ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಹೊಸ ಅವಕಾಶ: ಸಿವಿಲ್‌ ನೇಮಕಾತಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಸಾಧ್ಯತೆ

On: January 22, 2026 10:36 PM
Follow Us:

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಸಿವಿಲ್‌ ಸೇವೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ನಿರಾಳತೆ ನೀಡುವ ತೀರ್ಮಾನವೊಂದು ಕೈಗೊಳ್ಳುವ ಸಾಧ್ಯತೆ ಇದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸಲ್ಪಡುವ ಎಲ್ಲಾ ರೀತಿಯ ಸಿವಿಲ್‌ ಹುದ್ದೆಗಳ ನೇಮಕಾತಿ ಅಧಿಸೂಚನೆಗಳಿಗೆ ಅನ್ವಯಿಸುವಂತೆ, ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಒಂದು ಬಾರಿ ಐದು ವರ್ಷಗಳವರೆಗೆ ಸಡಿಲಿಕೆ ಮಾಡುವ ಕುರಿತು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಅಧಿಕೃತ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.

ನೇಮಕಾತಿ ವಿಳಂಬಕ್ಕೆ ಒಳಮೀಸಲಾತಿ ವಿವಾದ ಕಾರಣ

ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ವಿವಿಧ ಕಾರಣಗಳಿಂದಾಗಿ ಸರ್ಕಾರಿ ನೇಮಕಾತಿ ಪ್ರಕ್ರಿಯೆಗಳು ನಿರಂತರವಾಗಿ ವಿಳಂಬವಾಗುತ್ತಿವೆ. ವಿಶೇಷವಾಗಿ ಎಸ್ಸಿ ಒಳಮೀಸಲಾತಿ ಕುರಿತ ವಿವಾದ, ನ್ಯಾಯಾಲಯದ ವಿಚಾರಣೆ ಹಾಗೂ ಮೀಸಲಾತಿ ಪ್ರಮಾಣ ಶೇ.50 ಮಿತಿಯೊಳಗೇ ಇರಬೇಕೇ ಅಥವಾ ಶೇ.56ರವರೆಗೆ ನೀಡಬಹುದೇ ಎಂಬ ಪ್ರಶ್ನೆಗಳು ಇನ್ನೂ ಕಾನೂನು ತೀರ್ಮಾನಕ್ಕೆ ಬಾಕಿ ಇರುವುದರಿಂದ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಂತಾಗಿದೆ.

ಈ ವಿಳಂಬದ ಪರಿಣಾಮವಾಗಿ ಸಾವಿರಾರು ಅರ್ಹ ಅಭ್ಯರ್ಥಿಗಳು ವಯೋಮಿತಿ ಕಾರಣಕ್ಕೆ ಉದ್ಯೋಗ ಅವಕಾಶ ಕಳೆದುಕೊಳ್ಳುತ್ತಿರುವುದಾಗಿ ಆರೋಪಿಸಿ ರಾಜ್ಯಾದ್ಯಂತ ಉದ್ಯೋಗಾಕಾಂಕ್ಷಿಗಳು ಹೋರಾಟ ನಡೆಸಿದ್ದರು. ವಯೋಮಿತಿಯಲ್ಲಿ ಕನಿಷ್ಠ ಐದು ವರ್ಷಗಳ ಸಡಿಲಿಕೆ ನೀಡಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿತ್ತು.

ಹಿಂದಿನ ಸರ್ಕಾರದ ಆದೇಶಗಳು ಹಾಗೂ ವಿರೋಧ

ಈ ಹೋರಾಟದ ಹಿನ್ನೆಲೆಯಲ್ಲೇ ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯ ಸರ್ಕಾರ ಎಸ್ಸಿ ಒಳಮೀಸಲಾತಿ ಜಾರಿಗೆ ನಿರ್ಧರಿಸಿತ್ತು. ಈ ಕ್ರಮದ ಭಾಗವಾಗಿ ಸೆಪ್ಟೆಂಬರ್ 6ರಂದು ಎರಡು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 29ರಂದು ಪರಿಷ್ಕೃತ ಆದೇಶ ಹೊರಡಿಸಿ 2025ರಿಂದ ಡಿಸೆಂಬರ್ 27, 2027ರವರೆಗೆ ಹೊರಡಿಸಲ್ಪಡುವ ಅಧಿಸೂಚನೆಗಳಿಗೆ ಅನ್ವಯಿಸುವಂತೆ ಮೂರು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿತ್ತು.

ಆದರೂ, ಎಸ್ಸಿ ಒಳಮೀಸಲಾತಿ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿರುವುದರಿಂದ ಹಾಗೂ ಮೀಸಲಾತಿ ಪ್ರಮಾಣ ಕುರಿತ ಗೊಂದಲ ಇನ್ನೂ ನಿವಾರಣೆಯಾಗದ ಕಾರಣ ನೇಮಕಾತಿ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಲಕ್ಷಣಗಳು ಕಂಡುಬಂದಿವೆ.

