರಿಗೆ ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತೆಯ ಭರವಸೆ ಮೂಡಲಿದೆ. ವಿದ್ಯಾರ್ಥಿನಿಯರು, ಕೆಲಸಕ್ಕೆ ತೆರಳುವ ಮಹಿಳೆಯರು ಹಾಗೂ ಮನೆಮಂದಿಯವರು ಯಾವುದೇ ಆತಂಕವಿಲ್ಲದೆ ಸಂಚರಿಸುವಂತ ವಾತಾವರಣ ನಿರ್ಮಾಣವಾಗಲಿದೆ. ಅಷ್ಟೇ ಅಲ್ಲದೆ, ಅಪರಾಧಗಳಿಗೆ ಅವಕಾಶವೇ ಇಲ್ಲದಂತೆ ಮುನ್ನೆಚ್ಚರಿಕಾ ಕ್ರಮಗಳ ಮೂಲಕ ಸಮಾಜದಲ್ಲಿ ಶಿಸ್ತು ಮತ್ತು ಕಾನೂನು ಗೌರವ ಹೆಚ್ಚುವ ನಿರೀಕ್ಷೆಯಿದೆ.

ಒಟ್ಟಾರೆ, ಶಿವಮೊಗ್ಗ ನಗರದಲ್ಲಿ ಅಕ್ಕ ಪಡೆ ಪ್ರಾರಂಭವಾಗಿರುವುದು ಮಹಿಳಾ ಸುರಕ್ಷತೆಗಾಗಿ ಕೈಗೊಳ್ಳಲಾದ ಮಹತ್ವದ ಹೆಜ್ಜೆಯಾಗಿದ್ದು, ಇನ್ನುಮುಂದೆ ಅಸಭ್ಯ ವರ್ತನೆಗೆ ತೊಡಗುವವರಿಗೆ ಇದು ಸ್ಪಷ್ಟ ಎಚ್ಚರಿಕೆಯಾಗಿದೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಪೊಲೀಸರು ಯಾವುದೇ ಸಡಿಲಿಕೆ ತೋರದೆ ಕ್ರಮ ಕೈಗೊಳ್ಳಲಿದ್ದಾರೆ ಎಂಬ ಸಂದೇಶವನ್ನು ಅಕ್ಕ ಪಡೆ ಬಲವಾಗಿ ಸಾರುತ್ತಿದೆ.

K.M.Sathish Gowda

Join WhatsApp

Join Now

Facebook

Join Now

Read more

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

‘ಎಲ್ಲರೂ ಬಾಯಿ ಮುಚ್ಚಿಕೊಂಡಿರಬೇಕು’: ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ಸಂದೇಶ

ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ–ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮೇಲೆ ಒತ್ತಡ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Comment