ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ನ್ಯಾಮತಿ ಸರ್ಕಾರಿ ನೌಕರರ ಸಂಘಕ್ಕೆ ಹೊಸ ನಾಯಕತ್ವ: ಅಧ್ಯಕ್ಷರಾಗಿ ರೂಪ್ಲನಾಯ್ಕ್, ಖಜಾಂಚಿಯಾಗಿ ಸುರೇಶ್, ರಾಜ್ಯಪರಿಷತ್ ಸದಸ್ಯರಾಗಿ ಬಸವರಾಜ್ ಅಯ್ಕೆ

On: February 25, 2026 6:42 PM
Follow Us:

ನ್ಯಾಮತಿ ಸರ್ಕಾರಿ ನೌಕರರ ಸಂಘದಲ್ಲಿ ಉಪಚುನಾವಣೆ: ಮೂರು ಹುದ್ದೆಗಳಿಗೆ ಆಯ್ಕೆ

ನ್ಯಾಮತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನ್ಯಾಮತಿ ಶಾಖೆಯಲ್ಲಿ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷರು, ಖಜಾಂಚಿ ಹಾಗೂ ರಾಜ್ಯಪರಿಷತ್ ಸದಸ್ಯರ ಹುದ್ದೆಗಳಿಗೆ ದಿ. 23-02-2026 ರಂದು ಉಪಚುನಾವಣೆ ನಡೆಯಿತು.

ನ್ಯಾಮತಿ ತಾಲೂಕು ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಈ ಚುನಾವಣಾ ಪ್ರಕ್ರಿಯೆ ನಿಯಮಾನುಸಾರ ಹಾಗೂ ಶಾಂತಿಯುತವಾಗಿ ನೆರವೇರಿತು. ಚುನಾವಣಾ ಅಧಿಕಾರಿಯಾಗಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರುಶುರಾಮಪ್ಪ ಅವರು ಕರ್ತವ್ಯ ನಿರ್ವಹಿಸಿದರು. ಮತದಾರರ ಪಟ್ಟಿಯಲ್ಲಿ ನೋಂದಾಯಿತರಾದ 24 ಮಂದಿ ನೌಕರರು ಹಾಜರಿದ್ದು, ಮೂರು ಹುದ್ದೆಗಳಿಗೂ ಮತ ಚಲಾಯಿಸಿದರು.

ಮತ ಎಣಿಕೆ ಪ್ರಕ್ರಿಯೆಯ ನಂತರ ಪ್ರಕಟವಾದ ಫಲಿತಾಂಶದಲ್ಲಿ ಕೆಳಕಂಡವರು ಆಯ್ಕೆಯಾಗಿದ್ದಾರೆ:

  • ಅಧ್ಯಕ್ಷರು: ರೂಪ್ಲನಾಯ್ಕ್ ಎಸ್.ಆರ್., ಆರೋಗ್ಯ ಇಲಾಖೆ
  • ಖಜಾಂಚಿ: ಸುರೇಶ್ ಹೆಚ್., ಪ್ರಾಥಮಿಕ ಶಿಕ್ಷಣ ಇಲಾಖೆ
  • ರಾಜ್ಯ ಪರಿಷತ್ ಸದಸ್ಯರು: ಬಸವರಾಜ್ ಕೆ.ವಿ., ಪ್ರೌಢ ಶಿಕ್ಷಣ ಇಲಾಖೆ

ಚುನಾವಣಾ ಅಧಿಕಾರಿಗಳು ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದ್ದು, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಸಂಘದ ಅಭಿವೃದ್ಧಿ, ನೌಕರರ ಹಿತಾಸಕ್ತಿ ರಕ್ಷಣೆ ಹಾಗೂ ಬಾಕಿ ಇರುವ ಸಮಸ್ಯೆಗಳ ಪರಿಹಾರಕ್ಕಾಗಿ ನೂತನ ಪದಾಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದರು.

K.M.Sathish Gowda

Join WhatsApp

Join Now

Facebook

Join Now

Leave a Comment