ಐದು ವರ್ಷ ವಯೋಮಿತಿ ಸಡಿಲಿಕೆಗೆ ಸರ್ಕಾರ ಚಿಂತನೆ

ಈ ಹಿನ್ನೆಲೆಯಲ್ಲಿ, ಸಿವಿಲ್‌ ಸೇವೆಗಳಿಗೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಮ್ಮೆ ಮಾತ್ರ ಅನ್ವಯಿಸುವಂತೆ ಐದು ವರ್ಷಗಳವರೆಗೆ ಸಡಿಲಿಕೆ ನೀಡುವ ಮಹತ್ವದ ನಿರ್ಧಾರವನ್ನು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ. ಈ ನಿರ್ಧಾರ ಜಾರಿಯಾದರೆ, ವಯಸ್ಸಿನ ಮಿತಿಯಿಂದ ಉದ್ಯೋಗ ಅವಕಾಶ ಕಳೆದುಕೊಳ್ಳುತ್ತಿದ್ದ ಅನೇಕ ಅಭ್ಯರ್ಥಿಗಳಿಗೆ ಹೊಸ ದಾರಿ ತೆರೆಯಲಿದೆ.

ಲಕ್ಷಾಂತರ ಅಭ್ಯರ್ಥಿಗಳಿಗೆ ಹೊಸ ಆಶಾಕಿರಣ

ಸಂಪುಟ ಸಭೆಯಲ್ಲಿ ಐದು ವರ್ಷ ವಯೋಮಿತಿ ಸಡಿಲಿಕೆ ಕುರಿತ ನಿರ್ಧಾರ ಕೈಗೊಳ್ಳಲಾದರೆ, ರಾಜ್ಯದ ಎಲ್ಲಾ ವರ್ಗಗಳ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಇದು ದೊಡ್ಡ ವರವಾಗಲಿದೆ. ವಯೋಮಿತಿ ಅಡ್ಡಿಯಾಗಿತ್ತು ಎಂಬ ಕಾರಣದಿಂದ ನೇಮಕಾತಿ ಪ್ರಕ್ರಿಯೆಯಿಂದ ಹೊರಗುಳಿಯುವ ಭೀತಿಯಲ್ಲಿ ಇದ್ದ ಅಭ್ಯರ್ಥಿಗಳು ಈ ನಿರ್ಧಾರದಿಂದ ನಿರಾಳರಾಗಲಿದ್ದಾರೆ ಎಂದು ತಿಳಿದುಬಂದಿದೆ.

K.M.Sathish Gowda

Join WhatsApp

Join Now

Facebook

Join Now

Read more

ಸಾವಿನ ಬಲೆ ಹೆಣೆಯುತ್ತಿರುವ ಕೇಬಲ್‌ಗಳು: ವಿದ್ಯುತ್ ಇಲಾಖೆ–ಮಹಾನಗರ ಪಾಲಿಕೆಯ ನಿರ್ಲಕ್ಷ್ಯಕ್ಕೆ ಕೋಟೆ ರಸ್ತೆಯಲ್ಲಿ ಹಸು ಬಲಿ; ನಗರದ ವಿದ್ಯುತ್ ಕಂಬಗಳಲ್ಲೇ ಸಾಕ್ಷಾತ್ ಯಮನ ದರ್ಶನ!

ಸಮಾಜಮುಖಿ ಸೇವೆಯಲ್ಲಿ ಶಿವಮೊಗ್ಗ ಸರ್ವೋದಯ ಮಂಡಳಿ ರಾಜ್ಯಕ್ಕೆ ಮಾದರಿ: ಡಾ. ಎಚ್.ಎಸ್. ಸುರೇಶ್

​ವಿದ್ಯೆಯ ಜೊತೆಗೆ ಸಂಸ್ಕಾರಯುತ ಶಿಕ್ಷಣ ಇಂದಿನ ತುರ್ತು ಅಗತ್ಯ; ಸಿದ್ಧಗಂಗಾ ಶ್ರೀಗಳ ದಾಸೋಹ ಪರಂಪರೆಯೇ ನಮಗೆ ಪ್ರೇರಣೆ: ಸಿ.ಎಸ್. ಷಡಾಕ್ಷರಿ

ಶಿವಮೊಗ್ಗದ ನೀರಾವರಿ ಯೋಜನೆಗಳಿಗೆ ತುರ್ತು ಅನುದಾನ ಬಿಡುಗಡೆ ಮಾಡಿ; ರೈತರ ಹಿತಕ್ಕೆ ಆದ್ಯತೆ ನೀಡಿ: ಸಚಿವ ರಾಮಲಿಂಗಾರೆಡ್ಡಿಗೆ ಸಂಸದ ಬಿ.ವೈ. ರಾಘವೇಂದ್ರ ಒತ್ತಾಯ

‘ಎಂಪಿ, ಎಂಎಲ್‌ಎ ಆಗುವುದಕ್ಕಿಂತ ನೌಕರರ ವಿಶ್ವಾಸ ಗಳಿಸುವುದೇ ದೊಡ್ಡ ಸಾಧನೆ’: ಸಿ.ಎಸ್. ಷಡಾಕ್ಷರಿ ಕಾರ್ಯವೈಖರಿಗೆ ಸಂಸದ ಬಿ.ವೈ. ರಾಘವೇಂದ್ರ ಮೆಚ್ಚುಗೆ

ಜರ್ಮನಿಯಲ್ಲೂ ಶರಣ ಸಂಸ್ಕೃತಿಯ ವೈಭವ: “ವಿದೇಶದಲ್ಲೂ ತಾಯ್ನಾಡಿನ ಸಂಸ್ಕಾರ ಉಳಿಸಿಕೊಳ್ಳುವುದೇ ನಿಜವಾದ ಧರ್ಮನಿಷ್ಠೆ” – ಮ್ಯೂನಿಚ್‌ನಲ್ಲಿ ತರಳಬಾಳು ಶ್ರೀಗಳ ಜಾಗತಿಕ ಕರೆ

Leave a Comment