ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಅಂತರರಾಷ್ಟ್ರೀಯ ವೇದಿಕೆಯಲ್ಲಿ ಅವಮಾನಕರ ನಡೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

On: February 21, 2026 8:45 PM
Follow Us:

ಬೆಂಗಳೂರು: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ಇಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಎಐ ಶೃಂಗಸಭೆ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಖಂಡಿಸಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ಅವರು ಮಾತನಾಡಿ, ಅಂತರರಾಷ್ಟ್ರೀಯ ಮಟ್ಟದ ಎಐ ಶೃಂಗಸಭೆಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ದೇಶದ ಮಾನಹಾನಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದರು. ವಿದೇಶಿ ಅತಿಥಿಗಳ ಸಮ್ಮುಖದಲ್ಲಿ ದೇಶಕ್ಕೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡಿರುವುದು ಖಂಡನೀಯ ಎಂದ ಅವರು, ಯುವ ಕಾಂಗ್ರೆಸ್ಸಿಗರು ತಮ್ಮ ವರ್ತನೆಗೆ ಬೇಷರತ್ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸಿ.ಕೆ. ರಾಮಮೂರ್ತಿ ಅವರು ಮಾತನಾಡಿ, ಎಐ ಶೃಂಗಸಭೆಯಲ್ಲಿ ಸುಮಾರು 30 ರಿಂದ 35 ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಇಂತಹ ಮಹತ್ವದ ವೇದಿಕೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿರುವುದು ಭಾರತದ ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಹೇಳಿದರು. ದೇಶದಲ್ಲಿ ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಇಂತಹ ಘಟನೆಗಳು ವಿಷಾದನೀಯವೆಂದು ಅಭಿಪ್ರಾಯಪಟ್ಟರು.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಧಿಕ್ಕಾರ ಕೂಗಿರುವುದು ಸಹ ಅಸಂಸ್ಕೃತ ವರ್ತನೆಯಾಗಿದೆ ಎಂದು ಟೀಕಿಸಿದ ಅವರು, ಈ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರೂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ಯುವ ಕಾಂಗ್ರೆಸ್ ಕಾರ್ಯಕರ್ತರ ವರ್ತನೆಯನ್ನು ಖಂಡಿಸಿ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕುವ ಎಚ್ಚರಿಕೆಯನ್ನು ಸಹ ನೀಡಿದರು.

ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷವು ಅನೇಕ ಯೋಜನೆಗಳಿಗೆ ತನ್ನ ನಾಯಕರಾದ ನೆಹರು, ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಹೆಸರನ್ನು ನೀಡಿದೆ ಎಂದು ಆಕ್ಷೇಪಿಸಿದರು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಯೋಜನೆಗೂ ತಮ್ಮ ಹೆಸರನ್ನು ನೀಡಿಲ್ಲ ಎಂಬುದನ್ನು ಗಮನಿಸಬೇಕು ಎಂದು ಹೇಳಿದರು. ದೇಶದ ಮಾನವನ್ನು ಹಾನಿಗೊಳಿಸುವಂತೆ ನಡೆದ ಈ ಘಟನೆ ಅತ್ಯಂತ ಖಂಡನೀಯ ಎಂದು ಟೀಕಿಸಿದರು.

ಪ್ರತಿಭಟನೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮುಖಂಡ ಉಮೇಶ್ ಶೆಟ್ಟಿ ಸೇರಿದಂತೆ ಅನೇಕ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Leave a Comment